Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಂಸಾಹಾರ ಸೇವಿಸುವರು ಪ್ರತ್ಯೇಕ ತಟ್ಟೆ...

ಮಾಂಸಾಹಾರ ಸೇವಿಸುವರು ಪ್ರತ್ಯೇಕ ತಟ್ಟೆ ಬಳಸಲು ಸೂಚನೆ: ಐಐಟಿ-ಬಾಂಬೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ16 Jan 2018 9:42 PM IST
share
ಮಾಂಸಾಹಾರ ಸೇವಿಸುವರು ಪ್ರತ್ಯೇಕ ತಟ್ಟೆ ಬಳಸಲು ಸೂಚನೆ: ಐಐಟಿ-ಬಾಂಬೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಮುಂಬೈ, ಜ.16: ಭಾರತೀಯ ತಾಂತ್ರಿಕ ಸಂಸ್ಥೆ-ಬಾಂಬೆ (ಐಐಟಿ-ಬಿ)ಯ ಒಂದು ವಸತಿ ನಿಲಯದ ವಿದ್ಯಾರ್ಥಿಗಳಿಗೆ ಇಮೇಲ್ ಒಂದು ಬಂದಿದ್ದು ಅದರಲ್ಲಿ ಮಾಂಸಾಹಾರ ಸೇವಿಸುವ ವಿದ್ಯಾರ್ಥಿಗಳು ಪ್ರತ್ಯೇಕ ತಟ್ಟೆಗಳನ್ನು ಬಳಸುವಂತೆ ಮನವಿ ಮಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಸಸ್ಯಾಹಾರ ಸೇವಿಸುವ ಹಲವು ವಿದ್ಯಾರ್ಥಿಗಳಿಂದ ಈ ಬಗ್ಗೆ ದೂರುಗಳು ಬಂದಿದೆ. ಮಾಂಸಾಹಾರ ಸೇವಿಸುವ ವಿದ್ಯಾರ್ಥಿಗಳು ಟ್ರೇ ಮಾದರಿಯ ತಟ್ಟೆಗಳನ್ನೇ ಬಳಸಬೇಕು. ಅವುಗಳು ವಿಶೇಷವಾಗಿ ಮಾಂಸಾಹಾರಕ್ಕೆಂದೇ ತಯಾರಿಸಲ್ಪಟ್ಟಿರುವ ತಟ್ಟೆಗಳಾಗಿವೆ. ಹಾಗಾಗಿ ರಾತ್ರಿ ಭೋಜನದ ಸಮಯದಲ್ಲಿ ಮಾಂಸಾಹಾರ ಸೇವಿಸುವವರು ಇಂಥ ತಟ್ಟೆಗಳನ್ನೇ ಬಳಸಬೇಕು ಎಂದು ಮನವಿ ಮಾಡುತ್ತಿದ್ದೇವೆ ಎಂದು ಇಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಪತ್ರಿಕಾ ವರದಿ ತಿಳಿಸಿದೆ.

ಈ ಇಮೇಲ್‌ಅನ್ನು ಹಾಸ್ಟೆಲ್ 11ರ ಮೆಸ್ ಮಂಡಳಿ ಕಳುಹಿಸಿದೆ ಎಂದು ವರದಿ ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೆಸ್ ಮಂಡಳಿ, ಈ ಇಮೇಲ್ ಸದ್ಯ ಇರುವ ನಿಯಮವನ್ನು ನೆನಪಿಸಲಷ್ಟೇ ಆಗಿದೆ. ಹಲವು ವರ್ಷಗಳಿಂದ ಮಾಂಸಾಹಾರವನ್ನು ಪ್ರತ್ಯೇಕ ತಟ್ಟೆಗಳಲ್ಲೇ ನೀಡಲಾಗುತ್ತಿದೆ. ಆ ನಿಯಮವನ್ನು ಪಾಲಿಸುವಂತೆ ನಾವು ವಿದ್ಯಾರ್ಥಿಗಳಿಗೆ ಸೂಚಿಸಿದ್ದೇವೆ ಎಂದು ತಿಳಿಸಿದೆ. ಈ ಬಗ್ಗೆ ಕೆಲವು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶವನ್ನು ವ್ಯಕ್ತಪಡಿಸಿದ್ದು ಇಂದು ಮಾಂಸಾಹಾರ ಸೇವನೆಗೆ ಪ್ರತ್ಯೇಕ ತಟ್ಟೆ ಪಡೆಯಲು ಸೂಚಿಸುತ್ತಾರೆ. ಮುಂದೆ ವಿವಿಧ ಜಾತಿ ಮತ್ತು ಧರ್ಮದ ಆಧಾರದಲ್ಲಿ ಪ್ರತ್ಯೇಕ ತಟ್ಟೆಗಳನ್ನು ನೀಡಬಹುದು ಎಂದು ಕಿಡಿಕಾರಿದ್ದಾರೆ. ಎಲ್ಲಾ ವಸತಿ ನಿಲಯಗಳಲ್ಲೂ ಸಸ್ಯಾಹಾರ ಮತ್ತು ಮಾಂಸಾಹಾರಕ್ಕೆ ಪ್ರತ್ಯೇಕ ತಟ್ಟೆಗಳನ್ನು ನೀಡಲಾಗುತ್ತಿದೆ. ಹಾಗಾಗಿ ಮೊದಲನೆಯದಾಗಿ ಈ ಇಮೇಲ್‌ಅನ್ನು ಕಳುಹಿಸಿದ ಔಚಿತ್ಯವಾದರೂ ಏನು ಎಂಬುದು ಅರ್ಥವಾಗುತ್ತಿಲ್ಲ. ಇನ್ನೂ ದುರದೃಷ್ಟವೆಂದರೆ ಬಹಳಷ್ಟು ಜನರು ಇದನ್ನು ತಪ್ಪಾಗಿ ಅರ್ಥೈಸಿಕೊಂಡಿರುವುದು ಎಂದು ಐಐಟಿ-ಬಾಂಬೆಯ ವಿದ್ಯಾರ್ಥಿ ವ್ಯವಹಾರಗಳ ಮುಖ್ಯಸ್ಥರಾಗಿರುವ ಸೌಮ್ಯಾ ಮುಖರ್ಜಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X