Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರತಿ ಹೋಬಳಿ ಭಾಗದಲ್ಲಿ ಶೈಕ್ಷಣಿಕ...

ಪ್ರತಿ ಹೋಬಳಿ ಭಾಗದಲ್ಲಿ ಶೈಕ್ಷಣಿಕ ಸವಲತ್ತುಗಳು ಸಿಗುವಂತಾಗಬೇಕು: ಬಿ.ಬಿ.ನಿಂಗಯ್ಯ

ಬಣಕಲ್ ಸ್ವತಂತ್ರ ಪಿಯು ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ21 Jan 2018 4:52 PM IST
share
ಪ್ರತಿ ಹೋಬಳಿ ಭಾಗದಲ್ಲಿ ಶೈಕ್ಷಣಿಕ ಸವಲತ್ತುಗಳು ಸಿಗುವಂತಾಗಬೇಕು: ಬಿ.ಬಿ.ನಿಂಗಯ್ಯ

ಬಣಕಲ್, ಜ.21: ಪ್ರತಿ ಹೋಬಳಿ ಭಾಗದಲ್ಲಿ ಶೈಕ್ಷಣಿಕ ಸವಲತ್ತುಗಳು ಸಿಗುವಂತಾಗಬೇಕು. ಮಕ್ಕಳು ಶಿಕ್ಷಣ ಕಲಿಯಲು ಯಾವುದೇ ಕೊರತೆಗಳಿದ್ದರೆ ಯಾವ ವಿದ್ಯಾರ್ಥಿಗಳು ಸಮರ್ಪಕವಾಗಿ ಶಿಕ್ಷಣ ಕಲಿಯಲು ಸಾಧ್ಯವಿಲ್ಲ ಎಂದು ಮೂಡಿಗೆರೆ ಶಾಸಕ ಬಿ.ಬಿ.ನಿಂಗಯ್ಯ ಹೇಳಿದರು.

ಅವರು ಬಣಕಲ್‍ನ ಸರಕಾರಿ ಸ್ವತಂತ್ರ ಪಿಯು ಕಾಲೇಜಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪವನ್ನು ಉದ್ಘಾಟಿಸಿ ಮಾತನಾಡಿದರು. ಪ್ರೌಢಶಿಕ್ಷಣವು ಜೀವನದ ಮುಖ್ಯ ಗುರಿಯಾಗಿದ್ದು ಇಲ್ಲಿ ಉತ್ತಮವಾಗಿ ಕಲಿತರೆ ಭವಿಷ್ಯ ರೂಪಿಸಿಕೊಳ್ಳಲು ಸಹಾಯಕವಾಗುತ್ತದೆ. ಕಾಲೇಜಿಗೆ ಉತ್ತಮ ಕಟ್ಟಡದ ಅವಶ್ಯಕತೆಯಿತ್ತು.ಅದು ಈಗ ನೂತನ ಹೆಚ್ಚುವರಿ ಕಟ್ಟಡ ನಿರ್ಮಿಸಿರುವ ಮೂಲಕ ಕಾಲೇಜಿಗೆ ಶೈಕ್ಷಣಿಕ ಸೌಲಭ್ಯ ದೊರೆತಿದೆ ಎಂದು ತಿಳಿಸಿದರು.

ಎಂಎಲ್‍ಸಿ ಡಾ. ಶ್ರೀಮತಿ ಮೋಟಮ್ಮ ಕಾಲೇಜಿನ ಹೆಚ್ಚುವರಿ ಕಟ್ಟಡಗಳ ಉದ್ಘಾಟಿಸಿ ಮಾತನಾಡಿ, ನಬಾರ್ಡ್ ವತಿಯಿಂದ ಕಾಲೇಜಿಗೆ ಸುಮಾರು 50 ಲಕ್ಷ ಅನುಧಾನ ದೊರೆತಿದ್ದು ಇದರಿಂದ ಹೆಚ್ಚುವರಿ ಎರಡು ಕೊಠಡಿ ನಿರ್ಮಿಸಲು ಸಾಧ್ಯವಾಗಿದೆ. ಸುಮಾರು ವರ್ಷಗಳ ಹಿಂದೆ ಕಾಲೇಜಿಗೆ ಸ್ಥಳವಿಲ್ಲದೇ ಬಣಕಲ್ ಪಂಚಾಯತ್ ಕಟ್ಟಡದಲ್ಲಿ ಕಾಲೇಜಿಗೆ ಸ್ಥಳ ನೀಡಲಾಗಿತ್ತು. ಆದರೆ ಈಗ ಕಾಲೇಜಿಗೆ ನೂತನ ಕಟ್ಟಡವಿದ್ದು ಮಕ್ಕಳು ಇದರ ಸದುಪಯೋಗವನ್ನು ಮಾಡಬೇಕು. ಕಾಲೇಜಿನ ಮಕ್ಕಳು ಶಿಸ್ತು ಕಲಿಯಬೇಕು ಎಂದರು.

ಜಿ.ಪಂ. ಸದಸ್ಯ ಶಾಮಣ್ಣ ಬಣಕಲ್ ಮಾತನಾಡಿ, ಮಕ್ಕಳು ಮೂಲಭೂತ ಸೌಲಭ್ಯದ ಕೊರತೆಯಿಂದ ಶಿಕ್ಷಣದಿಂದ ವಂಚಿತರಾಗಬಾರದು. ಕಾಲೇಜುಗಳು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಕೇಂದ್ರಗಳಾಗಿವೆ. ದಶಕಗಳ ಹಿಂದೆ ಹಳ್ಳಿಗಳಿಂದ ಕಾಲೇಜಿಗೆ ಹೋಗುವುದೆ ಕಷ್ಟವಾಗುತ್ತಿತ್ತು. ಆದರೆ ಈಗ ಅಂತಹ ಸಮಸ್ಯೆಗಳು ಇಲ್ಲ. ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಎಂದು ನುಡಿದರು.
ಕಾಲೇಜಿನ ಸಮಿತಿಯ ಖಜಾಂಚಿ ಬಿ.ಡಿ.ವಿಜಯೇಂದ್ರಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ವಾರ್ಷಿಕ ವರದಿಯನ್ನು ಉಪನ್ಯಾಸಕಿ ಶ್ರೀಶಾರದ ಓದಿದರು. ಕಾಲೇಜಿಗೆ ಹುಡುಗಿಯರ ವಸತಿ ನಿಲಯ (ಹಾಸ್ಟೆಲ್)ಮತ್ತು ವಾಚನಾಲಯಕ್ಕೆ ವರದಿಯಲ್ಲಿ ಪ್ರಸ್ತಾವನೆ ಮಂಡಿಸಲಾಯಿತು. 

ಬಣಕಲ್ ಗ್ರಾಪಂ ಅಧ್ಯಕ್ಷ ಬಿ.ವಿ.ಸುರೇಶ್, ಕಾಲೇಜಿನ ಕಾರ್ಯಾಧ್ಯಕ್ಷ  ಡಾ.ಎ.ಯು.ಪಾದೂರು, ಖಜಾಂಚಿ ಬಿ.ಡಿ.ವಿಜೇಂದ್ರಗೌಡ, ಕೆ.ಎಸ್.ಗೋಪಾಲಾಚಾರ್, ಬಿ.ಎಸ್.ವಿವೇಕ್, ನಾಗೇಶ್‍ಗೌಡ, ಎಇಇ ಚಂದ್ರಶೇಖರ್, ಅಭಿಯಂತರ ನಾಗರಾಜ್, ಶರಣಪ್ಪ, ಗುತ್ತಿಗೆದಾರ ಅಬೂಬಕರ್, ಕಾಂಗ್ರೆಸ್‍ನ ಕಾರ್ಯಧರ್ಶಿ ಬಿ.ಎ.ಉಮ್ಮರ್, ಪ್ರಾಂಶುಪಾಲ ಜಂಶೀದ್ ಅಹಮ್ಮದ್, ಉಪನ್ಯಾಸಕರಾದ ವಸಂತಕುಮಾರ್, ಜಗದೀಶ್, ಮಲ್ಲಿಕಾರ್ಜುನ್, ಶ್ರೀಶಾರದ, ಊರಿನ ಪ್ರಮುಖರಾದ ಶಿವರಾಮ ಶೆಟ್ಟಿ, ಬೆಳಗೋಡು ಮಹೇಶ್ ಮತ್ತಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X