Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಣಕಲ್ ಸರಕಾರಿ ಆಸ್ಪತ್ರೆಯಲ್ಲಿ ಪಾನಮತ್ತ...

ಬಣಕಲ್ ಸರಕಾರಿ ಆಸ್ಪತ್ರೆಯಲ್ಲಿ ಪಾನಮತ್ತ ವೈದ್ಯ: ಸ್ಥಳೀಯರ ಆರೋಪ

ವಾರ್ತಾಭಾರತಿವಾರ್ತಾಭಾರತಿ20 Jan 2018 5:40 PM IST
share
ಬಣಕಲ್ ಸರಕಾರಿ ಆಸ್ಪತ್ರೆಯಲ್ಲಿ ಪಾನಮತ್ತ ವೈದ್ಯ: ಸ್ಥಳೀಯರ ಆರೋಪ

ಮೂಡಿಗೆರೆ, ಜ. 20: ಇಲ್ಲೊಬ್ಬ ವೈದ್ಯ  ಮಹಾಶಯ ಕುಡಿದು ತೂರಾಡುತ್ತಲೇ ಬಂದು ರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು ಕಾಣುತ್ತಿರುವ ಸ್ಥಳೀಯರು ತೀವ್ರ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ರೋಗಿಗಳು ಸರಕಾರಿ ಆಸ್ಪತ್ರೆಯ ವೈದ್ಯರನ್ನುನಂಬಿ ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ ಈ ವೈದ್ಯನಿಗೆ ಮಾತ್ರ ಹೇಳುವವರು ಇಲ್ಲ, ಕೇಳುವವರು ಇಲ್ಲದಂತಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಸರಕಾರಿ ಆಸ್ಪತ್ರೆಯ ವೈದ್ಯ ಕಂಠ ಪೂರ್ತಿ ಕುಡಿದು ಅವಾಂತರ ಮಾಡಿಕೊಂಡಿದ್ದಾರೆ. ರೋಗಿಗಳಿಗೆ ಚಿಕಿತ್ಸೆ ಕೊಡುವುದನ್ನ ಬಿಟ್ಟು ಪ್ರತಿನಿತ್ಯವೂ ಪಾನಮತ್ತನಾಗಿ ರೋಗಿಗಳಿಗೆ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬಣಕಲ್ ಸರಕಾರಿ ಆಸ್ಪತ್ರೆ ವೈದ್ಯ ಡಾ. ರವಿ ಡ್ಯೂಟಿ ಟೈಮ್‌ನಲ್ಲಿ ಡ್ಯೂಟಿ ಮಾಡುವುದನ್ನು ಬಿಟ್ಟು ಕಂಠ ಪೂರ್ತಿ ಕುಡಿದು ರಸ್ತೆಯಲ್ಲಿ ಮಾಡಿಕೊಂಡಿರುವ ಅವಾಂತರವನ್ನು ಸ್ಥಳೀಯರು ತಮ್ಮ ಮೊಬೈಲ್ ಗಳಲ್ಲಿ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಬಣಕಲ್ ಕೊಟ್ಟಿಗೆಹಾರ ಸುತ್ತ ಮುತ್ತಲಿನ ಗ್ರಾಮಗಳ ಗ್ರಾಮಸ್ಥ ರಿಗೆ ಇರುವುದು ಬಣಕಲ್ ಸರಕಾರಿ ಆಸ್ಪತ್ರೆ ಮಾತ್ರ ಇದನ್ನೇ ನಂಬಿ ನಿತ್ಯವೂ ನೂರಾರು ಬಡ ರೋಗಿಗಳು ಚಿಕಿತ್ಸೆ ಪಡೆಯಲು ಬಂದರೆ ಸರಿಯಾದ ಚಿಕಿತ್ಸೆ ಸಿಗದೆ ಬೇಸತ್ತು ಹೋಗುತ್ತಿದ್ದಾರೆ. 

ಕಳೆದ 5 ತಿಂಗಳ ಹಿಂದೆ ಬಣಕಲ್ ಸರಕಾರಿ ಆಸ್ಪತ್ರೆಗೆ ವರ್ಗವಾಗಿ ಬಂದಿರುವ ಡಾ. ರವಿ ಮುಂಜಾನೆಯಿಂದ ರಾತ್ರಿಯವರೆಗೂ ಕುಡಿಯುವುದನ್ನುನಿತ್ಯವೂ ಕಾಯಕ ಮಾಡಿಕೊಂಡಿರುವ ಆರೋಪವಿದೆ. ಪಾನ ಮತ್ತನಾಗಿ ಆಸ್ಪತ್ರೆಗೆ ದಿನಿನಿತ್ಯ ಬರುತ್ತಾರೆ ಎಂದೂ ಸ್ಥಳೀಯರು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಬಣಕಲ್ ನಗರದ ಅಂಗಡಿಗಳಿಗೆ ಹೊಗಿ ತೊಂದರೆ ನೀಡುತ್ತಿದ್ದು, ಡಾ. ರವಿಯ ಅವಾಂತರಗಳಿಂದ ರೋಗಿಗಳು, ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಬಣಕಲ್ ಅಂಗಡಿಗಳ ಮಾಲಕರು ಬೇಸತ್ತು ಹೋಗಿದ್ದಾರೆ. ಆರೋಗ್ಯ ಸಚಿವರೆ ಒಮ್ಮೆ ಇತ್ತ ನೋಡಿ ಎಂದು ಜನತೆ ಕೇಳುತ್ತಿದ್ದು, ಬಣಕಲ್ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ನೀಡುವ ಕೆಲಸವಾಗಬೇಕಿದೆ.

ಅವರು ಕೋಲಾರದಿಂದ ವರ್ಗಾವಣೆ ಪಡೆದು ಬಂದಿರುವ ವೈದ್ಯರು. ಅಲ್ಲಿಂದ ಶಿಕ್ಷೆಯ ವರ್ಗಾವಣೆಯಾಗಿ ಬಣಕಲ್‌ಗೆ ಬಂದಿದ್ದಾರೆ. ಅವರು ಹಿಂದೆಯೂ ಇದೇ ರೀತಿ ವರ್ತಿಸುತಿದ್ದ ಬಗ್ಗೆ ದೂರುಗಳು ಕೇಳಿ ಬಂದಿದ್ದರಿಂದ ಅವರಿಗೆ ಎಚ್ಚರಿಕೆ ನೀಡಲಾಗಿತ್ತು. ನಿನ್ನೆ ಕೂಡ ಹೀಗೆಯೇ ಪಾನಮತ್ತರಾಗಿರುವ ಬಗ್ಗೆ ದೂರು ಬಂದಿದೆ. ಬಣಕಲ್ ಮೆಡಿಕಲ್ ಆಪೀಸರ್ ಇಕ್ಲಾಖ್ ಅಹ್ಮದ್ ಅವರಿಗೆ ಈ ಬಗ್ಗೆ ವರದಿ ನೀಡುವಂತೆ ಕೇಳಿದ್ದೇನೆ. ನಿನ್ನೆಯ ಸಂಬಳ ತಡೆ ಹಿಡಿಯಲು ಸೂಚಿಸಿದ್ದೇನೆ. ವೈಧ್ಯರ ವರ್ತನೆ ಹೀಗೆಯೇ ಮುಂದುವರಿದರೆ ಅವರು ಮಾನಸಿಕವಾಗಿ ಸರಿಯಾಗುವ ತನಕ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗುವುದು.

- ಡಾ. ಸುಂದರೇಶ್, ತಾಲೂಕು ವೈಧ್ಯಾಧಿಕಾರಿ, ಮೂಡಿಗೆರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X