Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಟ-ನಿರ್ದೇಶಕ ಕಾಶೀನಾಥ್ ನಿಧನಕ್ಕೆ...

ನಟ-ನಿರ್ದೇಶಕ ಕಾಶೀನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ವಾರ್ತಾಭಾರತಿವಾರ್ತಾಭಾರತಿ18 Jan 2018 7:51 PM IST
share
ನಟ-ನಿರ್ದೇಶಕ ಕಾಶೀನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಬೆಂಗಳೂರು, ಜ. 18: ಕನ್ನಡ ಚಿತ್ರರಂಗದ ಹೆಸರಾಂತ ನಟ ನಿರ್ದೇಶಕ ಕಾಶೀನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ತಮ್ಮ ತಂದೆ ವಾಸುದೇವ ರಾವ್ ಶಿವಮೊಗ್ಗ ಜೋಗದ ಹಿರೇಭಾಸ್ಕರ್‌ನಲ್ಲಿ ಉಪಾಹಾರ ಮಂದಿರ ನಡೆಸುತ್ತಿದ್ದ ಸಂದರ್ಭದಲ್ಲಿ ರಮಣೀಯ ಪರಿಸರದಲ್ಲಿ ಸಾಧಾರಣ ಕುಟುಂಬಗಳಲ್ಲಿನ ಸಣ್ಣ-ಸಣ್ಣ ಘಟನೆಗಳನ್ನೂ ಗಮನಿಸುತ್ತಿದ್ದ ಕಾಶೀನಾಥ್, ಬೆಂಗಳೂರಿನ ಜಯನಗರದಲ್ಲಿ ತಂದೆಯ ಮಾಲಕತ್ವದ ಗಾಯಿತ್ರಿ ಸ್ಟೋರ್ಸ್‌ಗೆ ಆಗಮಿಸುತ್ತಿದ್ದ ಗ್ರಾಹಕರ ರುಚಿ- ಅಭಿರುಚಿಯನ್ನು ಗ್ರಹಿಸಿ, ಬರೆಯುವ ಗೀಳು ಬೆಳೆಸಿಕೊಂಡು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಮುಂದಾದಾಗ ಅವರಿಗೆ ಯಾವುದೇ ಅನುಭವ ಇರಲಿಲ್ಲ. ಅಪರೂಪದ ಅತಿಥಿಗಳು ಚಿತ್ರ ನಿರ್ದೇಶಿಸುವ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿ, ಅಪರಿಚಿತ ಚಿತ್ರದ ನಿರ್ದೇಶಿಸಿ ಕನ್ನಡ ಕುಲಕೋಟಿಗೆ ಪರಿಚಿತರಾಗಿ, ‘ಅನುಭವ’ ಚಿತ್ರದ ಮೂಲಕ ತನ್ನ ಪ್ರತಿಭೆಯನ್ನು ಪರಿಚಯಿಸುವುದರೊಂದಿಗೆ ಅಭಿನಯ ಮತ್ತು ಉಮಾಶ್ರೀ ಅವರನ್ನು ಪರಿಚಯಿಸಿದ ಕಾಶೀನಾಥ್ ಎಂಬ ಈ ಅದ್ಭುತ ಪ್ರತಿಭೆ ಉಪೇಂದ್ರರಿಗೂ ಸಹಾಯಕ ನಿರ್ದೇಶಕನಾಗಿ, ಗೀತ ರಚನಕಾರನಾಗಿ ಹಾಗೂ ನಟನಾಗಿ ಬೆಳೆಯಲು ವೇದಿಕೆ ಕಲ್ಪಿಸಿದರು.

‘ಅವಳೇ ನನ್ನ ಹೆಂಡ್ತಿ’ ಚಿತ್ರದಲ್ಲಿ ವರದಕ್ಷಿಣೆ ಹಾಗೂ ಹೆಣ್ಣಿನ ಶೋಷಣೆಯ ವಿಷಯವನ್ನು ಹಾಸ್ಯಭರಿತವಾಗಿ ಚಿತ್ರಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದ ಕಾಶೀನಾಥ್ ತಮ್ಮ ಬಹುತೇಕ ಚಿತ್ರಗಳ ಶೀರ್ಷಿಕೆಯನ್ನು ಅಕಾರದಲ್ಲೇ ಪ್ರಾರಂಭಿಸಿ ಎಲ್ಲರ ಗಮನ ಸೆಳೆದಿದ್ದರು.

ಪೋಷಕ ಪಾತ್ರದಲ್ಲೇ ತೃಪ್ತಿಪಟ್ಟುಕೊಳ್ಳಬೇಕಾದ ಹಾಸ್ಯ ನಟನೆಗೆ ಕನ್ನಡ ಚಿತ್ರರಂಗದಲ್ಲಿ ನಾಯಕ ಸ್ಥಾನ ದೊರಕಿಸಿಕೊಟ್ಟದ್ದು ಕಾಶೀನಾಥ್ ಅವರ ಗಮನಾರ್ಹ ಸಾಧನೆ. ತಮ್ಮ ಚಿತ್ರಗಳಲ್ಲಿ ಎಲ್ಲರನ್ನೂ ನಕ್ಕು ನಗಿಸಿ, ಸಂತಸ ಮೂಡಿಸುತ್ತಿದ್ದ ಕಾಶೀನಾಥ್ ಅವರು ಇಂದು ನಮ್ಮನ್ನಗಲಿ ದುಃಖ ಮೂಡಿಸಿದ್ದಾರೆಂದು ಸಿದ್ದರಾಮಯ್ಯ ಅವರು ಬಣ್ಣಿಸಿದ್ದಾರೆ.

ಕಾಶೀನಾಥ್ ಅವರ ಆತ್ಮಕ್ಕೆ ಶಾಂತಿ ಲಭಿಸಲಿ. ಕಾಶೀನಾಥ್ ಅವರ ಕುಟುಂಬ ವರ್ಗ ಹಾಗೂ ಅಭಿಮಾನಿ ವರ್ಗಕ್ಕೆ ಅವರ ಅಗಲಿಕೆಯಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X