Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಂಡಾಯ ನ್ಯಾಯಾಧೀಶರು - ಮುಖ್ಯ...

ಬಂಡಾಯ ನ್ಯಾಯಾಧೀಶರು - ಮುಖ್ಯ ನ್ಯಾಯಮೂರ್ತಿ ಭೇಟಿ: ನಾಲ್ವರು ನ್ಯಾಯಾಧೀಶರು ದೀಪಕ್ ಮಿಶ್ರಾರಿಗೆ ಹೇಳಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ18 Jan 2018 8:08 PM IST
share
ಬಂಡಾಯ ನ್ಯಾಯಾಧೀಶರು - ಮುಖ್ಯ ನ್ಯಾಯಮೂರ್ತಿ ಭೇಟಿ: ನಾಲ್ವರು ನ್ಯಾಯಾಧೀಶರು ದೀಪಕ್ ಮಿಶ್ರಾರಿಗೆ ಹೇಳಿದ್ದೇನು ?

ಹೊಸದಿಲ್ಲಿ, ಜ.18: ಸುಪ್ರೀಂಕೋರ್ಟ್‌ನ ನಾಲ್ವರು ಹಿರಿಯ, ‘ಬಂಡಾಯ’ ನ್ಯಾಯಾಧೀಶರು ಗುರುವಾರ ಮುಖ್ಯ ನ್ಯಾಯಮೂರ್ತಿಯವರನ್ನು ಭೇಟಿಮಾಡಿ ಮಾತುಕತೆ ನಡೆಸಿದ್ದು ಸುಪ್ರೀಂಕೋರ್ಟ್ ನ್ಯಾಯಾಧೀಶರಿಗೆ ಸರದಿಪಟ್ಟಿ ನಿಗದಿಗೊಳಿಸುವ ಪ್ರಸ್ತಾವ ಮಾಡಿದ್ದಾರೆ ಎಂದು ವರದಿಯಾಗಿದೆ.

ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರ ಅವರ ಚೇಂಬರ್‌ನಲ್ಲಿ ನಡೆದ ಮಾತುಕತೆಯಲ್ಲಿ ರೋಸ್ಟರ್(ಸರದಿಪಟ್ಟಿ) ವ್ಯವಸ್ಥೆಯ ಜೊತೆಗೆ, ಸೂಕ್ಷ್ಮ ಪ್ರಕರಣಗಳ ಹಂಚಿಕೆ ಕುರಿತೂ ನಾಲ್ವರು ನ್ಯಾಯಾಧೀಶರು ಸಲಹೆ ನೀಡಿದ್ದಾರೆ. ಈ ಸಲಹೆಯನ್ನು ಪರಿಶೀಲಿಸುವುದಾಗಿ ದೀಪಕ್ ಮಿಶ್ರಾ ಭರವಸೆ ನೀಡಿದರು. ಮಾತುಕತೆ ಸೌಹಾರ್ದಯುತವಾಗಿದ್ದು ಮುಂದಿನ ವಾರ ಮತ್ತಷ್ಟು ಮಾತುಕತೆ ನಡೆಯುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. 30 ನಿಮಿಷ ನಡೆದ ಮಾತುಕತೆ ಸಂದರ್ಭ ‘ಬಂಡಾಯ’ ನ್ಯಾಯಾಧೀಶರಾದ ಚಲಮೇಶ್ವರ್, ರಂಜನ್ ಗೊಗೊಯಿ, ಮದನ್ ಲೋಕುರ್ ಮತ್ತು ಕುರಿಯನ್ ಜೋಸೆಫ್ ಅವರಲ್ಲದೆ, ನ್ಯಾಯಾಧೀಶರಾದ ಎ.ಕೆ.ಸಿಕ್ರಿ, ಎನ್.ವಿ.ರಮಣ, ಡಿ.ವೈ.ಚಂದ್ರಚೂಡ್ ಮತ್ತು ಯು.ಯು.ಲಲಿತ್ ಕೂಡಾ ಪಾಲ್ಗೊಂಡಿದ್ದರು.

ದೂರಗಾಮಿ ಪರಿಣಾಮ ಬೀರುವ ಪ್ರಕರಣಗಳ ಹಂಚಿಕೆ ಕುರಿತ ತಮ್ಮ ಕಳವಳವನ್ನು ಪರಿಹರಿಸಲು ಯೋಜನೆಯೊಂದನ್ನು ರೂಪಿಸುವಂತೆ ‘ಬಂಡಾಯ’ ನ್ಯಾಯಾಧೀಶರು ಒತ್ತಾಯಿಸಿದರು ಎನ್ನಲಾಗಿದೆ. ಜನವರಿ 12ರಂದು ಪತ್ರಿಕಾಗೋಷ್ಟಿ ನಡೆಸಿದ್ದ ನಾಲ್ವರು ನ್ಯಾಯಾಧೀಶರು, ಮುಖ್ಯನ್ಯಾಯಮೂರ್ತಿಯವರ ಕಾರ್ಯವೈಖರಿಯ ಕುರಿತು ಅಸಮಾಧಾನ ಸೂಚಿಸಿದ್ದರು. ನ್ಯಾಯಾಧೀಶ ಬಿ.ಎಚ್.ಲೋಯಾರ ಸಾವಿನ ಪ್ರಕರಣದಂತಹ ಸೂಕ್ಷ್ಮ ಪ್ರಕರಣಗಳ ವಿಚಾರಣೆಯನ್ನು ಕಿರಿಯ ನ್ಯಾಯಾಧೀಶ ಅರುಣ್ ಮಿಶ್ರಾಗೆ ಹಂಚಿಕೆ ಮಾಡಿರುವುದಕ್ಕೆ ಈ ನಾಲ್ವರು ‘ಬಂಡಾಯ ’ ನ್ಯಾಯಾಧೀಶರು ಅತೃಪ್ತಿ ಸೂಚಿಸಿದ್ದರು. ಅಲ್ಲದೆ ಆಧಾರ್‌ಗೆ ಕಾನೂನಿನ ಸಿಂಧುತ್ವ, ಸಲಿಂಗಕಾಮ ನಿಷೇಧದ ಆದೇಶ ಮರುಪರಿಶೀಲನೆ, ಶಬರಿಮಲೆ ದೇವಸ್ಥಾನ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ ನಿರಾಕರಣೆ ಮುಂತಾದ ಪ್ರಮುಖ 8 ಪ್ರಕರಣಗಳ ವಿಚಾರಣೆ ನಡೆಸಲು ರೂಪಿಸಿದ್ದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದಿಂದ ಈ ನಾಲ್ವರು ಹಿರಿಯ ನ್ಯಾಯಾಧೀಶರನ್ನು ಹೊರಗಿಟ್ಟಿರುವುದೂ ‘ಬಂಡಾಯ’ ನ್ಯಾಯಾಧೀಶರ ಅಸಮಾಧಾನಕ್ಕೆ ಕಾರಣವಾಗಿತ್ತು.

ಈ ಮಧ್ಯೆ, ನ್ಯಾಯಾಧೀಶ ಲೋಯಾರ ಸಾವಿನ ಪ್ರಕರಣದ ವಿಚಾರಣೆಯನ್ನು ‘ಸೂಕ್ತ ನ್ಯಾಯಪೀಠ’ಕ್ಕೆ ವಹಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿರುವ ಕಾರಣ ಈ ಪ್ರಕರಣವನ್ನು ಅರುಣ್ ಮಿಶ್ರಾರ ಬದಲು ಬೇರೊಬ್ಬ ನ್ಯಾಯಾಧೀಶರಿಗೆ ವಹಿಸಿಕೊಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ನ್ಯಾ. ಅರುಣ್ ಮಿಶ್ರ, ವಿನಾಕಾರಣ ತನ್ನನ್ನು ‘ಟಾರ್ಗೆಟ್’ ಮಾಡಲಾಗಿದ್ದು ತನ್ನ ಕ್ಷಮತೆಯ ಕುರಿತು ಪ್ರಶ್ನೆಗಳನ್ನು ಎತ್ತಲಾಗಿದೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X