Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ರೇಲ್ ಪ್ರಧಾನಿ ಮೋದಿಯವರಿಗೆ...

ಇಸ್ರೇಲ್ ಪ್ರಧಾನಿ ಮೋದಿಯವರಿಗೆ ನೀಡಲಿದ್ದಾರೆ ‘ವಿಶೇಷ ಜೀಪ್’ ಉಡುಗೊರೆ!

ಇದರ ವಿಶೇಷತೆಯೇನು? ಇಲ್ಲಿದೆ ವಿವರ

ವಾರ್ತಾಭಾರತಿವಾರ್ತಾಭಾರತಿ16 Jan 2018 9:32 PM IST
share
ಇಸ್ರೇಲ್ ಪ್ರಧಾನಿ ಮೋದಿಯವರಿಗೆ ನೀಡಲಿದ್ದಾರೆ ‘ವಿಶೇಷ ಜೀಪ್’ ಉಡುಗೊರೆ!

ಹೊಸದಿಲ್ಲಿ,ಜ.16: ಭಾರತಕ್ಕೆ ಭೇಟಿ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಮುದ್ರದ ನೀರಿನಲ್ಲಿಯ ಉಪ್ಪಿನಂಶವನ್ನು ತೆಗೆದು ಅದನ್ನು ಕುಡಿಯಲು ಯೋಗ್ಯವಾಗಿಸುವ ‘ಡಿಸಲೈನೈಜೇಷನ್ ಜೀಪ್’ ಗಾಲ್ ಮೊಬೈಲ್ ಅನ್ನು ಉಡುಗೊರೆಯಾಗಿ ನೀಡಲಿದ್ದಾರೆ. ಕಳೆದ ವರ್ಷದ ಜುಲೈನಲ್ಲಿ ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದ ಸಂದರ್ಭ ಮೆಡಿಟರೇನಿಯನ್ ಸಮುದ್ರದ ಓಲ್ಗಾ ಬೀಚ್‌ನಲ್ಲಿ ಉಭಯ ನಾಯಕರು ಸವಾರಿ ಮಾಡಿದ್ದ ಈ ಜೀಪ್ ಈಗಾಗಲೇ ದಿಲ್ಲಿಯನ್ನು ತಲುಪಿದ್ದು, ಅದೀಗ ಗುಜರಾತಿನ ಭುಜ್‌ಗೆ ತೆರಳುವ ಮಾರ್ಗದಲ್ಲಿದೆ ಎಂದು ಮೂಲಗಳು ದೃಢಪಡಿಸಿದವು.

ಜ.17ರಂದು ಭುಜ್‌ನಲ್ಲಿ ಸಮುದ್ರದ ನೀರಿನಿಂದ ಉಪ್ಪಿನಂಶವನ್ನು ನಿವಾರಿಸುವ ಪ್ರಾತ್ಯಕ್ಷಿಕೆಯು ನಡೆಯಲಿದ್ದು, ಉಭಯ ಪ್ರಧಾನಿಗಳು ಐಕ್ರಿಯೇಟ್ ಸೆಂಟರ್‌ನಿಂದ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅದನ್ನು ವೀಕ್ಷಿಸಲಿದ್ದಾರೆ.

ಜೀಪ್ ನಿರ್ಮಾಣಕ್ಕೆ 3,90,000 ಶೆಕೆಲ್(1,11,000 ಅಮೆರಿಕನ್ ಡಾಲರ್) ವೆಚ್ಚವಾಗಿದೆ ಎನ್ನಲಾಗಿದೆ. ಗಾಲ್-ಮೊಬೈಲ್ ಅತ್ಯುತ್ತಮ ಗುಣಮಟ್ಟದ ಕುಡಿಯುವ ನೀರಿನ ಉತ್ಪಾದನೆಗಾಗಿ ರೂಪಿಸಲಾಗಿರುವ ಸ್ವತಂತ್ರ, ಸಮಗ್ರ ಜಲ ಶುದ್ಧೀಕರಣ ವಾಹನವಾಗಿದೆ. ಪ್ರವಾಹ ಮತ್ತು ಭೂಕಂಪಗಳಂತಹ ನೈಸರ್ಗಿಕ ವಿಕೋಪಗಳು, ದುರ್ಗಮ ಪ್ರದೇಶದಲ್ಲಿ ಮಿಲಿಟರಿ ಕಾರ್ಯಾಚರಣೆ ಸಂದರ್ಭಗಳಲ್ಲಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರನ್ನು ಒದಗಿಸಲು ಅದು ಉಪಯುಕ್ತವಾಗಲಿದೆ. ಅದು ದಿನವೊಂದಕ್ಕೆ 20,000 ಲೀ.ನಷ್ಟು ಸಮುದ್ರದ ನೀರನ್ನು ಮತ್ತು 80,000 ಲೀ.ನಷ್ಟು ನದಿಗಳ ರಾಡಿ ಬೆರೆತ ಮಲಿನ ನೀರನ್ನು ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡದಷ್ಟು ಶುದ್ಧ ನೀರನ್ನಾಗಿ ಪರಿವರ್ತಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X