Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭುಟ್ಟೊ ಹತ್ಯೆ ನಡೆಸಿದ್ದು ತಾಲಿಬಾನ್

ಭುಟ್ಟೊ ಹತ್ಯೆ ನಡೆಸಿದ್ದು ತಾಲಿಬಾನ್

ನೂತನ ಪುಸ್ತಕದಲ್ಲಿ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ

ವಾರ್ತಾಭಾರತಿವಾರ್ತಾಭಾರತಿ15 Jan 2018 9:39 PM IST
share
ಭುಟ್ಟೊ ಹತ್ಯೆ ನಡೆಸಿದ್ದು ತಾಲಿಬಾನ್

ಇಸ್ಲಾಮಾಬಾದ್, ಜ. 15: ಪಾಕಿಸ್ತಾನದ ಮಾಜಿ ಪ್ರಧಾನಿ ಬೆನಝೀರ್ ಭುಟ್ಟೊ ಹತ್ಯೆಯ ಜವಾಬ್ದಾರಿಯನ್ನು ಪಾಕಿಸ್ತಾನಿ ತಾಲಿಬಾನ್ ವಹಿಸಿಕೊಂಡಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆಯ ಹಿರಿಯ ನಾಯಕನೊಬ್ಬ ಬರೆದ ಪುಸ್ತಕದಲ್ಲಿ ಅದು ಮೊದಲ ಬಾರಿಗೆ ಸಾವಿನ ಹೊಣೆಯನ್ನು ಹೊತ್ತಿದೆ.

2007 ಡಿಸೆಂಬರ್ 27ರಂದು ರಾವಲ್ಪಿಂಡಿಯಲ್ಲಿ ನಡೆದ ಬಾಂಬ್ ಸ್ಫೋಟವೊಂದರಲ್ಲಿ ಭುಟ್ಟೊ ಸಾವಿಗೀಡಾಗಿದ್ದರು. ಈ ಹತ್ಯೆಯನ್ನು ಪಾಕಿಸ್ತಾನಿ ತಾಲಿಬಾನ್ ನಡೆಸಿದೆ ಎಂಬುದಾಗಿ ಆಗಿನ ಪರ್ವೇಝ್ ಮುಶರ್ರಫ್ ನೇತೃತ್ವದ ಸೇನಾಡಳಿತ ಆರೋಪಿಸಿತ್ತು. ಆದಾಗ್ಯೂ, ಈ ಭಯೋತ್ಪಾದಕ ಸಂಘಟನೆಯಾಗಲಿ, ಅದರ ನಾಯಕರಾಗಲಿ ಈವರೆಗೆ ಈ ಬಗ್ಗೆ ಏನೂ ಹೇಳಿಲ್ಲ.

ಭುಟ್ಟೊ ಮೇಲೆ ದಾಳಿ ನಡೆಸುವ ಹೊಣೆಯನ್ನು ಆತ್ಮಹತ್ಯಾ ಬಾಂಬರ್‌ಗಳಾದ ಬಿಲಾಲ್ ಯಾನೆ ಸಯೀದ್ ಮತ್ತು ಇಕ್ರಾಮುಲ್ಲಾ ಎಂಬವರಿಗೆ ವಹಿಸಲಾಗಿತ್ತು ಎಂಬುದಾಗಿ ತಾಲಿಬಾನ್ ನಾಯಕ ಅಬು ಮನ್ಸೂರ್ ಆಸಿಮ್ ಮುಫ್ತಿ ನೂರ್ ವಾಲಿ ಬರೆದ ಉರ್ದು ಪುಸ್ತಕ ‘ಇಂಕಿಲಾಬ್ ಮೆಹ್ಸೂದ್ ಸೌತ್ ವಝೀರಿಸ್ತಾನ್-ಫ್ರಮ್ ಬ್ರಿಟಿಶ್ ರಾಜ್ ಟು ಅಮೆರಿಕನ್ ಇಂಪೀರಿಯಲಿಸಮ್’ ಹೇಳಿಕೊಂಡಿದೆ.

ಪುಸ್ತಕವನ್ನು ಅಫ್ಘಾನಿಸ್ತಾನದ ಪಕ್ಟಿಕ ಪ್ರಾಂತದ ಬರ್ಮಲ್ ಎಂಬಲ್ಲಿರುವ ಮಸೀದ್ ಕಂಪ್ಯೂಟರ್ ಸೆಂಟರ್‌ನಲ್ಲಿ 2017 ನವೆಂಬರ್ 30ರಂದು ಬಿಡುಗಡೆ ಮಾಡಲಾಗಿದೆ.

‘‘ಬಾಂಬರ್ ಬಿಲಾಲ್ ಮೊದಲು ಮೆರವಣಿಗೆಯಲ್ಲಿ ಸಾಗುತ್ತಿದ್ದ ಬೇನಝೀರ್ ಭುಟ್ಟೊರತ್ತ ಪಿಸ್ತೂಲಿನಿಂದ ಗುಂಡು ಹಾರಿಸಿದನು. ಗುಂಡು ಅವರ ಕುತ್ತಿಗೆಗೆ ಬಡಿಯಿತು. ಬಳಿಕ ಆತ ತನ್ನ ಸ್ಫೋಟಕ ತುಂಬಿದ್ದ ಜಾಕೆಟನ್ನು ಸ್ಫೋಟಿಸಿದನು’’ ಎಂದು ಪುಸ್ತಕ ಹೇಳಿದೆ ಎಂದು ‘ದ ಡೇಲಿ ಟೈಮ್ಸ್’ ಪತ್ರಿಕೆ ವರದಿ ಮಾಡಿದೆ.

ಹತ್ಯೆಯ ಬೆನ್ನಿಗೇ, ಈ ಇಬ್ಬರು ತಾಲಿಬಾನ್ ಸದಸ್ಯರು ಹತ್ಯೆಯ ಬಗ್ಗೆ ಚರ್ಚೆ ನಡೆಸುತ್ತಿರುವ ಧ್ವನಿಮುದ್ರಿಕೆಯೊಂದನ್ನು ಮುಶರ್ರಫ್ ಸರಕಾರ ಬಿಡುಗಡೆ ಮಾಡಿತ್ತು.

ಹಲವಾರು ತಾಲಿಬಾನ್ ನಾಯಕರ ಚಿತ್ರಗಳನ್ನು ಒಳಗೊಂಡ 588 ಪುಟಗಳ ಪುಸ್ತಕವನ್ನು ರವಿವಾರ ಇಂಟರ್‌ನೆಟ್‌ಗೆ ಹಾಕಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X