Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ...

ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬೆಸ್ಟ್ ಮ್ಯೂಸಿಕಲ್ ವೀಡಿಯೋ ಪ್ರಶಸ್ತಿ: ಸಿ.ಎಸ್. ಜಯಪ್ರಕಾಶ್

ವಾರ್ತಾಭಾರತಿವಾರ್ತಾಭಾರತಿ16 Jan 2018 11:24 PM IST
share
ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬೆಸ್ಟ್ ಮ್ಯೂಸಿಕಲ್ ವೀಡಿಯೋ ಪ್ರಶಸ್ತಿ: ಸಿ.ಎಸ್. ಜಯಪ್ರಕಾಶ್

ಹಾಸನ,ಜ.16: ಹಾಸನದ ಯುವಕರಿಂದ ತಯಾರಿಸಿದ ತುಮ್ ಜಹಾ ಭಿ ರಹೋ ಹಿಂದಿ ಮ್ಯೂಸಿಕಲ್‍ಗೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬೆಸ್ಟ್ ಮ್ಯೂಸಿಕಲ್ ವೀಡಿಯೋ ಪ್ರಶಸ್ತಿ ಲಭಿಸಿದೆ ಎಂದು ಪರಿಕಲ್ಪನೆ ಹಾಗೂ ನಿರ್ದೇಶನ ಮಾಡಿದ  ಸಿ.ಎಸ್. ಜಯಪ್ರಕಾಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತುಮ್ ಜಹಾ ಭಿ ರಹೋ ಹಿಂದಿ ಮ್ಯೂಸಿಕಲ್ ವೀಡಿಯೋವನ್ನು ಶೇಕಡ 80 ಭಾಗ ಹಾಸನದಲ್ಲೆ ಚಿತ್ರಿಕರಿಸಲಾಗಿದೆ. ಇದೊಂದು ದೇಶಭಕ್ತಿ ಬಿಂಬಿಸುವ ಹಾಗೂ ನಾವು ನಮ್ಮ ದೇಶದ ರೈತರು ಹಾಗೂ ಸೈನಿಕರಿಗೆ ಹೃದಯ ಪೂರ್ವಕವಾಗಿ ಅರ್ಪಿಸಲಾಗಿದೆ ಎಂದರು.

2017 ಅಕ್ಟೋಬರ್ 2ರ ಗಾಂಧಿಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ ಹುಟ್ಟು ಹಬ್ಬದ ಅಂಗವಾಗಿ ಬಿಡುಗಡೆ ಮಾಡಲಾಯಿತು. ಚಿತ್ರಕಲೆಗಾರ ಬಿ.ಎಸ್. ದೇಸಾಯಿ ಅವರು ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಬೆನ್ನಲುಬಾಗಿ ನಿಂತವರು ಹಾಸನದ ರೋಟರಿ ಹಾಗೂ ರೋಟರಾಕ್ಸ್ ಕ್ಲಬ್ ಆಫ್ ಹೊಯ್ಸಳ. ನಮ್ಮ ಪ್ರಯತ್ನಕ್ಕೆ ಪ್ರಸಿದ್ಧ ಆಡಿಯೋ ಕಂಪನಿ ಆನಂದ್ ಆಡಿಯೋ ಕೂಡ ಸಹಕರಿಸಿದೆ ಎಂದು ಹೇಳಿದರು. 

2017 ಡಿಸೆಂಬರ್ 10 ರಂದು ನಡೆದ 6ನೇ ಮುಂಬಯಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಮ್ಮ ಮ್ಯೂಸಿಕಲ್ ವೀಡಿಯೋಗೆ ಪ್ರಶಸ್ತಿ ಲಭಿಸಿತು. ಈ ಮ್ಯೂಸಿಕಲ್ ವೀಡಿಯೋದ ಸಂಗೀತ ಹಾಗೂ ಸಾಹಿತ್ಯವನ್ನು ಶಕೀಲ್ ಅಹಮದ್ ನಿರ್ವಹಿಸಿದರು. ಛಾಯಾಗ್ರಹಣ ಹಾಗೂ ಸಂಕಲನವನ್ನು ಎನ್. ಸುಹಾಸ್, ಕಲಾ ನಿರ್ದೇಶನವನ್ನು ಪ್ರಶಾಂತ್ ಆಚಾರ್ಯ, ಮುಖ್ಯ ಪಾತ್ರದಲ್ಲಿ ಅನೂಪ್, ನಿಶ್ಚಲ್ ದಂಬೆಕೋಡಿ ಮಾಡಿರುವುದಾಗಿ ಹೇಳಿದರು.

ಮ್ಯೂಸಿಕಲ್ ವೀಡಿಯೋದ ಸಂಗೀತ ಹಾಗೂ ಸಾಹಿತ್ಯವನ್ನು ಶಕೀಲ್ ಅಹಮದ್ ಮಾತನಾಡುತ್ತಾ, 2008ರಲ್ಲಿ ನಾನು ಸಾಹಿತ್ಯ ಬರೆದಿದ್ದೆನು. ಕಳೆದ ಒಂದು ವರ್ಷದಿಂದ ಈ ಮ್ಯೂಸಿಕಲ್ ನಿರ್ಮಿಸಲು ಶ್ರಮಪಟ್ಟಿದ್ದೇವೆ. ಪ್ರತಿ ವರ್ಷ ಇಂತಹದೊಂದನ್ನು ನಿರ್ಮಿಸಲು ನಮ್ಮ ತಂಡ ಸಜ್ಜಾಗಿರುತ್ತದೆ ಎಂದು ಹೇಳಿದರು. ಮುಂಬೈನಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿಗಳಿಸುವ ಮೂಲಕ ಇದು 3ನೇ ಬಾರಿ ಪಡೆಯುತ್ತಿರುವ ಪ್ರಶಸ್ತಿ ಆಗಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ಮುಂದೆ ಶಿವರಾಂ ಕಾರಂತರ ಯಕ್ಷಗಾನವುಳ್ಳ ಚೌಕಿ ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಹೇಳಿದರು.

ತುಮ್ ಜಹಾ ಭಿ ರಹೋ ಹಿಂದಿ ಮ್ಯೂಸಿಕಲ್‍ಗೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬೆಸ್ಟ್ ಮ್ಯೂಸಿಕಲ್ ವೀಡಿಯೋ ಪ್ರಶಸ್ತಿ ಪಡೆದುದ್ದನ್ನು ಇದೆ ವೇಳೆ ಪ್ರದರ್ಶಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಛಾಯಗ್ರಹಣ ಹಾಗೂ ಸಂಕಲನ ಎನ್. ಸುಹಾಸ್, ಕಲಾ ನಿರ್ದೇಶನ ಪ್ರಶಾಂತ್ ಆಚಾರ್ಯ, ಮುಖ್ಯ ಪಾತ್ರದ ನಾಯಕ ಅನೂಪ್ ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X