Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಕಾರಾತ್ಮಕ ಪಾಲನೆ ಇಂದಿನ ಅಗತ್ಯ: ಶಿಕ್ಷಣ...

ಸಕಾರಾತ್ಮಕ ಪಾಲನೆ ಇಂದಿನ ಅಗತ್ಯ: ಶಿಕ್ಷಣ ತಜ್ಞರ ಅಭಿಮತ

ವಾರ್ತಾಭಾರತಿವಾರ್ತಾಭಾರತಿ19 Jan 2018 6:44 PM IST
share

ಲಕ್ನೊ, ಜ.19: ಲಕ್ನೊದ ಶಾಲೆಯೊಂದರಲ್ಲಿ ಹಿರಿಯ ವಿದ್ಯಾರ್ಥಿನಿಯೊಬ್ಬಳು 1ನೆ ತರಗತಿಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದ ಪ್ರಕರಣದ ರೀತಿಯ ಘಟನೆಗಳು ಪ್ರಸಕ್ತ ಸಂದರ್ಭದಲ್ಲಿ ಆಗಿಂದಾಗ್ಗೆ ಮರುಕಳಿಸುತ್ತಿರುವ ಕುರಿತು ಶಿಕ್ಷಣ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

 ಇಂತಹ ಘಟನೆಗಳಿಗೆ ನೈತಿಕ ಮೌಲ್ಯಗಳು ತೀವ್ರವಾಗಿ ಕುಸಿಯುತ್ತಿರುವುದು ಪ್ರಮುಖ ಕಾರಣವಾಗಿದ್ದು ಸಕಾರಾತ್ಮಕ ಪಾಲನೆ ಇಂದಿನ ಅಗತ್ಯ ಎಂದು ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

 ಸಕಾರಾತ್ಮಕ ಪಾಲನೆಯನ್ನು ಆರಂಭಿಸಲು ಇದು ಸಕಾಲವಾಗಿದೆ. ಪೋಷಕರಿಗೆ ತರಗತಿ ನಡೆಸಿ ಸಕಾರಾತ್ಮಕ ಪಾಲನೆ ಹಾಗೂ ಅದರ ಅನುಕೂಲತೆಯ ಬಗ್ಗೆ ಅವರಿಗೆ ಕಲಿಸುವ ಅಗತ್ಯವಿದೆ. ಕಾಲ ಮಿಂಚುವ ಮೊದಲೇ ವಿದ್ಯಾರ್ಥಿಗಳ ಮನಸ್ಥಿತಿಯನ್ನು ತಿಳಿದುಕೊಳ್ಳಬೇಕು ಎಂದು ‘ಸ್ಟಡಿ ಹಾಲ್ ಎಜುಕೇಶನ್ ಫೌಂಡೇಶನ್’ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಊರ್ವಶಿ ಸಾಹ್ನಿ ಹೇಳಿದ್ದಾರೆ.

ಶಾಲೆಗಳಲ್ಲಿ ಶೌಚಾಲಯದ ಸ್ಥಳ ಬದಲಾಯಿಸುವ ಅಗತ್ಯವಿದೆ ಹಾಗೂ ಶೌಚಾಲಯದ ಪ್ರವೇಶದ್ವಾರದ ಬಳಿ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಾಪಿಸಬೇಕೆಂದು ಕೆಲವು ಶಿಕ್ಷಣತಜ್ಞರು ಅಭಿಪ್ರಾಯಪಟ್ಟರು.

 ತಮ್ಮ ಶಾಲೆಯ ಶೌಚಾಲಯದ ಪ್ರವೇಶದ್ವಾರದ ಬಳಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದು ಒಬ್ಬ ಪುರುಷ ಹಾಗೂ ಮಹಿಳಾ ಕಾವಲುಗಾರರನ್ನು ಅಲ್ಲಿ ನಿಯೋಜಿಸಲಾಗಿದೆ ಎಂದು ಹೋರ್ನರ್ ಕಾಲೇಜಿನ ಪ್ರಾಂಶುಪಾಲೆ ಮಾಲಾ ಮೆಹ್ರಾ ತಿಳಿಸಿದ್ದಾರೆ. ಶೌಚಾಲಯಗಳನ್ನು ಏಕಾಂತಪ್ರದೇಶದಲ್ಲಿ ನಿರ್ಮಿಸುವ ಬದಲು ಕಟ್ಟಡದ ಮಧ್ಯಭಾಗದಲ್ಲಿ ನಿರ್ಮಿಸಿದರೆ ಇಂತಹ ಘಟನೆಗಳನ್ನು ತಡೆಗಟ್ಟಲು ಸಾಧ್ಯ . ಅಲ್ಲದೆ ಮಾಧ್ಯಮಗಳು ಇಂತಹ ಘಟನೆಗಳ ಸುದ್ದಿಯನ್ನು ಪ್ರಸಾರ ಮಾಡುವಾಗ ಮಕ್ಕಳ ಮನದಲ್ಲಿ ಬಲವಾದ ಪರಿಣಾಮ ಬೀರುವಂತೆ ಪ್ರಸಾರ ಮಾಡಬೇಕು ಎಂದವರು ಅಭಿಪ್ರಾಯಪಟ್ಟರು. ನೈತಿಕ ಮೌಲ್ಯಗಳು ತೀವ್ರವಾಗಿ ಕುಸಿಯುತ್ತಿರುವುದು ಇಂತಹ ಘಟನೆಗಳಿಗೆ ಕಾರಣ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

 ಮಕ್ಕಳು ಇಂದು ತೀವ್ರ ಒತ್ತಡದಲ್ಲಿದ್ದಾರೆ. ಶಾಲೆಯ ಪಾಠ, ಹೋಂವರ್ಕ್, ಪ್ರಾಜೆಕ್ಟ್‌ವರ್ಕ್, ಟ್ಯೂಷನ್, ಪರೀಕ್ಷೆ ಹೀಗೆ ಸದಾ ಒತ್ತಡದಲ್ಲೇ ಇರುವ ಮಕ್ಕಳು ಅದರಿಂದ ಪಾರಾಗಲು ಕೆಟ್ಟ ಕೆಲಸ ನಡೆಸಲು ಮುಂದಾಗಬಹುದು. ಆದ್ದರಿಂದ ಮಕ್ಕಳ ಒತ್ತಡ ನಿವಾರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಉ.ಪ್ರದೇಶ ಮಾಧ್ಯಮಿಕ ಶಿಕ್ಷಕರ ಸಂಘದ ರಾಜ್ಯ ಕಾರ್ಯದರ್ಶಿ ಹಾಗೂ ಕ್ವೀನ್ಸ್ ಇಂಟರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಆರ್.ಪಿ.ಮಿಶ್ರಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X