Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮರ್ಪಕ ಉದ್ಯೋಗಾವಕಾಶಗಳು ಕಲ್ಪಿಸುವಲ್ಲಿ...

ಸಮರ್ಪಕ ಉದ್ಯೋಗಾವಕಾಶಗಳು ಕಲ್ಪಿಸುವಲ್ಲಿ ಸರಕಾರಗಳು ವಿಫಲ: ಕೆ.ಪಿ.ಸುರೇಶ್

ವಾರ್ತಾಭಾರತಿವಾರ್ತಾಭಾರತಿ20 Jan 2018 8:01 PM IST
share
ಸಮರ್ಪಕ ಉದ್ಯೋಗಾವಕಾಶಗಳು ಕಲ್ಪಿಸುವಲ್ಲಿ ಸರಕಾರಗಳು ವಿಫಲ: ಕೆ.ಪಿ.ಸುರೇಶ್

ಬೆಂಗಳೂರು, ಜ.20: ಸಮರ್ಪಕ ಉದ್ಯೋಗಾವಕಾಶಗಳು ಕಲ್ಪಿಸುವಲ್ಲಿ ವಿಫಲವಾಗಿರುವ ಸರಕಾರಗಳು ಸ್ಕಿಲ್ ಇಂಡಿಯಾ ಹೆಸರಿನಲ್ಲಿ ತರಬೇತಿ ಕೊಡುವ ಧಾವಂತದಲ್ಲಿವೆ. ಸರಿಯಾದ ತರಬೇತುದಾರರಿಲ್ಲದಿದ್ದರೂ 24 ಲಕ್ಷ ಜನರಿಗೆ ತರಬೇತಿ ಕೊಟ್ಟಿದ್ದೇವೆ ಎಂದು ಕೇಂದ್ರ ಸರಕಾರದ ಅಂಕಿ ಅಂಶ ಮಂಡಿಸುತ್ತಿರುವುದು ವಿಪರ್ಯಾಸ ಎಂದು ಅಂಕಣಕಾರ ಕೆ.ಪಿ.ಸುರೇಶ್ ಅಭಿಪ್ರಾಯಿಸಿದ್ದಾರೆ.

ಶನಿವಾರ ನಗರದ ಗಾಂಧಿಭವನದಲ್ಲಿ ಉದ್ಯೋಗಕ್ಕಾಗಿ ಯುವ ಜನರು ವೇದಿಕೆ ಏರ್ಪಡಿಸಿದ್ದ ಕೃಷಿ ಬಿಕ್ಕಟ್ಟು, ನಿರುದ್ಯೋಗ ಮತ್ತು ಚುನಾವಣೆ ಕುರಿತ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾಗಳು ಆರಂಭ ಮಾಡಿರುವ ತರಬೇತಿಗಳ ಮೂಲಕ ಕೇವಲ ಶೇ.8 ರಷ್ಟು ಜನರಿಗಷ್ಟೇ ತಾತ್ಕಾಲಿಕ ಉದ್ಯೋಗ ನೀಡಿದ್ದಾರೆ ಎಂದರು.

ಮನೆಯಲ್ಲಿ ಎರಡು ಹಸುಗಳನ್ನು ಸಾಕಿಕೊಂಡು, ಎರಡು ಎಕರೆ ಭೂಮಿ ಹೊಂದಿರುವ ರೈತ ಕುಟುಂಬಗಳನ್ನು ಅತ್ಯಂತ ಸುಲಭದಲ್ಲಿ ಸುಸ್ಥಿರ ಜೀವನಕ್ಕೆ ಹೊಂದಿಕೊಳ್ಳುವಂತೆ ಮಾಡಬಹುದು. ಜೊತೆಗೆ, ಉತ್ತಮ ಉದ್ಯೋಗದೊಂದಿಗೆ ಗೌರವಯುತ ಜೀವನ ನಡೆಸುವಂತೆ ಮಾಡಬಹುದು. ಹಾಗೂ ಕುರಿ ಸಾಕಾಣಿಕೆ ಒಂದು ಲಾಭದಾಯಕ ಉದ್ಯಮ. ಅದನ್ನು ಸರಕಾರ ಅಭಿವೃದ್ಧಿಪಡಿಸಬೇಕು ಎಂದು ಹೇಳಿದರು.

ಗ್ರಾಮ ಮಟ್ಟದಲ್ಲಿ ಬೀಜ ಬ್ಯಾಂಕ್ ಸ್ಥಾಪಿಸಬೇಕು. ಅದು ಸುಸ್ಥಿರ ಕೃಷಿ ಸಂಪನ್ಮೂಲ ಕೇಂದ್ರವಾಗಿ ಮಾಡಬೇಕು. ಅದಕ್ಕೆ ಮಹಿಳಾ ಸ್ವ ಸಹಾಯ ಸಂಘಗಳ ಉಸ್ತುವಾರಿ ನೀಡಬೇಕು. ಗ್ರಾಮಕ್ಕೆ ಬರುವ ಎಲ್ಲಾ ಯೋಜನೆಗಳನ್ನು ಈ ಮೂಲಕ ಜಾರಿಗೊಳಿಸಬೇಕು ಎಂದ ಅವರು, ಸ್ಥಳೀಯ ಸಂಪನ್ಮೂಲ ಆಧಾರಿತವಾಗಿ ಉದ್ಯೋಗ ನಿರ್ಮಾಣ ಮಾಡಿದರೆ ಶೇ.40 ರಷ್ಟು ಉದ್ಯೋಗಾವಕಾಶಗಳು ನಿರ್ಮಾಣವಾಗುತ್ತದೆ ಎಂದು ನುಡಿದರು.

ಇಂಧೋರ್‌ನ ನೀತ್ ತಿವಾರಿ ಮಾತನಾಡಿ, ಕೇರಳದಲ್ಲಿ ಕುಟುಂಬಶ್ರೀ ಯೋಜನೆ ಅತ್ಯಂತ ಯಶಸ್ವಿಯಾಗಿದ್ದು, ಅದನ್ನು ಬೇರೆ ರಾಜ್ಯಗಳು ಮಾದರಿಯಾಗಿ ಪಡೆಯಬೇಕು. ಮಹಿಳೆಯರ ನೇತೃತ್ವದಲ್ಲಿ ಭೂಮಿಯನ್ನು ಗೇಣಿ ಪಡೆದು ಸಾಮೂಹಿಕವಾಗಿ ವೈಜ್ಞಾನಿಕ ಕೃಷಿ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಹೇಳಿದರು.

ಕೇರಳದ 14 ಜಿಲ್ಲೆಗಳಲ್ಲಿ 2 ಲಕ್ಷ ಮಹಿಳೆಯರ ನೇತೃತ್ವದಲ್ಲಿ ಇದು ನಡೆಯುತ್ತಿದೆ. ಇದಕ್ಕೆ ಗ್ರಾಮಪಂಚಾಯತ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಬೆಂಬಲ ನೀಡಿದ್ದಲ್ಲದೇ ಎಡಪಕ್ಷಗಳ ನೇತೃತ್ವದ ಸರಕಾರ ಸಂಪೂರ್ಣ ಬೆಂಬಲ ನೀಡಿದೆ. ಈ ಯೋಜನೆ ಜಾರಿಯಿಂದ ಮಹಿಳೆಯರ ಸಶಕ್ತೀಕರಣ ಸಾಧ್ಯವಾಗಿದೆ. ಗ್ರಾಮಗಳಲ್ಲಿ ಜಮೀನ್ದಾರರ ಉಪಟಳ ನಿಂತಿದೆ ಮತ್ತು ದಲಿತರಿಗೂ ಭೂಮಿ ಸಿಗಲು ಕಾರಣವಾಗಿದೆ ಹಾಗೂ ಬಹಳಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಡಾ.ಸ್ವಾತಿ, ಅಖಿಲೇಶ್, ಮಹೇಶ್, ಪ್ರಾಧ್ಯಾಪಕ ಡಾ.ಬಿ.ಸಿ ಬಸವರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕೃಷಿ ಬಿಕ್ಕಟ್ಟು, ನಿರುದ್ಯೋಗ, ಭ್ರಷ್ಟಾಚಾರ, ಶಿಕ್ಷಣ ಮತ್ತು ಆರೋಗ್ಯದ ವ್ಯಾಪಾರೀಕರಣವಿಂದು ದೇಶವನ್ನು ಕಾಡುತ್ತಿರುವ ದೊಡ್ಡ ಸಮಸ್ಯೆಗಳಾಗಿವೆ. ಇವುಗಳ ವಿರುದ್ಧ ಚುನಾವಣೆಯ ಸಂದರ್ಭದಲ್ಲಿ ನಿರ್ಣಾಯಕ ಹೋರಾಟ ನಡೆಸಬೇಕಿದೆ.
-ಎಸ್.ಆರ್. ಹಿರೇಮಠ್ ಸಾಮಾಜಿಕ ಹೋರಾಟಗಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X