Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ.21: ಪುತ್ತೂರು ಕ್ಯಾಂಪ್ಕೊ ಸೌಲಭ್ಯ ಸೌಧ...

ಜ.21: ಪುತ್ತೂರು ಕ್ಯಾಂಪ್ಕೊ ಸೌಲಭ್ಯ ಸೌಧ ಉದ್ಘಾಟನೆ

ಗೋದಾಮಿಗೆ ಶಂಕುಸ್ಥಾಪನೆ, ವಾರಣಾಶಿ ಪ್ರತಿಮೆ ಅನಾವರಣ, ಪ್ರೀಮಿಯಂ ಚಾಕೊಲೇಟ್ ಪ್ಯಾಕ್ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ19 Jan 2018 10:41 PM IST
share

ಪುತ್ತೂರು, ಜ. 19: ಪುತ್ತೂರಿನಲ್ಲಿರುವ ಕ್ಯಾಂಪ್ಕೊ ಚಾಕಲೇಟು ಕಾರ್ಖಾನೆ ಆವರಣದಲ್ಲಿ 13 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ‘ಸೌಲಭ್ಯ ಸೌಧ’ ಉದ್ಘಾಟನೆ, ಕಾವುವಿನಲ್ಲಿ ನಿರ್ಮಾಣಗೊಳ್ಳುವ ಬೃಹತ್ ಗೋದಾಮಿನ ಶಂಕುಸ್ಥಾಪನೆ ಸಮಾರಂಭ, ಕ್ಯಾಂಪ್ಕೋ ಸ್ಥಾಪಕಾಧ್ಯಕ್ಷ ವಾರಣಾಸಿ ಸುಬ್ರಾಯ ಭಟ್ ಪ್ರತಿಮೆ ಅನಾವರಣ, ನೂತನ ಪ್ರೀಮಿಯಂ ಚಾಕೊಲೇಟ್ ಪ್ಯಾಕ್ ಬಿಡುಗಡೆ ಸಮಾರಂಭ ಜ.21ರಂದು ನಡೆಯಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಮತ್ತು ಆಡಳಿತ ನಿರ್ದೇಶಕ ಸುರೇಶ್ ಭಂಡಾರಿ ಎಂ ತಿಳಿಸಿದ್ದಾರೆ.

ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 1986ರಲ್ಲಿ ಆರಂಭಗೊಂಡ ಕ್ಯಾಂಪ್ಕೊ ಸಂಸ್ಥೆಯು ಕಳೆದ ಮೂರು ದಶಕಗಳಲ್ಲಿ ಬಹುಮುಖವಾಗಿ ಬೆಳೆದು, ಇಂದು ವಾರ್ಷಿಕ 23,000 ಮೆಟ್ರಿಕ್ ಟನ್ ಉತ್ಪಾದನಾ ಸಾಮರ್ಥ್ಯ ಹೊಂದಿದೆ. ಫುಡ್ ಸೇಫ್ಟಿ ಸ್ಟ್ಯಾಂಡರ್ಡ್ ಅಸೋಸಿಯೇಶನ್ ಆಫ್ ಇಂಡಿಯಾ (ಎಫ್‌ಎಸ್‌ಎಸ್‌ಎಐ)ದ ಆಹಾರ ಸುರಕ್ಷತೆಗೆ ತಕ್ಕಂತೆ ಮೇಲ್ದರ್ಜೆಗೇರಿದೆ. ಸಂಸ್ಥೆಯಲ್ಲಿ 800 ಉದ್ಯೋಗಿಗಳು ದುಡಿಯುತ್ತಿದ್ದು, ಮೂರು ಅವಧಿಗಳಲ್ಲಿ ಉತ್ಪಾದನಾ ಕಾರ್ಯ ನಡೆಯುತ್ತಿದೆ. ಇದೀಗ ಸಕಲ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಸೌಲಭ್ಯ ಸೌಧ ನಿರ್ಮಿಸಲಾಗಿದೆ.

4 ಅಂತಸ್ತುಗಳನ್ನು ಹೊಂದಿರುವ, 42,000 ಚದರ ಅಡಿ ವಿಸ್ತೀರ್ಣವುಳ್ಳ ಸೌಲಭ್ಯ ಸೌಧದ ನೆಲ ಅಂತಸ್ತಿನಲ್ಲಿ ಆಡಳಿತಾತ್ಮಕ ಕಚೇರಿ, ಪ್ರಥಮ ಅಂತಸ್ತಿನಲ್ಲಿ ಕೈಗಾರಿಕಾ ಉಪಹಾರ ಗೃಹ, ಆಧುನಿಕ ಪಾಕಶಾಲೆ, ಹವಾ ನಿಯಂತ್ರಿತ ಡೈನಿಂಗ್ ಹಾಲ್, ಪುರುಷ ಹಾಗೂ ಮಹಿಳಾ ಕಾರ್ಮಿಕರಿಗಾಗಿ 1050 ಲಾಕರ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಪೂರ್ಣ ಹವಾನಿಯಂತ್ರಿತವಾಗಿರುವ ಎರಡನೇ ಅಂತಸ್ತಿನಲ್ಲಿ ಚಾಕೊಲೊಟ್ ಉತ್ಪನ್ನಗಳ ಪ್ಯಾಕಿಂಗ್ ನಡೆಯುತ್ತದೆ. ಮೂರನೇ ಅಂತಸ್ತಿನಲ್ಲಿ 60 ಆಸನ ಹೊಂದಿರುವ ಸುವ್ಯವಸ್ಥಿತವಾದ ಬೋರ್ಡ್ ಮೀಟಿಂಗ್ ಹಾಲ್ ಇದೆ. ಚಾಕೊಲೆಟ್ ಉತ್ಪನ್ನಗಳ ಪ್ಯಾಕಿಂಗ್ ಸಂಬಂಧಿಸಿದ ಎಲ್ಲ ಪರಿಕರಗಳನ್ನು ಈ ಅಂತಸ್ತಿನಲ್ಲಿ ಲಭ್ಯವಿರುವಂತೆ ವ್ಯವಸ್ಥೆ ಮಾಡಲಾಗಿದೆ. ಮಳೆ ಕೊಯ್ಲು, ಅಗ್ನಿ ನಿರೋಧಕ ವ್ಯವಸ್ಥೆ, ಆಧುನಿಕ ಏರ್ ಶವರ್ ವ್ಯವಸ್ಥೆ ಕಲ್ಪಿಸಲಾಗಿದೆ.

ನೂತನ ಸೌಲಭ್ಯ ಸೌಧವನ್ನು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸುರೇಶ್ ಪ್ರಭು ಉದ್ಘಾಟಿಸಲಿದ್ದಾರೆ. ದಿ. ವಾರಣಾಸಿ ಸುಬ್ರಾಯ ಭಟ್ ಅವರ ಪುತ್ಥಳಿಯನ್ನು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಕಾವು ಬಳಿಯ 11.5 ಎಕರೆ ಪ್ರದೇಶದಲ್ಲಿ ಕರಿಮೆಣಸು, ಅಡಕೆ, ರಬ್ಬರ್ ದಾಸ್ತಾನು ಕೇಂದ್ರವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಪ್ರೀಮಿಯಮ್ ಮಾದರಿಯ ಚಾಕಲೇಟನ್ನು ಸಂಸದೆ ಶೋಭಾ ಕರಂದ್ಲಾಜೆ ಅನಾವರಣಗೊಳಿಸಲಿದ್ದಾರೆ. ಸಹಕಾರ ಭಾರತಿಯ ರಾಷ್ಟ್ರೀಯ ಅಧ್ಯಕ್ಷ ಜ್ಯೋತೀಂದ್ರ ಭಾಯಿ ಮೆಹ್ತಾ, ಶಾಸಕಿ ಶಕುಂತಲಾ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕ್ಯಾಂಪ್ಕೋ ಸಂಸ್ಥೆಯ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ, ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಕ್ಯಾಂಪ್ಕೊ ಚಾಕಲೇಟ್ ಕಂಪನಿಯ ಎಜಿಎಂ ಪ್ರಾಸ್ಸಿಸ್ ಡಿ’ಸೋಜಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X