ಜ.19: ಕೈಕಂಬದ ಜಂಕ್ಷನ್ನಲ್ಲಿ ಪಿಎಫ್ಐ ಪ್ರತಿಭಟನಾ ಸಭೆ
ಬಂಟ್ವಾಳ, ಜ. 18: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ಘಟಕದ ವತಿಯಿಂದ "ಅಧಿಕಾರ ದಾಹಕ್ಕೆ ಇನ್ನೆಷ್ಟು ಬಲಿ?" ಎಂಬ ಘೋಷಣೆಯೊಂದಿಗೆ ಜ. 19ರಂದು ಸಂಜೆ 4ಕ್ಕೆ ಬೃಹತ್ ಪ್ರತಿಭಟನಾ ಸಭೆಯು ಕೈಕಂಬದ ಜಂಕ್ಷನ್ನಲ್ಲಿ ಹಮ್ಮಿಕೊಳ್ಳಲಾಗಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ಘಟಕ ಅಧ್ಯಕ್ಷ ಇಜಾಝ್ ಅಹ್ಮದ್ ಅವರು ಅಧ್ಯಕ್ಷತೆ ವಹಿಸುವರು. ಪಿಎಫ್ಐ ಪ್ರಧಾನ ಕಾರ್ಯದರ್ಶಿ ಯಾಸಿರ್ ಹಸನ್ ಪ್ರತಿಭಟನಾರರನ್ನು ಉದ್ದೇಶಿಸಿ ಮಾತನಾಡುವರು.
ಪಿಎಫ್ಐ ರಾಜ್ಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ದಲಿತ ಸಂಘರ್ಷ ಸಮಿತಿ ಮುಖಂಡ ಬಾನುಚಂದ್ರ ಕೃಷ್ಣಾಪುರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪಿಎಫ್ಐ ಬಂಟ್ವಾಳ ಘಟಕದ ಪ್ರಧಾನ ಕಾರ್ಯದರ್ಶಿ ಸಲೀಮ್ ಕೆ. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story