Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆರೆಸ್ಸೆಸ್‌ನಂತಹ ಅಪಾಯಕಾರಿ ಸಂಘಟನೆ...

ಆರೆಸ್ಸೆಸ್‌ನಂತಹ ಅಪಾಯಕಾರಿ ಸಂಘಟನೆ ಜಗತ್ತಿನಲ್ಲೇ ಇಲ್ಲ: ಬಿ.ಕೆ.ಹರಿಪ್ರಸಾದ್

‘ಸಂಚುಗಾರ ಸಂಘ ಪರಿವಾರ’ ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ20 Jan 2018 6:12 PM IST
share
ಆರೆಸ್ಸೆಸ್‌ನಂತಹ ಅಪಾಯಕಾರಿ ಸಂಘಟನೆ ಜಗತ್ತಿನಲ್ಲೇ ಇಲ್ಲ: ಬಿ.ಕೆ.ಹರಿಪ್ರಸಾದ್

ಬೆಂಗಳೂರು, ಜ.20: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವುದು ಜನರಿಂದ ಆಯ್ಕೆಯಾದ ಬಿಜೆಪಿ ಪ್ರತಿನಿಧಿಗಳಲ್ಲ, ನಾಗ್ಪುರದಿಂದ ನೇಮಿಸಲ್ಪಟ್ಟಿರುವ ಆರೆಸ್ಸೆಸ್ ನಾಯಕರೆಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ತಿಳಿಸಿದರು.

ಶನಿವಾರ ಸಿರಿವರ ಪ್ರಕಾಶನ ನಗರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಲೇಖಕಿ ಕಲೈಸೆಲ್ವಿ ಅನುವಾದಿಸಿರುವ ‘ಸಂಚುಗಾರ ಸಂಘ ಪರಿವಾರ’ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ದೇಶದ ಅತ್ಯುನ್ನತ ಸ್ಥಾನದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸಹ ಸಂಘಪರಿವಾರದ ಕೈಗೊಂಬೆಯಾಗಿದ್ದಾರೆ. ಕೇಂದ್ರದ ಸಚಿವ ಸಂಪುಟಕ್ಕೆ ಸ್ವತಂತ್ರವಾಗಿ ತೀರ್ಮಾನ ಕೈಗೊಳ್ಳುವಂತಹ ಯಾವುದೇ ಅಧಿಕಾರವಿಲ್ಲವೆಂದು ತಿಳಿಸಿದರು.

ಬಿಜೆಪಿ ಅಧಿಕಾರದಲ್ಲಿರುವ ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್, ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರದ ಮೇಲೆ ಆರೆಸ್ಸೆಸ್ ತನ್ನ ಹಿಡಿತವನ್ನು ಸಾಧಿಸಿದೆ. ಹೀಗಾಗಿ ಬಿಜೆಪಿ ಆಡಳಿತವಿರುವ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಬದಲಿಗೆ, ಕೋಮು ಗಲಭೆ ಪ್ರಕರಣಗಳೇ ಹೆಚ್ಚಾಗುತ್ತಿದೆ. ಈ ಮೂಲಕ ಜನಸಾಮಾನ್ಯರು ಹಸಿವಿನ ಜೊತೆಗೆ ದಿನಪೂರ್ತಿ ಆತಂಕದಲ್ಲೇ ಜೀವನ ದೂಡುವಂತಾಗಿದೆ ಎಂದು ಅವರು ವಿಷಾದಿಸಿದರು.

ಆರೆಸ್ಸೆಸ್ ಅಕ್ಟೋಪಸ್‌ನಂತೆ ಅಪಾಯಕಾರಿ: ವಿಷಕಾರಿ ಹಾವನ್ನು ನಾವು ನಂಬಬಹುದು. ಆದರೆ, ಕೇವಲ ಸುಳ್ಳುಗಳನ್ನು ಹಬ್ಬಿಸಿಯೇ ದೇಶದಲ್ಲಿ ವೈದಿಕ ಸಿದ್ಧಾಂತವನ್ನು ಬಿತ್ತುತ್ತಿರುವ ಆರೆಸ್ಸೆಸ್‌ನಂತಹ ಅಪಾಯಕಾರಿ ಸಂಘಟನೆ ಜಗತ್ತಿನಲ್ಲಿಯೇ ಸಿಗುವುದಿಲ್ಲ. ಆರೆಸ್ಸೆಸ್ ಅಕ್ಟೋಪಸ್‌ನಂತೆ, ಯಾರನ್ನು ಹೇಗೆ ಹತ್ಯೆ ಮಾಡಲಿದೆಯೋ ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ಜನತೆ ಸದಾ ಎಚ್ಚರಿಕೆಯಿಂದಿರಬೇಕು ಎಂದು ಅವರು ಹೇಳಿದರು.

ಹಿರಿಯ ಪತ್ರಕರ್ತ ಅಗ್ನಿ ಶ್ರೀಧರ್ ಮಾತನಾಡಿ, ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾವು ಹಿಂದೂಗಳು ಎಂದು ಘೋಷಿಸಿಕೊಂಡಿರುವುದು ಒಳ್ಳೆಯ ಬೆಳವಣಿಗೆ. ದೇಶದಲ್ಲಿ ಹಿಂದೂ, ಮುಸ್ಲಿಮ್ ಹಾಗೂ ಕ್ರಿಶ್ಚಿಯನ್ನರಿಂದ ಸಮಸ್ಯೆಯಾಗುತ್ತಿಲ್ಲ. ಬದಲಾಗಿ ಬ್ರಾಹ್ಮಣಶಾಹಿ ವೈದಿಕರಿಂದ ದೇಶದಲ್ಲಿ ದ್ವೇಷ, ಅಸಹನೆ, ಅತ್ಯಾಚಾರ, ಅನಾಚಾರಗಳು ನಡೆಯುತ್ತಿದ್ದು, ಇದು ದೇಶಕ್ಕೆ ದೊಡ್ಡ ಸಮಸ್ಯೆಯಾಗಿದೆ ಎಂದು ತಿಳಿಸಿದರು.

ವೈದಿಕರೇ ನಮ್ಮ ಶತ್ರುಗಳು: ದೇಶದಲ್ಲಿ ತಾಂಡವವಾಡುತ್ತಿರುವ ಹಲವಾರು ಸಮಸ್ಯೆಗಳಿಗೆ ಕಾರಣ ಯಾರು ಎಂಬುದನ್ನು ಕೂಲಂಕುಶವಾಗಿ ಹುಡುಕುತ್ತಾ ಹೋದರೆ, ವೈದಿಕರ ಜನವಿರೋಧಿ ನೀತಿಗಳು ದೇಶದಲ್ಲಿ ಮಾಡಿರುವ ಅವಾಂತರಗಳು ಗೋಚರವಾಗುತ್ತದೆ. ಹೀಗಾಗಿ ನಮ್ಮ ಶತ್ರಗಳು ವೈದಿಕರೇ ಎಂಬುವುದರಲ್ಲಿ ಸಂಶಯವಿಲ್ಲ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕುವೆಂಪು ಭಾಷಾ ಭಾರತಿ ಅಧ್ಯಕ್ಷ ಪ್ರೊ.ಕೆ.ಮರುಳ ಸಿದ್ದಪ್ಪ, ಸಂಚುಗಾರ ಸಂಘ ಪರಿವಾರದ ಮೂಲ ಲೇಖಕ ವಿಡುದಲೈ ರಾಜೇಂದ್ರನ್, ಲೇಖಕಿ ಕಲೈಸೆಲ್ವಿ ಹಾಗೂ ಸಿರಿವರ ಪ್ರಕಾಶನದ ರವೀಂದ್ರನಾಥ್ ಮತ್ತಿತರಿದ್ದರು.

ವೈದಿಕರನ್ನು ಬೇರ್ಪಡಿಸೋಣ:
ದೇಶದಲ್ಲಿರುವ ಪ್ರಗತಿಪರರು, ಜಾತ್ಯತೀತವಾದಿಗಳು, ಸಮಾನತೆ, ಸಹಬಾಳ್ವೆಯ ಬಗ್ಗೆ ಆಶಯವನ್ನಿಟ್ಟುಕೊಂಡಿರುವ ಪ್ರತಿಯೊಬ್ಬರೂ ಹಿಂದೂಗಳಾಗಿದ್ದಾರೆ. ಆದರೆ, ಅಸಮಾನತೆಯನ್ನೆ ತನ್ನ ಸಿದ್ಧಾಂತವನ್ನಾಗಿಸಿಕೊಂಡಿರುವ ವೈದಿಕರು ಹಿಂದೂಗಳೆಂದು ಹೇಳಿಕೊಂಡು, ಹಿಂದೂ ಧರ್ಮಕ್ಕೆ ಅಪಪ್ರಚಾರ ಮಾಡಿದ್ದಾರೆ. ಹೀಗಾಗಿ ಅವರನ್ನು ಹಿಂದೂ ಧರ್ಮದಿಂದ ಬೇರ್ಪಡಿಸಬೇಕು.
-ಅಗ್ನಿ ಶ್ರೀಧರ್ ಹಿರಿಯ ಪತ್ರಕರ್ತ

ಅಸ್ವಸ್ಥ ಹೆಗಡೆ ರಾಜೀನಾಮೆ ನೀಡಲಿ :
ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆಗೆ ಬುದ್ಧಿ ಭ್ರಮಣೆಯಾಗಿದೆ. ಅವರು ಜನಪ್ರತಿನಿಧಿಯಾಗಿ ಮುಂದುವರೆಯುವುದಕ್ಕೆ ಕಿಂಚಿತ್ತೂ ಯೋಗ್ಯತೆಯಿಲ್ಲ. ಅವರ ಹೇಳಿಕೆಯಿಂದಾಗಿ ಇಡೀ ರಾಜ್ಯದ ಜನತೆ ತಲೆ ತಗ್ಗಿಸುವಂತಾಗಿದೆ. ಹೀಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮನೆಯಲ್ಲಿ ಕುಳಿತುಕೊಳ್ಳುವುದು ಒಳಿತು. ದಕ್ಷಿಣ ಕನ್ನಡದಲ್ಲಿ ಕೋಮು ದಳ್ಳುರಿಗೆ ಹತ್ಯೆಯಾಗಿರುವ ಬಹುತೇಕರನ್ನು ಸಂಘಪರಿವಾರದವರೆ ಕೊಂದಿದ್ದಾರೆ. ಪ್ರವೀಣ್ ಪೂಜಾರಿಯೆಂಬ ಬಿಜೆಪಿ ನಾಯಕನನ್ನು ಬಜರಂಗದಳ ಹತ್ಯೆ ಮಾಡಿದೆ. ಅಂದರೆ, ಹಿಂದುಳಿದ, ದಲಿತ ಜಾತಿಗೆ ಸೇರಿದ ಯಾವುದೇ ವ್ಯಕ್ತಿ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಬೆಳೆಯುತ್ತಿದ್ದಂತೆ ಸಂಘಪರಿವಾರ ಆತನನ್ನು ಹತ್ಯೆ ಮಾಡಲಿದೆ. ಇದೇ ಅದರ ನೀತಿ. ಅಲ್ಲಿ ಬದುಕುವುದಕ್ಕೆ ಅವಕಾಶವಿರುವುದು ಕೇವಲ ಬ್ರಾಹ್ಮಣರಿಗೆ ಮಾತ್ರ.
-ಬಿ.ಕೆ.ಹರಿಪ್ರಸಾದ್ ರಾಜ್ಯಸಭಾ ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X