Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸತತ 9 ಗಂಟೆಗಳ ಕಾರ್ಯಾಚರಣೆ:...

ಸತತ 9 ಗಂಟೆಗಳ ಕಾರ್ಯಾಚರಣೆ: ಮನೆಯಲ್ಲಿದ್ದ ಚಿರತೆಯ ಸೆರೆ

ವಾರ್ತಾಭಾರತಿವಾರ್ತಾಭಾರತಿ20 Jan 2018 7:53 PM IST
share
ಸತತ 9 ಗಂಟೆಗಳ ಕಾರ್ಯಾಚರಣೆ: ಮನೆಯಲ್ಲಿದ್ದ ಚಿರತೆಯ ಸೆರೆ

ತುಮಕೂರು, ಜ.20: ನಿರ್ಮಾಣ ಹಂತದ ಕಟ್ಟಡದಲ್ಲಿದ್ದ ವೇಳೆ ಗಾಬರಿಗೊಂಡು ಅರಣ್ಯ ಇಲಾಖೆಯ ಸಿಬ್ಬಂದಿಯೊಬ್ಬರನ್ನು ಗಾಯಗೊಳಿಸಿ, ನಂತರ ಮನೆಯೊಂದರಲ್ಲಿ ಅಡಗಿ ಕುಳಿತ ಚಿರತೆಯನ್ನು ಸತತ 9 ಗಂಟೆಗಳ ಕಾಲ ಅರಣ್ಯ, ಪೊಲೀಸ್ ಹಾಗೂ ಪಶುವೈದ್ಯರು ನಡೆಸಿದ ಜಂಟಿ ಕಾರ್ಯಾಚರಣೆ ಮೂಲಕ ಸೆರೆ ಹಿಡಿದ್ದು, ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸಾಗಿಸಲಾಗಿದೆ.

ಜಯನಗರ ಪಶ್ಚಿಮದ ರಂಗನಾಥ್ ಎಂಬುವವರ ಮನೆಯಲ್ಲಿ ಚಿರತೆ ಅಡಗಿತ್ತು ಎನ್ನಲಾಗಿದ್ದು, ಮನೆಯ ಬಾಗಿಲ ಬಳಿ ಚಿರತೆ ಬಂದಿದ್ದನ್ನು ಗಮನಿಸಿದ ರಂಗನಾಥ ಎಂಬವರ ಸೊಸೆ ವಿನುತಾ, ತನ್ನ ಅತ್ತೆ ವನಜಾಕ್ಷಿಯೊಂದಿಗೆ ಬಚ್ಚಲು ಮನೆ ಸೇರಿದ್ದರು.

ಶನಿವಾರ ಬೆಳಗ್ಗೆ 9:30ರ ಸುಮಾರಿಗೆ ಚಿರತೆಯು, ರಂಗನಾಥ ಅವರ ಮನೆ ಇರುವ ರಸ್ತೆಯಲ್ಲಿ ಹೋಗುವುದನ್ನು ಎದುರು ಮನೆಯವರು ಮಾಡಿರುವ ವಿಡಿಯೋದಲ್ಲಿ ಸೆರೆ ಸಿಕ್ಕಿದೆ. ಬೆಳಗ್ಗೆ ರಂಗನಾಥ್ ಅಂಗಡಿಯಿಂದ ಮನೆಗೆ ಬರುವ ವೇಳೆ ಚಿರತೆ ಬಾಗಿಲ ಬಳಿ ಇರುವುದನ್ನು ಕಂಡು ಒಳಗೆ ಇದ್ದ ಸೊಸೆಗೆ ತಿಳಿಸಿದ್ದು, ನಂತರ ಸೊಸೆ ವಿನುತಾ, ಅತ್ತೆ ವನಜಾಕ್ಷಿ ಅವರೊಂದಿಗೆ ಬಚ್ಚಲು ಮನೆ ಒಳಗೆ ಸೇರಿ ಬಾಗಿಲು ಹಾಕಿಕೊಂಡಿದ್ದರು. ರಂಗನಾಥ್ ಹೊರಗಡೆಯಿಂದ ಮನೆಯ ಬಾಗಿಲು ಹಾಕಿ ಭದ್ರಪಡಿಸಿದ್ದರು.

ವಿಷಯ ತಿಳಿದು ಶಾಸಕ ಡಾ.ರಫೀಕ್ ಅಹಮದ್, ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್ ಮತ್ತು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾ ಗೋಪಿನಾಥ್ ಮತ್ತಿತರ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಅರಣ್ಯ, ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಚಿರತೆ ಹಿಡಿಯಲು ಕ್ಯೂಂಬಿಂಗ್ ಆರಂಭಿಸಿದ್ದರು.

ಕಿಟಕಿ ಮೂಲಕ ಹೊರಗೆ ಕರೆತಂದ ಪೊಲೀಸರು: ಚಿರತೆ ಮನೆಗೆ ನುಗ್ಗಿರುವುದರಿಂದ ಬಚ್ಚಲು ಮನೆಗೆ ಸೇರಿದ್ದ ಅತ್ತೆ ವನಜಾಕ್ಷಿ ಮತ್ತು ಸೊಸೆ ವಿನುತಾ ಅವರನ್ನು ಯಾವುದೇ ಪ್ರಾಣಾಪಾಯವಿಲ್ಲದೆ, ಬಚ್ಚಲು ಮನೆಯ ಕಿಟಕಿಯ ಗೋಡೆ ಒಡೆಯುವ ಮೂಲಕ ಹೊರಗೆ ಕರೆ ತಂದರು.

ನಂತರ ಚಿರತೆಯ ಸೆರೆಗೆ ಕಾರ್ಯಾಚರಣೆಗಿಳಿದ ಅಧಿಕಾರಿಗಳು, ಅರವಳಿಕೆ ತಜ್ಞರಾದ ಡಾ.ಸೃಜನ್, ಡಾ.ನಿಖಿತಾ ಹಾಗೂ ಡಾ.ಮುರುಳಿ ,ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಸಮಾಲೋಚನೆ ನಡೆಸಿ, ಅತ್ತೆ, ಸೊಸೆಯನ್ನು ಹೊರತರಲಾಗಿದ್ದ ಕಿಟಕಿಯಿಂದಲೇ ಆರ್.ಎಫ್.ಓ ಮಹೇಶ್ ಅವರೊಂದಿಗೆ 6 ಮಂದಿ ಸಿಬ್ಬಂದಿಗಳ ತಂಡ ಮನೆಯ ಒಳಗೆ ಪ್ರವೇಶಿಸಿದೆ. ನಂತರ ಚಿರತೆ ಅಡುಗೆ ಮನೆಯಲ್ಲಿ ಅವಿತಿರುವುದನ್ನು ಖಚಿತ ಪಡಿಸಿಕೊಂಡ ಸಿಬ್ಬಂದಿಗಳು ಚಿರತೆಗೆ ಅರೆವಳಿಕೆ ಮದ್ದು ನೀಡಿದ್ದಾರೆ.  ಅರವಳಿಕೆ ಮದ್ದು ನೀಡಿದ ಸುಮಾರು 25 ನಿಮಿಷಗಳ ನಂತರ ಅಡುಗೆ ಮನೆಯ ಬಾಗಿಲಿಗೆ ಕಿಂಡಿ ಕೊರೆದು ಚಿರತೆ ಪ್ರಜ್ಞೆ ತಪ್ಪಿರುವುದನ್ನು ಖಚಿತ ಪಡಿಸಿ, ಅರಣ್ಯ ಸಿಬ್ಬಂದಿ ಬಲೆಯಲ್ಲಿ ಚಿರತೆಯನ್ನು ಬಂಧಿಸಿ ಬನ್ನೇರುಘಟ್ಟದ ಜೈವಿಕ ಅರಣ್ಯ ಉದ್ಯಾನವನಕ್ಕೆ ರವಾನಿಸಿದರು.

ಸ್ಥಳದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳಾದ ರಾಮಲಿಂಗೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾ ಗೋಪಿನಾಥ್,ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ,ಡಿವೈಎಸ್.ಪಿ ನಾಗರಾಜು ಇನ್ನಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X