Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಗೋರಕ್ಷಕ’ರ ಭೀತಿಯಿಂದ ಸಾಕಿದ ದನವನ್ನು...

‘ಗೋರಕ್ಷಕ’ರ ಭೀತಿಯಿಂದ ಸಾಕಿದ ದನವನ್ನು ಠಾಣೆಗೊಪ್ಪಿಸಿದ ಕಾರ್ಪೊರೇಟರ್

ವಾರ್ತಾಭಾರತಿವಾರ್ತಾಭಾರತಿ17 Jan 2018 11:27 PM IST
share
‘ಗೋರಕ್ಷಕ’ರ ಭೀತಿಯಿಂದ ಸಾಕಿದ ದನವನ್ನು ಠಾಣೆಗೊಪ್ಪಿಸಿದ ಕಾರ್ಪೊರೇಟರ್

ಲಕ್ನೊ, ಜ.17: ತನ್ನ ಮೇಲೆ ‘ಗೋರಕ್ಷಕ’ರಿಂದ ದಾಳಿ ನಡೆಯಬಹುದೆಂಬ ಭೀತಿಯಿಂದ ಉತ್ತರಪ್ರದೇಶದ ಮೀರತ್ ನಗರದ ಮುಸ್ಲಿಂ ಕಾರ್ಪೊರೇಟರ್ ತಮ್ಮ ಮನೆಯಲ್ಲಿ ಸಾಕುತ್ತಿದ್ದ ದನವನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

 ವಾರ್ಡ್ 73ರ ಕಾರ್ಪೊರೇಟರ್, ಬಹುಜನ ಸಮಾಜವಾದಿ ಪಕ್ಷದ ಮುಖಂಡ ಅಬ್ದುಲ್ ಗಫ್ಫಾರ್ ಮಂಗಳವಾರ ತಮ್ಮ ಸಾಕುದನದೊಂದಿಗೆ ನೌಚಾಂಡಿ ಪೊಲೀಸ್ ಠಾಣೆಗೆ ಆಗಮಿಸಿ, ಹಸುವನ್ನು ನೋಡಿಕೊಳ್ಳುವಂತೆ ಪೊಲೀಸ್ ಅಧಿಕಾರಿ ಸಂಜಯ್ ಕುಮಾರ್‌ರನ್ನು ಕೋರಿದ್ದಾರೆ. ಇವರೊಂದಿಗೆ ಕುಟುಂಬದ ಸದಸ್ಯರು ಹಾಗೂ ನೆರೆಮನೆಯವರಿದ್ದರು. ಈ ದನವನ್ನು ಸಾಕುವವರಿಗೆ ಹಸ್ತಾಂತರಿಸಬೇಕು. ಪ್ರತೀ ತಿಂಗಳು ಅವರ ಮನೆಗೆ ಹೋಗಿ ನನ್ನ ದನವನ್ನು ನೋಡಿಕೊಂಡು ಬರುತ್ತೇನೆ ಎಂದು ಪೊಲೀಸರನ್ನು ವಿನಂತಿಸಿರುವುದಾಗಿ ಗಫ್ಫಾರ್ ತಿಳಿಸಿದ್ದಾರೆ. ಹಸುವನ್ನು ಠಾಣೆಗೆ ಹಸ್ತಾಂತರಿಸಿದ ಬಗ್ಗೆ ಗಫ್ಫಾರ್‌ಗೆ ರಶೀದಿ ನೀಡಲಾಗಿದೆ. ಎರಡು ವರ್ಷದ ಹಿಂದೆ ತನ್ನ ಸೋದರಿ ನೀಡಿದ ಕರುವನ್ನು ಅತ್ಯಂತ ಕಾಳಜಿಯಿಂದ ಸಾಕಿದ್ದೇನೆ. ಆದರೆ ಈಗ ತಥಾಕಥಿತ ಗೋರಕ್ಷಕರ ದಾಳಿಯ ಭೀತಿಯ ಕಾರಣ ಅತ್ಯಂತ ನೋವಿನಿಂದ ದನವನ್ನು ಮನೆಯಿಂದ ಹೊರಗೆ ಕಳಿಸುತ್ತಿದ್ದೇನೆ . ಇದು ತನ್ನ ವೈಯಕ್ತಿಕ ನಿರ್ಣಯ. ಇದರಲ್ಲಿ ಪಕ್ಷದ ಪಾತ್ರವೇನೂ ಇಲ್ಲ ಎಂದು ಗಫ್ಫಾರ್ ಹೇಳಿದ್ದಾರೆ.

ಹಸುವನ್ನು ಗಫ್ಫಾರ್‌ಗೆ ಮರಳಿಸುವುದಾಗಿ ಪೊಲೀಸ್ ಅಧೀಕ್ಷಕ ಮಾನ್‌ಸಿಂಗ್ ಚೌಹಾಣ್ ಹೇಳಿದ್ದಾರೆ. ಆದರೆ ತನ್ನ ನಿರ್ಧಾರ ಬದಲಿಸುವುದಿಲ್ಲ ಎಂದು ಗಫ್ಫಾರ್ ತಿಳಿಸಿದ್ದಾರೆ.

 ಕಳೆದ ಕೆಲ ವರ್ಷಗಳಲ್ಲಿ ದೇಶದಾದ್ಯಂತ ಗೋರಕ್ಷಣೆಯ ಹೆಸರಲ್ಲಿ ನಡೆಯುತ್ತಿರುವ ಹಿಂಸಾಚಾರ ಹೆಚ್ಚಿದ್ದು ತಥಾಕಥಿಕ ಗೋರಕ್ಷಕರು ಜನರನ್ನು ಥಳಿಸುವುದು, ಅವರ ಬಳಿಯಿದ್ದ ಹಸುಗಳನ್ನು ಸೆಳೆದೊಯ್ಯುವುದು ಇತ್ಯಾದಿ ಕೃತ್ಯಗಳಿಂದ ಒಂದು ವರ್ಗದ ಜನರಲ್ಲಿ ಭೀತಿಯ ವಾತಾವರಣ ಮೂಡಿಸಿದ್ದಾರೆ. ಕೆಲವು ಸಂಘಟನೆಗಳು ಅಲ್ಪಸಂಖ್ಯಾತ ಸಮುದಾಯದವರನ್ನು ಗುರಿಯಾಗಿಸಿ ನಡೆಸುತ್ತಿರುವ ಈ ಹಿಂಸಾಚಾರವನ್ನು ಹತ್ತಿಕ್ಕಲು ಕೇಂದ್ರದ ಬಿಜೆಪಿ ನೇತೃತ್ವದ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿಪಕ್ಷಗಳು ಟೀಕಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X