Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನಸ್ಸಿನ ವಿಕಾಸಕ್ಕೆ ಸಾಹಿತ್ಯ ಅಗತ್ಯ:...

ಮನಸ್ಸಿನ ವಿಕಾಸಕ್ಕೆ ಸಾಹಿತ್ಯ ಅಗತ್ಯ: ವೈದೇಹಿ

ಟಿ.ಪಿ.ಅಶೋಕರ ‘ಕೃತಿ ಜಗತ್ತು’ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ16 Jan 2018 8:34 PM IST
share
ಮನಸ್ಸಿನ ವಿಕಾಸಕ್ಕೆ ಸಾಹಿತ್ಯ ಅಗತ್ಯ: ವೈದೇಹಿ

ಉಡುಪಿ, ಜ.16: ಮನಸ್ಸಿನ ವಿಕಾಸಕ್ಕೆ ಸಾಹಿತ್ಯ ಅಗತ್ಯ.ಆಧುನಿಕ ಭಾರತದ ಪರಿಕಲ್ಪನೆ ಹೊಂದಿರುವ ‘ಕೃತಿ ಜಗತ್ತು’ ಓದಿನ ಹಂಬಲವನ್ನು ಹೆಚ್ಚಿಸುವಂತಹ ಪುಸ್ತಕವಾಗಿದೆ ಎಂದು ಕನ್ನಡದ ಖ್ಯಾತ ಸಾಹಿತಿ ವೈದೇಹಿ ಹೇಳಿದ್ದಾರೆ.

ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ, ವಿಮರ್ಶಕ ಪ್ರೊ.ಟಿ.ಪಿ.ಅಶೋಕ್ ಅವರ ‘ಕೃತಿ ಜಗತ್ತು’ ಪುಸ್ತಕವನ್ನು ಬಿಡುಗಡೆ ಗೊಳಿಸಿ ಅವರು ಮಾತನಾಡುತಿದ್ದರು. ಮಣಿಪಾಲ ಯುನಿವರ್ಸಲ್ ಪ್ರೆಸ್‌ನ 119ನೇ ಪುಸ್ತಕವಾಗಿ ಈ ಕೃತಿ ಪ್ರಕಟಗೊಂಡಿದೆ.

ಜಗತ್ತಿನ ಪ್ರಮುಖ ಕೃತಿಗಳನ್ನು ಅವಲೋಕಿಸಿ, ಲೋಕದ ಸಾಹಿತ್ಯವನ್ನು ಕನ್ನಡಕ್ಕೆ ಹೋಲಿಸಿದವರು ವಿಮರ್ಶಕರಾಗಿರುವ ಟಿ.ಪಿ ಆಶೋಕ್ ಎಂದ ವೈದೇಹಿ, ಸಮಾಜದ ಕಷ್ಟ, ಕಳಕಳಿ, ದೌರ್ಜನ್ಯದ ಚಿತ್ರಗಳನ್ನು ‘ಕೃತಿ ಜಗತ್ತು’ ಪುಸ್ತಕ ಓದುಗರ ಮುಂದಿಡುತ್ತದೆ ಎಂದರು.

ಜಗತ್ತಿನ ಪ್ರಮುಖ ಕೃತಿಗಳನ್ನು ಅವಲೋಕಿಸಿ, ಲೋಕದ ಸಾಹಿತ್ಯವನ್ನು ಕನ್ನಡಕ್ಕೆ ಹೋಲಿಸಿದವರು ವಿಮರ್ಶಕರಾಗಿರುವ ಟಿ.ಪಿ ಆಶೋಕ್ ಎಂದ ವೈದೇಹಿ, ಸಮಾಜದ ಕಷ್ಟ, ಕಳಕಳಿ, ದೌರ್ಜನ್ಯದ ಚಿತ್ರಗಳನ್ನು ‘ಕೃತಿ ಜಗತ್ತು’ ಪುಸ್ತಕ ಓದುಗರ ಮುಂದಿಡುತ್ತದೆ ಎಂದರು. ಮನುಷ್ಯ ಸಮಾಜಕ್ಕೆ ತೆರೆದುಕೊಳ್ಳಲು ಸಾಹಿತ್ಯ ಕಮ್ಮಟ, ಕಾರ್ಯಕ್ರಮಗಳು ಪ್ರೇರಕ. ಇವುಗಳಲ್ಲಿ ಭಾಗವಹಿಸುವುದರಿಂದ ಸಮಾಜದ ಜನಸಾಮಾನ್ಯರ ಕಷ್ಟಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯ. ಹೀಗಾಗಿ ವಿದ್ಯಾರ್ಥಿಗಳು ಇವುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಸಮಾಜ ಸುಧಾರಣೆಗೆ ಸಾಹಿತ್ಯ ಪ್ರಮುಖ ಅಂಗವೆಂದು ವಿದ್ಯಾರ್ಥಿಗಳು ತಿಳಿಯಬೇಕು ಎಂದು ವೈದೇಹಿ ನುಡಿದರು.

ಕೃತಿ ಪರಿಚಯಿಸಿ ಮಾತನಾಡಿದ ಖ್ಯಾತ ವಿಮರ್ಶಕ, ಚಿಂತಕ ಜಿ. ರಾಜಶೇಖರ್, ಅಶೋಕ್‌ಗೆ ಓದು ಜಗತ್ತನ್ನು ಗ್ರಹಿಸುವ ಆರನೇ ಇಂದ್ರಿಯ ಎಂದರು. ಅಶೋಕ್ ಮಟ್ಟಿಗೆ ಆಧುನಿಕ ಭಾರತ ವೈವಿಧ್ಯಮಯ, ಬಹು ಸಾಧ್ಯತೆಗಳ ಜನಸಮೂಹದ ನಾಗರಿಕತೆಯಾಗಿದೆ. ಆಧುನಿಕ ಭಾರತದ ಸ್ಥಿತಿ, ಸಾಧ್ಯತೆ ಹಾಗೂ ಸಮಸ್ಯೆಗಳನ್ನು ಈ ಕೃತಿ ಬಿಂಬಿಸುತ್ತದೆ ಎಂದರು.

ಮಾಹೆ ಡೀಮ್ಡ್ ವಿವಿಯ ಕುಲಪತಿ ಡಾ.ಎಚ್.ವಿನೋದ್ ಭಟ್ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ನಾಗರಾಜ ರಾವ್ ಅವರು ಗೆಳೆಯ ಟಿ.ಪಿ.ಅಶೋಕ್ ವ್ಯಕ್ತಿ, ಸಾಧನೆಯ ಕುರಿತು ಅಭಿನಂದನಾ ಮಾತುಗಳನಾಡಿದರು.

ಇದೇ ಸಂದರ್ಭದಲ್ಲಿ ತನ್ನ ‘ಕಥನ ಭಾರತಿ’ ಕೃತಿಗೆ 2017ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ಪ್ರೊ.ಅಶೋಕ್ ಅವರನ್ನು ಮಣಿಪಾಲ ಯುನಿವರ್ಸಲ್ ಪ್ರೆಸ್ ವತಿಯಿಂದ ಸನ್ಮಾನಿಸಲಾಯಿತು.

ಸನ್ಮಾನಕ್ಕೆ ಉತ್ತರಿಸಿದ ಅಶೋಕ್ ಮಾತನಾಡಿ, ಇದು ತನ್ನ ಕಥನ ಭಾರತದ ಮುಂದುವರಿದ ಭಾಗವಾಗಿದೆ. ಸಾಹಿತ್ಯದ ಓದಿಗೆ ಭಾಷೆ ಎಂದೂ ತೊಡಕಾಗ ಬಾರದು. ಭಾರತದಲ್ಲಿ ಒಂದೇ ಭಾಷೆ ತಿಳಿದವರು ಯಾರೂ ಇರಲಿಕ್ಕಿಲ್ಲ. ಇಲ್ಲಿ ಪ್ರತಿಯೊಬ್ಬನಿಗೂ ಕನಿಷ್ಠ 2-3 ಭಾಷೆಗಳ ಅರಿವಿರುತ್ತದೆ. ಆದುದರಿಂದ ನಾವು ನಮ್ಮ ಮನಸ್ಸಿನ ಕಿಟಿಕಿ-ಬಾಗಿಲುಗಳನ್ನು ಸದಾ ತೆರೆದಿರಬೇಕು ಎಂದರು.
ಮಣಿಪಾಲ ಯುನಿವರ್ಸಲ್ ಪ್ರೆಸ್‌ನ ಡಾ.ನೀತಾ ಇನಾಂದಾರ್ ಸ್ವಾಗತಿಸಿದರೆ, ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X