Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಜ್ ಸಬ್ಸಿಡಿ ಓಲೈಕೆಯಾದರೆ ಕುಂಭ ಮೇಳಕ್ಕೆ...

ಹಜ್ ಸಬ್ಸಿಡಿ ಓಲೈಕೆಯಾದರೆ ಕುಂಭ ಮೇಳಕ್ಕೆ ನೀಡಿದ 1,150 ಕೋ.ರೂ. ಏನು?: ಒವೈಸಿ ಪ್ರಶ್ನೆ

“ಹಿಂದೂ ಯಾತ್ರಿಗಳ ಸಬ್ಸಿಡಿಯನ್ನು ನಿಲ್ಲಿಸಿ”

ವಾರ್ತಾಭಾರತಿವಾರ್ತಾಭಾರತಿ17 Jan 2018 8:11 PM IST
share
ಹಜ್ ಸಬ್ಸಿಡಿ ಓಲೈಕೆಯಾದರೆ ಕುಂಭ ಮೇಳಕ್ಕೆ ನೀಡಿದ 1,150 ಕೋ.ರೂ. ಏನು?: ಒವೈಸಿ ಪ್ರಶ್ನೆ

ಹೈದರಾಬಾದ್, ಜ.17: ಓಲೈಕೆಯಿಲ್ಲದೆ ಅಲ್ಪಸಂಖ್ಯಾತರ ಸಬಲೀಕರಣ ಸಿದ್ಧಾಂತದ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾಗುತ್ತಿದ್ದ ಹಜ್ ಸಬ್ಸಿಡಿಯನ್ನು ಈ ವರ್ಷದಿಂದ ಸ್ಥಗಿತಗೊಳಿಸಿರುವುದಾಗಿ ಕೇಂದ್ರ ಸರಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಸರಕಾರವು ಹಿಂದೂ ಓಲೈಕೆ ರಾಜಕೀಯವನ್ನೂ ಬಿಡಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಮೋದಿ ಸರಕಾರಕ್ಕೆ ಸೂಚಿಸಿದ್ದಾರೆ.

ಮೋದಿ ಸರಕಾರವು ಹಿಂದೂ ಯಾತ್ರಿಗಳಿಗೆ ನೀಡುವ ಸಬ್ಸಿಡಿಯನ್ನೂ ಕೈಬಿಡಬೇಕು ಎಂದು ಸವಾಲು ಹಾಕಿರುವ ಒವೈಸಿ, ಸರಕಾರವು ನುಡಿದಂತೆ ನಡೆದು ಮುಸ್ಲಿಂ ಹೆಣ್ಮಕ್ಕಳ ವಿದ್ಯಾರ್ಥಿ ವೇತನಕ್ಕಾಗಿ ಮುಂದಿನ ಬಜೆಟ್‌ನಲ್ಲಿ 20,000 ಕೋಟಿ ರೂ. ನೀಡಬೇಕು ಎಂದು ಆಗ್ರಹಿಸಿದರು.

ತಾನು ಹಜ್ ಸಬ್ಸಿಡಿ ನಿಲ್ಲಿಸಿರುವುದನ್ನು ವಿರೋಧಿಸುವುದಿಲ್ಲ. ಅದನ್ನು ಸ್ವಾಗತಿಸುತ್ತೇನೆ. ಆದರೆ ಎಲ್ಲರಿಗೂ ಒಂದೇ ನ್ಯಾಯ ಇರಬೇಕು ಎಂದು ಒವೈಸಿ ತಿಳಿಸಿದ್ದಾರೆ. ಹಜ್ ಸಬ್ಸಿಡಿಯನ್ನು ನಿಲ್ಲಿಸಿ ಆ ಹಣವನ್ನು ಮುಸ್ಲಿಂ ಹೆಣ್ಮಕ್ಕಳ ಶಿಕ್ಷಣಕ್ಕೆ ವ್ಯಯಿಸುವಂತೆ ಒವೈಸಿ 2006ರಿಂದಲೂ ಹೇಳುತ್ತಲೇ ಬಂದಿದ್ದಾರೆ. ಹಜ್ ಸಬ್ಸಿಡಿಯಲ್ಲಿ ನೀಡುವುದು ಕೇವಲ 200 ಕೋಟಿ ರೂ. ಬಿಜೆಪಿ ಅದನ್ನು ಓಲೈಕೆ ಎಂದು ಕರೆಯುತ್ತದೆ. “ನಾನು ಬಿಜೆಪಿ, ಪ್ರಧಾನಿ ಮತ್ತು ಆರೆಸ್ಸೆಸ್ ನವರಲ್ಲಿ ಕೇಳುತ್ತೇನೆ ಹಜ್ ಸಬ್ಸಿಡಿ ಓಲೈಕೆಯಾದರೆ ಕುಂಭ ಮೇಳಕ್ಕೆ ನೀಡಿದ ಹಣಕ್ಕೆ ಏನನ್ನಬೇಕು? 2014ರಲ್ಲಿ ಕುಂಭ ಮೇಳ ನಡೆದಾಗ ಸರಕಾರ 1,150 ಕೋಟಿ ರೂ. ಬಿಡುಗಡೆ ಮಾಡಿತ್ತು ಎಂದು ಒವೈಸಿ ತಿಳಿಸಿದ್ದಾರೆ.

ಹಜ್ ಭವನ ಸೇರಿದಂತೆ ಪ್ರತಿಯೊಂದಕ್ಕೂ ಕೇಸರಿ ಬಣ್ಣ ಬಳಿಯುತ್ತಿರುವ ಆದಿತ್ಯನಾಥ್ ಸರಕಾರ ಅಯೋಧ್ಯೆ, ಕಾಶಿ ಮತ್ತು ಮಥುರಾ ಯಾತ್ರಿಗಳಿಗೆ ನೀಡುವ 800 ಕೋಟಿ ರೂ. ಸಬ್ಸಿಡಿ ಮತ್ತು ಮಾನಸಸರೋವರ ಯಾತ್ರಿಗಳಿಗೆ ನೀಡುವ ತಲಾ 1.5 ಲಕ್ಷ ರೂ.ವನ್ನು ನಿಲ್ಲಿಸುವಂತೆ ಬಿಜೆಪಿ ಸೂಚಿಸುತ್ತದೆಯೇ? ಎಂದು ಒವೈಸಿ ಪ್ರಶ್ನಿಸಿದ್ದಾರೆ.

ಹರ್ಯಾಣ ಸರಕಾರವು ಕಳಂಕಿತ ದೇವಮಾನವ ಗುರ್ಮೀತ್ ಸಿಂಗ್ ನ ಡೇರ ಸಚ್ಚಾ ಸೌದಾಕ್ಕೆ ಒಂದು ಕೋಟಿ ರೂ. ಅನುದಾನ ನೀಡಿತ್ತು. ಅದು ಓಲೈಕೆಯಲ್ಲವೇ?, ಮಧ್ಯಪ್ರದೇಶದಲ್ಲಿ ನಡೆದ ಸಿಂಹಸ್ತ ಮಹಾಕುಂಭಕ್ಕೆ ಮೋದಿ ಸರಕಾರ 100 ಕೋಟಿ ರೂ. ನೀಡಿತ್ತು. ಇದು ಓಲೈಕೆಯಲ್ಲವೇ? ಎಂದು ಒವೈಸಿ ಪ್ರಶ್ನಿಸಿದ್ದಾರೆ.

ರಾಜಸ್ಥಾನ ಸರಕಾರವು 2017-18ನೇ ಸಾಲಿನಲ್ಲಿ ದೇವಸ್ಥಾನ ಇಲಾಖೆಗೆ 38.91 ಕೋಟಿ ರೂ. ಬಿಡುಗಡೆ ಮಾಡಿತ್ತು. ಹಿಂದಿನ ಸರಕಾರವು ದೇವಸ್ಥಾನದ ಪುನರ್‌ನಿರ್ಮಾಣ ಮತ್ತು ಪುರೋಹಿತರ ತರಬೇತಿಗಾಗಿ 26 ಕೋಟಿ ರೂ. ಬಿಡುಗಡೆ ಮಾಡಿತ್ತು. ಇದು ಮತ ರಾಜಕೀಯವಲ್ಲವೇ ಮತ್ತು ಓಲೈಕೆಯಲ್ಲವೇ? ಎಂದು ಒವೈಸಿ ಕೇಳಿದ್ದಾರೆ.

ಈ ವೇಳೆ ಕಾಂಗ್ರೆಸ್ ಅನ್ನೂ ತರಾಟೆಗೆ ತೆಗೆದುಕೊಂಡ ಒವೈಸಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರವಿದೆ. ಚಾರ್ ಧಾಮ್‌ಗೆ ತೆರಳುವವರಿಗೆ 20,000 ರೂ. ನೀಡುವುದಾಗಿ ಈ ಸರಕಾರ 2015ರಲ್ಲಿ ಘೋಷಿಸಿತ್ತು. ಅವರು ಜನಿವಾರಧಾರಿ ರಾಜಕೀಯ ಮಾಡುತ್ತಿದ್ದಾರೆ. ಅದನ್ನವರು ಕೊನೆಗೊಳಿಸುವರೇ? ಎಂದು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X