Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನರ ತೆರಿಗೆ ಹಣದಲ್ಲಿ ರಾಜ್ಯ ಪ್ರವಾಸ...

ಜನರ ತೆರಿಗೆ ಹಣದಲ್ಲಿ ರಾಜ್ಯ ಪ್ರವಾಸ ಮಾಡುವವರಿಗೆ ಜನಪರ ಕಾಳಜಿ ಇದೆಯೇ : ದೇವೇಗೌಡ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ20 Jan 2018 6:56 PM IST
share
ಜನರ ತೆರಿಗೆ ಹಣದಲ್ಲಿ ರಾಜ್ಯ ಪ್ರವಾಸ ಮಾಡುವವರಿಗೆ ಜನಪರ ಕಾಳಜಿ ಇದೆಯೇ : ದೇವೇಗೌಡ ಪ್ರಶ್ನೆ

ಬೆಂಗಳೂರು, ಜ. 20: ರಾಜ್ಯ ಸರಕಾರ ತನ್ನ ಸಾಧನೆ ಹೇಳಲು 650 ಕೋಟಿ ರೂ.ಖರ್ಚು ಮಾಡುತ್ತಿದ್ದು, ಇದು ಯಾರಪ್ಪನ ಮನೆಯ ದುಡ್ಡು. ಜನತೆಯ ತೆರಿಗೆ ಹಣದಲ್ಲಿ ಪ್ರವಾಸ ಮಾಡುವ ಇವರಿಗೆ ಜನಪರ ಕಾಳಜಿ ಇದೆಯೇ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪ್ರಶ್ನಿಸಿದ್ದಾರೆ.

ಶನಿವಾರ ಇಲ್ಲಿನ ಗಾಂಧಿ ನಗರದಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹಾಡುಹಗಲೇ ಕೊಲೆ-ಸುಲಿಗೆ ನಡೆಯುತ್ತಿವೆ. ಪೊಲೀಸ್ ಅಧಿಕಾರಿಗಳು ಕೆಂಪಯ್ಯನ ಉಪಟಳದಿಂದ ಕೈಚೆಲ್ಲಿದ್ದು, ಜನತೆ ನೆಮ್ಮದಿ ಕಳೆದುಕೊಳ್ಳುವ ಸ್ಥಿತಿ ಸೃಷ್ಟಿಯಾಗಿದೆ ಎಂದು ಹೇಳಿದರು.

ನಾನು ಬಿಡುವುದಿಲ್ಲ: ರಾಜ್ಯದಲ್ಲಿ ಶೋಷಣೆ ರಹಿತ ವ್ಯವಸ್ಥೆ ಬರಬೇಕಿದೆ. ದೇವರು ನನಗೆ ಆ ಶಕ್ತಿ ಕೊಟ್ಟಿದ್ದಾನೆ. ನಾನು ಇವರನ್ನು ಸುಮ್ಮನೆ ಬಿಡುವುದಿಲ್ಲ. ರಾಜ್ಯದೆಲ್ಲೆಡೆ ಪ್ರವಾಸ ಕೈಗೊಳ್ಳುವೆ. ಜನತೆ ನನಗೆ ಸಹಕಾರ ನೀಡುವ ವಿಶ್ವಾಸವಿದೆ ಎಂದು ದೇವೇಗೌಡ ತಿಳಿಸಿದರು.

ನೈತಿಕತೆ ಇಲ್ಲ:  ರಾಜ್ಯವನ್ನು ಲೂಟಿ ಮಾಡುತ್ತಿರುವವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ ಎಂದು ಟೀಕಿಸಿದ ಅವರು, ಬೆಂಗಳೂರು ಅಭಿವೃದ್ಧಿಗೆ ಮುಹೂರ್ತ ನಿಗದಿಪಡಿಸಿದ್ದು ಯಾರೆಂಬುದು ಜನರಿಗೆ ಗೊತ್ತಿದೆ. ಈಗಿನವರು ನಾವು ಎಲ್ಲವನ್ನು ಮಾಡಿದ್ದೇವೆ ಎಂದು ಹೇಳುತ್ತಾರೆ. ಆದರೆ, ಈ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿರುವುದೇ ದೊಡ್ಡ ಸಾಧನೆ ಎಂದು ದೂರಿದರು.

ತಾನು ಸಿಎಂ ಆಗಿದ್ದು ಕೇವಲ ಒಂದೂವರೆ ವರ್ಷ ಮಾತ್ರ. ಆಗ ಬೆಂಗಳೂರನ್ನು ಲೂಟಿ ಮಾಡುತ್ತಿದ್ದವರ ಕೈಕಟ್ಟಿ ಹಾಕಿದ್ದೆ. ಆದರೆ, ಈಗ ಬೆಂಗಳೂರನ್ನು ಲೂಟಿ ಮಾಡುತ್ತಿದ್ದಾರೆಂದ ಅವರು, ಬಡವರ ಹೆಸರಲ್ಲಿ ಸರಕಾರ ಲೂಟಿ ಮಾಡುತ್ತಿವೆ. ಇನ್ನು 3 ತಿಂಗಳಲ್ಲಿ ನಮ್ಮ ಸರಕಾರ ಬಂದ ನಂತರ, ಬೆಂಗಳೂರನ್ನು ಲೂಟಿ ಹೊಡೆದವರ ಜಾತಕ ಬಯಲು ಮಾಡುತ್ತೀವಿ ಎಂದು ಎಚ್ಚರಿಸಿದರು.

ಮುಂಬರುವ ವಿಧಾನಸಭಾ ಚುನಾವಣೆಗೆ ಗಾಂಧಿನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯನ್ನಾಗಿ ನಾರಾಯಣಸ್ವಾಮಿ ಕಣಕ್ಕಿಳಿಯಲಿದ್ದು, ಅವರು ಗೆಲ್ಲಬೇಕು. ಆ ಮೂಲಕ ಈ ಕ್ಷೇತ್ರವನ್ನು ಲೂಟಿ ಮಾಡುವವರಿಗೆ ಬುದ್ಧಿ ಕಲಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ವಾಗ್ದಾಳಿ ನಡೆಸಿದರು.

ಅಭ್ಯರ್ಥಿ ನಾರಾಯಣಸ್ವಾಮಿ, ಮುಖಂಡರಾದ ಶಿವರಾಮೇಗೌಡ ಸೇರಿದಂತೆ ಸಮಾವೇಶದಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

‘ಇಬ್ಬರು ಮಹಾನುಭಾವರು ಪಕ್ಷವನ್ನು ಬಿಟ್ಟು ಓಡಿಹೋಗಿದ್ದಾರೆ. ಇದರಿಂದ ಪಕ್ಷಕ್ಕೆ ಯಾವುದೇ ತೊಂದರೆ ಇಲ್ಲ. ನಮ್ಮ ಪಕ್ಷಕ್ಕೆ ಯಾವುದೇ ನಷ್ಟವೂ ಇಲ್ಲ. ರಾಯಚೂರಿನ ಕಾರ್ಯಕರ್ತರು ಪಕ್ಷಕ್ಕೆ ಶಕ್ತಿ ತುಂಬಲಿದ್ದಾರೆ’
-ಎಚ್.ಡಿ.ದೇವೇಗೌಡ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X