Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಿ ಕಾಲೇಜು, ಕಟ್ಟಡಗಳ ಎದುರು ಕಿರು...

ಸರಕಾರಿ ಕಾಲೇಜು, ಕಟ್ಟಡಗಳ ಎದುರು ಕಿರು ಉದ್ಯಾನವಿರಲಿ: ಡಾ.ವೀರೇಂದ್ರ ಹೆಗಡೆ

ವಾರ್ತಾಭಾರತಿವಾರ್ತಾಭಾರತಿ19 Jan 2018 7:57 PM IST
share
ಸರಕಾರಿ ಕಾಲೇಜು, ಕಟ್ಟಡಗಳ ಎದುರು ಕಿರು ಉದ್ಯಾನವಿರಲಿ: ಡಾ.ವೀರೇಂದ್ರ ಹೆಗಡೆ

ಬೆಂಗಳೂರು, ಜ.19: ಬೆಂಗಳೂರಿನಲ್ಲಿ ಪ್ರತಿ ಸರಕಾರಿ ಕಚೇರಿ, ಕಟ್ಟಡಗಳ ಮುಂದೆ ಕಿರು ಉದ್ಯಾನವನಗಳನ್ನು ಕಡ್ಡಾಯಗೊಳಿಸಬೇಕು. ಉದ್ಯಾನನಗರಿಯ ಖ್ಯಾತಿಯನ್ನು ಮರಳಿ ತಂದು ಕೊಡಬೇಕೆಂದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಒತ್ತಾಯಿಸಿದ್ದಾರೆ.

ಗಣರಾಜೋತ್ಸವದ ಅಂಗವಾಗಿ ಶುಕ್ರವಾರದಿಂದ ನಗರದ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಹಮ್ಮಿಕೊಂಡಿರುವ 207ನೆ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಸಾಮಾನ್ಯವಾಗಿ ಆಹಾರ, ವಸತಿಗೆ ಒತ್ತು ನೀಡುತ್ತಾನೆ. ನಾವು ತಿನ್ನುವ ಆಹಾರ ಕರಗಿ ಹೋಗುತ್ತದೆ. ಆದರೆ, ಪ್ರಕೃತಿ ಕಣ್ಣಿಗೆ ನೀಡುವ ಆನಂದ ಶಾಶ್ವತವಾದದ್ದು. ಅದು ಎಂದಿಗೂ ಮಾಯವಾಗುವುದಿಲ್ಲ ಎಂದು ಹೇಳಿದರು.

ಬೆಂಗಳೂರು ಎಂದರೆ ಕೇವಲ ಬಾರ್‌ಗಳು, ಬಿಲ್ಡಿಂಗ್‌ಗಳು ನೆನಪಾಗಬಾರದು. ಉದ್ಯಾನವನಗಳ ಮೂಲಕ ಇದು ಪುಷ್ಪ ನಗರಿ ಆಗಿತ್ತು. ಅಂತಹ ವೈಭವವನ್ನು ಮರುಸೃಷ್ಟಿಸಲು ಸರಕಾರ ಮುಂದಾಗಬೇಕು ಎಂದು ಅವರು ಹೇಳಿದರು.

ಬೆಂಗಳೂರಿಗೆ ಬಂದವರು ಲಾಲ್‌ಬಾಗ್ ಹಾಗೂ ಕಬ್ಬನ್ ಪಾರ್ಕ್ ನೋಡದಿದ್ದರೆ ಜೀವನ ವ್ಯರ್ಥ ಎಂಬ ಮಾತಿದೆ. ಸರಕಾರ ಮತ್ತು ತೋಟಗಾರಿಕೆ ಇಲಾಖೆ ಈ ಸ್ಥಳಗಳನ್ನು ಸುರಕ್ಷಿತವಾಗಿ ಕಾಪಾಡಿಕೊಂಡು ಬಂದಿವೆ. ತೋಟಗಾರಿಕೆ ಪಿತಾಮಹ ಡಾ. ಎಂ.ಎಚ್.ಮರಿಗೌಡರಿಂದ ಸಸ್ಯಕಾಶಿ ಲಾಲ್‌ಬಾಗ್ ಮನೆಮಾತಾಗಿದೆ. ಪರಿಸರ ಉಳಿಸುವ ಬಗ್ಗೆ ಮತ್ತಷ್ಟು ಅರಿವು ಮೂಡಿಸಬೇಕಿದೆ ಎಂದು ಹೇಳಿದರು.

ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಜಗತ್ತು ದಳ್ಳುರಿ ಮೇಲೆ ನಿಂತ ಸಂದರ್ಭದಲ್ಲಿ ಪ್ರದರ್ಶನ ಪ್ರಸ್ತುತವಾಗಿದೆ. ಇಂತಹ ಅವಘಡಗಳ ಸ್ಥಿತಿಯಲ್ಲಿ ಜಗತ್ತನ್ನು ಗೆಲ್ಲಲು ತ್ಯಾಗದಿಂದ ಮಾತ್ರವೇ ಸಾಧ್ಯವಾಗಲಿದೆ ಎಂದು ಹೇಳಿದರು.

ನಾಡೋಜ ಡಾ. ಹಂಪ ನಾಗರಾಜಯ್ಯ ಮಾತನಾಡಿ, ಮುಂದಿನ ಫೆಬ್ರವರಿಯಲ್ಲಿ ಶ್ರವಣಬೆಳಗೊಳದಲ್ಲಿ ವಿಶ್ವವಿಖ್ಯಾತ 58 ಅಡಿ ಎತ್ತರದ ಬಾಹುಬಲಿಯ ಮಹಾ ಮಸ್ತಕಾಭಿಷೇಕ ನಡೆಯಲು ಕ್ಷಣಗಣನೆ ಆರಂಭವಾಗಿದೆ. ಅದಕ್ಕೂ ಮೊದಲೇ ಲಾಲ್‌ಬಾಗ್‌ನಲ್ಲಿ ಅದರ ವೈಭವವನ್ನು ತೆರೆದಿಟ್ಟಿರುವುದು ಶ್ಲಾಘನೀಯ ಎಂದು ಹೇಳಿದರು.

ಗಮನ ಸೆಳೆದ ಬಾಹುಬಲಿ: ಪುಷ್ಪ ಪ್ರದರ್ಶನದಲ್ಲಿ ಬಾಹುಬಲಿ ಕುರಿತ ಪ್ರದರ್ಶನ ಜೊತೆಗೆ ಹೂ ತೋಟಗಳು, ತರಕಾರಿ ತೋಟ, ತಾರಸಿ ತೋಟ, ಉದ್ಯಾನವನ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಜೊತೆಗೆ ತರಕಾರಿ ಕೆತ್ತನೆ, ಡಚ್ ಹೂವಿನ ಜೋಡಣೆ, ಒಣ ಹೂವಿನ ಜೋಡಣೆ, ಥಾಯ್ ಆರ್ಟ್, ಜಾನೂರು ಮತ್ತು ಕುಬ್ಜ ಮರಗಳ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯುತ್ತಿದ್ದವು.

ನೂರಕ್ಕೂ ಅಧಿಕ ಬಗೆಯ ವೈವಿಧ್ಯಮಯ ವಾರ್ಷಿಕ ಹೂಗಳಿಂದ ಕೂಡಿದ ಈ ಪ್ರದರ್ಶನದಲ್ಲಿ ವಿಶೇಷವಾಗಿ ಹೂಬಿಡುವ ಆಕರ್ಷಕ ಅಂಥೋರಿಯಂ, ಆರ್ಕಿಡ್ಸ್, ವಿಂಕಾ, ಬೋಗನ್ವಿಲ್ಲಾ, ಇಂಪೇಷನ್ಸ್, ಲಿಲ್ಲಿ, ಅಗಾಪಾಂಥಸ್, ಹೆಲಿಕೋನಿಯಾ, ಎಗೋನಿಯಾ, ಕಾರ್ನೇಷನ್, ಗುಲಾಬಿ, ಸ್ಕೈಲೊಮನ್, ಪೆಟೂನಿಯಾ, ಪಾಯಿನ್ ಸೆಟಿಯಾ ಹೂ ಗಿಡಗಳನ್ನು ಪ್ರದರ್ಶಿಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಲೋಕೋಪಯೋಗಿ ಸಚಿವ ಎಚ್.ಸಿ. ಮಹದೇವಪ್ಪ, ಶಾಸಕರಾದ ರಾಜೇಶ್, ನಾರಾಯಣಸ್ವಾಮಿ, ಮೇಯರ್ ಆರ್.ಸಂಪತ್‌ರಾಜ್, ತೋಟಗಾರಿಕೆ ಇಲಾಖೆ ಆಯುಕ್ತ ಎಸ್.ಎಸ್. ಪಾಟೀಲ್, ಮೈಸೂರು ಉದ್ಯಾನ ಕಲಾ ಸಂಘದ ಉಪಾಧ್ಯಕ್ಷ ಬಿ.ಆರ್.ವಾಸುದೇವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X