Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಳ್ಳೇಗಾಲ: ಬಿಎಸ್‍ಪಿ ವತಿಯಿಂದ...

ಕೊಳ್ಳೇಗಾಲ: ಬಿಎಸ್‍ಪಿ ವತಿಯಿಂದ ಜನಜಾಗೃತಿ ರ್ಯಾಲಿ

ವಾರ್ತಾಭಾರತಿವಾರ್ತಾಭಾರತಿ16 Jan 2018 11:06 PM IST
share
ಕೊಳ್ಳೇಗಾಲ: ಬಿಎಸ್‍ಪಿ ವತಿಯಿಂದ ಜನಜಾಗೃತಿ ರ್ಯಾಲಿ

ಕೊಳ್ಳೇಗಾಲ,ಜ.16: ಪ್ರಜೆಗಳಿಂದ ಸೃಷ್ಟಿಯಾದ ಸರ್ಕಾರಗಳು ಪ್ರಜೆಗಳಿಗಾಗಿ ಕರ್ತವ್ಯ  ಮಾಡದೇ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಇದನ್ನು ಜನರಿಗೆ ಮನವರಿಕೆ ಮಾಡುವ ಉದ್ದೇಶದಿಂದ ಜನಜಾಗೃತಿ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಎನ್.ಮಹೇಶ್ ಹೇಳಿದರು.

ಪಟ್ಟಣದ ಅಚ್ಗಾಲ್ ವೃತ್ತದಲ್ಲಿ ಬಿಎಸ್‍ಪಿ ವತಿಯಿಂದ ಜ.15 ರಿಂದ ಜ.26 ರವರಿಗೆ ಹಮ್ಮಿಕೊಂಡಿದ್ದ ಪ್ರಜಾಪ್ರಭುತ್ವ ಉಳಿಸುವ ಕಡೆಗೆ ಆನೆಯ ನಡಿಗೆ ರಾಜ್ಯಾಧ್ಯಂತ ಜನಜಾಗೃತಿ ಕಾರ್ಯಕ್ರಮದ ರ್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. 

ಒಂದು ವರ್ಷಕ್ಕೆ 10 ಲಕ್ಷ ಕೋಟಿ ಆಹಾರ ಪದಾರ್ಥಗಳನ್ನು ಬೆಳೆದು ದೇಶಕ್ಕೆ ನೀಡುವ ರೈತರ ಕೃಷಿ ಸಾಲ ಮನ್ನಾ ಮಾಡಿದರೆ ಬ್ಯಾಂಕ್‍ಗಳು ದಿವಾಳಿಯಾಗುತ್ತದೆಂದು ಹೇಳುವ ಕೇಂದ್ರ ಸರ್ಕಾರ, ಶ್ರೀಮಂತ ಬಂಡವಾಳ ಶಾಯಿಗಳು, ಕೈಗಾರಿಕಾ ಉದ್ಯಮಿಗಳಿಗೆ ಸಬ್ಸಿಡಿ ರೂಪದಲ್ಲಿ ಹಣವನ್ನು ನೀಡುತ್ತಿರುವುದು ದಿವಾಳಿಯಾಗುವುದಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೇಸ್ ಸರ್ಕಾರ ಚುನಾವಣೆಗೂ ಮುನ್ನ ಹೇಳಿದ ಭರವಸೆಗಳನ್ನು ಸಂರ್ಪೂಣವಾಗಿ ಈಡೇರಿಸದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಅಪೌಷ್ಟಿಕತೆಯಿಂದ, ಬಡತನದಿಂದ ಜನರು ಸಾಯುತ್ತಿದ್ದಾರೆ. ಸರ್ಕಾರ ನೀಡುವಂತಹ ಅನ್ನಭಾಗ್ಯ, ಕ್ಷೀರಭಾಗ್ಯ, ಮೊಟ್ಟೆಭಾಗ್ಯ ನೀಡಿದರೂ ಅಪೌಷ್ಟಿಕತೆಯಿಂದ ಪ್ರತಿನಿತ್ಯ ಸಾಯುತ್ತಿರುವವರನ್ನು ತಡೆಯಲು ಆಗುತ್ತಿಲ್ಲವೆಂದು ಆರೋಪಿಸಿದರು.

ಭಾರತೀಯ ಜನತಾ ಪಾರ್ಟಿಯವರು ಪರಿವರ್ತನಾ ರ್ಯಾಲಿ ಮಾಡುವುದಾಗಿ ಧರ್ಮ, ಜಾತಿಗಳನ್ನು ಎತ್ತಿಕಟ್ಟಿ ಕೋಮುಗಲಭೆಯನ್ನು ಸೃಷ್ಟಿಸುತ್ತಿದ್ದಾರೆ. ಕಾಂಗ್ರೇಸ್ ಪಕ್ಷದವರು ಸಾಧನಾ ಸಮಾವೇಶ ಮಾಡುತ್ತಾ ಬಡವರನ್ನು ಬಡವರಾಗಿಯೇ ಉಳಿಸಿದ್ದಾರೆ. ಪ್ರಜಾಪ್ರಭುತ್ವವೇ ಕೆಟ್ಟು ಹೋಗುತ್ತಿದೆ. ಜನರಿಗೆ ಮೋಸ, ದ್ರೋಹ ಮಾಡುವವರಿಗೆ ಬುದ್ದಿ ಕಲಿಸಬೇಕಾದರೆ ಪ್ರಜಾಪ್ರಭುತ್ವವನ್ನು ಉಳಿವಿಗಾಗಿ ಈ ಬಾರಿ ಒಂದು ಅವಕಾಶವನ್ನು ಬಹುಜನ ಸಮಾಜ ಪಾರ್ಟಿಗೆ ನೀಡಬೇಕೆಂದು ಕೇಳಿಕೊಳ್ಳುವ ಸಲುವಾಗಿ ರಾಜ್ಯಾದ್ಯಂತಹ ಜನಜಾಗೃತಿ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಇದೇ ತಿಂಗಳು 26 ರಂದು ಮೈಸೂರಿನಲ್ಲಿ ಬೃಹತ್ ಸಮಾವೇಶನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ರ್ಯಾಲಿಯಲ್ಲಿ ಬಿಎಸ್‍ಪಿ ಜಿಲ್ಲಾಧ್ಯಕ್ಷ ಬಾಗಲಿರೇವಣ್ಣ, ಜಿಲ್ಲಾ ಉಪಾಧ್ಯಕ್ಷ ಸೋಮಣ್ಣ ಉಪ್ಪಾರ್,  ನಗರಸಭೆ ಸದಸ್ಯರಾದ ರಾಮಕೃಷ್ಣ, ರಂಗಸ್ವಾಮಿ, ಮುಖಂಡರುಗಳಾದ ಜಗದೀಶ್, ಕೆಂಪನಪಾಳ್ಯ ಸಿದ್ದರಾಜು, ವೀರಶೆಟ್ಟಿ, ಮರಳ್ಳಿ ಮಾದಪ್ಪ, ಶಿವಮೂರ್ತಿ, ರಾಜೇಂದ್ರ ವಕೀಲ, ಪಂಚಾಕ್ಷರಿ, ನಾಗೇಂದ್ರ ಅರಕಲವಾಡಿ, ರುದ್ರಸ್ವಾಮಿ, ಇನಾಯತ್‍ಉಲ್ಲಾ, ಜಕಾವುಲ್ಲಾ, ರಮೇಶ್ ದೇವಾಂಗ, ಮತೀಶ್ ದೇವಾಂಗ, ರಾಚಪ್ಪ, ಚೌಡಯ್ಯ, ನಾಗರಾಜು, ರಾಜು ಶಂಕನಪುರ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X