Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಹಾಲಕ್ಕಿ ಒಕ್ಕಲಿಗ, ಕುಣಬಿ...

‘ಹಾಲಕ್ಕಿ ಒಕ್ಕಲಿಗ, ಕುಣಬಿ ಸಮುದಾಯ’ವನ್ನು ಎಸ್ಟಿಗೆ ಸೇರಿಸಿ: ಕೇಂದ್ರಕ್ಕೆ ಸಚಿವ ದೇಶಪಾಂಡೆಮನವಿ

ವಾರ್ತಾಭಾರತಿವಾರ್ತಾಭಾರತಿ19 Jan 2018 6:47 PM IST
share
‘ಹಾಲಕ್ಕಿ ಒಕ್ಕಲಿಗ, ಕುಣಬಿ ಸಮುದಾಯ’ವನ್ನು ಎಸ್ಟಿಗೆ ಸೇರಿಸಿ: ಕೇಂದ್ರಕ್ಕೆ ಸಚಿವ ದೇಶಪಾಂಡೆಮನವಿ

ಬೆಂಗಳೂರು, ಜ. 19: ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಹಾಲಕ್ಕಿ ಒಕ್ಕಲಿಗ, ಕುಣಬಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ(ಎಸ್ಟಿ)ದ ಸ್ಥಾನಮಾನ ನೀಡಬೇಕು ಎಂದು ಬೃಹತ್ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ, ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷ ನಂದಕುಮಾರ್ ಸಾಮಿ ಮತ್ತು ರಿಜಿಸ್ಟ್ರಾರ್ ಜನರಲ್ ಹಾಗೂ ಭಾರತೀಯ ಜನಗಣತಿ ಆಯುಕ್ತ ಶೈಲೇಶ್ ಅವರಿಗೆ, ಸಚಿವ ದೇಶಪಾಂಡೆ ಪತ್ರ ಬರೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಗುಡ್ಡಗಾಡು ಮತ್ತು ಅರಣ್ಯ ಪ್ರದೇಶಗಳಲ್ಲಿ ವಾಸ ಮಾಡುವ ಹಾಲಕ್ಕಿ ಒಕ್ಕಲಿಗರು ಎಸ್ಟಿ ಸ್ಥಾನಮಾನ ಪಡೆಯಲು ಅರ್ಹರಾಗಿದ್ದು, ಅವರ ಈ ಬೇಡಿಕೆ ನ್ಯಾಯೋಚಿತವಾಗಿದೆ ಎಂದು ವಿವರಿಸಿದ್ದಾರೆ.

ಹಾಲಕ್ಕಿ ಒಕ್ಕಲಿಗರ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡುವಂತೆ ಕೋರಿ ರಾಜ್ಯ ಸರಕಾರವು 2013ರ ಮಾರ್ಚ್‌ನಲ್ಲಿ ಕೇಂದ್ರ ಸರಕಾರಕ್ಕೆ ಶಿಫಾರಸು ಸಲ್ಲಿಸಿತ್ತು. ಆದರೆ, ಕೇಂದ್ರ ಸರಕಾರದ ರಿಜಿಸ್ಟ್ರಾರ್ ಜನರಲ್ ಕಚೇರಿಯು ಇದಕ್ಕೆ ಕೆಲವು ಆಕ್ಷೇಪಣೆಗಳನ್ನೆತ್ತಿ, ಶಿಫಾರಸನ್ನು ರಾಜ್ಯ ಸರಕಾರಕ್ಕೆ ವಾಪಸ್ಸು ಕಳಿಸಿತ್ತು.

ಅನಂತರ ರಾಜ್ಯ ಸರಕಾರವು ಮತ್ತೊಮ್ಮೆ ಹಾಲಕ್ಕಿ ಒಕ್ಕಲಿಗ ಸಮುದಾಯದ ಸಮಗ್ರ ಕುಲಶಾಸ್ತ್ರೀಯ ಅಧ್ಯಯನ ನಡೆಸಿ, 2017ರ ಫೆಬ್ರವರಿಯಲ್ಲಿ ಈ ಶಿಫಾರಸ್ಸನ್ನು ಮತ್ತೊಮ್ಮೆ ಕೇಂದ್ರ ಸರಕಾರಕ್ಕೆ ರವಾನಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಶಿಫಾರಸನ್ನು ಕೇಂದ್ರ ಸರಕಾರ ಈಗಾಗಲೇ ರಿಜಿಸ್ಟ್ರಾರ್ ಜನರಲ್ ಅವರ ಕಚೇರಿಗೆ ಕಳುಹಿಸಿ ಕೊಟ್ಟಿದ್ದು, ಮುಂದಿನ ಅಭಿಪ್ರಾಯವನ್ನು ಕೋರಿದೆ ಎಂದು ದೇಶಪಾಂಡೆ ತಿಳಿಸಿದ್ದಾರೆ.

ಈ ಬೇಡಿಕೆಯನ್ನು ರಿಜಿಸ್ಟ್ರಾರ್ ಜನರಲ್ ಅವರು ಆದ್ಯತೆಯ ಮೇಲೆ ಪರಿಗಣಿಸಿ, ಕೇಂದ್ರ ಸರಕಾರಕ್ಕೆ ತಮ್ಮ ಅಭಿಪ್ರಾಯವನ್ನು ತಿಳಿಸಬೇಕೆಂದು ಸಚಿವರು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದೇ ಉದ್ದೇಶಕ್ಕಾಗಿ ದೇಶಪಾಂಡೆ ಇತ್ತೀಚೆಗೆ ಹಾಲಕ್ಕಿ ಒಕ್ಕಲಿಗ ಸಮುದಾಯದ ಮುಖಂಡ ಹನುಮಂತ ಗೌಡ, ಕೆ.ಎಚ್.ಗೌಡ ಮುಂತಾದವರಿದ್ದ ನಿಯೋಗದೊಂದಿಗೆ ಹೊಸದಿಲ್ಲಿಗೆ ತೆರಳಿದ್ದರು.

ಈ ವೇಳೆ ಕೇಂದ್ರ ಸರಕಾರದ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ, ಹಾಲಕ್ಕಿ ಒಕ್ಕಲಿಗ ಸಮುದಾಯದ ಬೇಡಿಕೆ ಕುರಿತು ಚರ್ಚೆ ನಡೆಸಿದ್ದಾರೆ. ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಅಲ್ ಓರಂ, ಕಾರ್ಯದರ್ಶಿ ಲೀನಾ ನಾಯರ್, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಕಾರ್ಯದರ್ಶಿ ಜಿ.ಲತಾ ಕೃಷ್ಣರಾವ್, ರಾಷ್ಟ್ರೀಯ ಎಸ್ಟಿ ಆಯೋಗದ ಅಧ್ಯಕ್ಷ ನಂದಕುಮಾರ್ ಸಾಮಿ ಮತ್ತು ರಾಷ್ಟ್ರೀಯ ಎಸ್ಟಿ ಆಯೋಗದ ಕಾರ್ಯದರ್ಶಿ ರಾಘವಚಂದ್ರರಿಗೂ ಪತ್ರ ಬರೆದಿದ್ದು, ಸ್ಥಾನಮಾನ ನೀಡುವ ವಿಚಾರವನ್ನು ಆದ್ಯತೆಯ ಮೇಲೆ ಪರಿಗಣಿಸುವಂತೆ ಕೋರಿದ್ದಾರೆ ಎಂದು ತಿಳಿಸಿದ್ದಾರೆ.

ಕುಣಬಿ ಸಮುದಾಯವನ್ನು ಎಸ್ಟಿಗೆ ಸೇರಿಸಿ: ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕುಣಬಿ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸಬೇಕೆಂದು ಸಚಿವ ಆರ್.ವಿ. ದೇಶಪಾಂಡೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬೇಕೆಂದು ಕುಣಬಿ ಸಮುದಾಯದ ಮುಖಂಡರು ಹಲವು ವರ್ಷಗಳಿಂದ ಆಗ್ರಹಿಸುತ್ತಿದ್ದಾರೆ. ಅವರ ಈ ಬೇಡಿಕೆಯು ನ್ಯಾಯಸಮ್ಮತ. ಸಚಿವ ಸಂಪುಟ ಸಭೆಯೂ ಈ ಬಗ್ಗೆ ನಿರ್ಧರಿಸಿದೆ. ಗೋವಾದಲ್ಲಿ ಕುಣಬಿಗಳಿಗೆ ಈಗಾಗಲೇ ಎಸ್ಟಿ ಸ್ಥಾನಮಾನ ನೀಡಲಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X