Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಝಾಮರ ಮಾನ್ಯತೆಗೆ ಸಂಬಂಧಿಸಿದ...

ನಿಝಾಮರ ಮಾನ್ಯತೆಗೆ ಸಂಬಂಧಿಸಿದ ದಾಖಲೆಗಳೆಲ್ಲಿವೆ?

ಗೃಹಸಚಿವಾಲಯಕ್ಕೆ ಮಾಹಿತಿ ಆಯುಕ್ತರ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ21 Jan 2018 7:46 PM IST
share
ನಿಝಾಮರ ಮಾನ್ಯತೆಗೆ ಸಂಬಂಧಿಸಿದ ದಾಖಲೆಗಳೆಲ್ಲಿವೆ?

ಹೊಸದಿಲ್ಲಿ,ಜ.21: ಗೃಹಸಚಿವಾಲಯವನ್ನು ತರಾಟೆಗೆತ್ತಿಕೊಂಡಿರುವ ಕೇಂದ್ರ ಮಾಹಿತಿ ಆಯೋಗ(ಸಿಐಸಿ)ವು ನವಾಬ್ ಮೀರ್ ಬರ್ಕತ್ ಅಲಿ ಖಾನ್ ಅವರನ್ನು ಹೈದರಾಬಾದ್‌ನ ನಿಝಾಮರೆಂದು ಕೇಂದ್ರವು ಮಾನ್ಯ ಮಾಡಿದ್ದ 50 ವರ್ಷಗಳಷ್ಟು ಹಳೆಯ ದಾಖಲೆಗಳೆಲ್ಲಿವೆ ಎಂದು ಪ್ರಶ್ನಿಸಿದೆ. ಈ ಪ್ರಮುಖ ಕಡತದ ಬಗ್ಗೆ ತನಗೇನೂ ಗೊತ್ತಿಲ್ಲವೆಂದು ಸಚಿವಾಲಯವು ಹೇಳಿಕೊಂಡಿದೆ.

 ತನ್ನ ಆದೇಶದ ಪ್ರತಿಯನ್ನು ಕೇಂದ್ರ ಗೃಹ ಕಾರ್ಯದರ್ಶಿಗಳಿಗೆ ರವಾನಿಸಿರುವ ಮಾಹಿತಿ ಆಯಕ್ತ(ಸಿಐಸಿ) ಯಶೋವರ್ಧನ ಆಝಾದ್ ಅವರು, ಇಂತಹ ಐತಿಹಾಸಿಕ ಮಹತ್ವದ ಕಡತಗಳನ್ನು ಗುರುತಿಸಲು ಸಮಿತಿಯೊಂದನ್ನು ರಚಿಸುವಂತೆ ಮತ್ತು ಈ ಕಡತಗಳನ್ನು ರಾಷ್ಟ್ರೀಯ ಪತ್ರಾಗಾರಕ್ಕೆ ಹಸ್ತಾಂತರಗೊಳಿಸುವಂತೆ ಶಿಫಾರಸು ಮಾಡಿದ್ದಾರೆ.

ನಾಪತ್ತೆಯಾಗಿರುವ ಕಡತಕ್ಕಾಗಿ ಹೊಸದಾಗಿ ಶೋಧವನ್ನು ನಡೆಸುವಂತೆ ಮತ್ತು ಅದು ಪತ್ತೆಯಾದರೆ ಪ್ರಮಾಣೀಕೃತ ಮಾಹಿತಿಯನ್ನು ಆರ್‌ಟಿಐ ಅರ್ಜಿದಾರ ಸೈಯದ್ ಖಾಲಿಕ್ ಅವರಿಗೆ ನೀಡುವಂತೆಯೂ ಅವರು ಗೃಹ ಸಚಿವಾಲಯಕ್ಕೆ ನಿರ್ದೇಶಿಸಿದ್ದಾರೆ.

ಪ್ರಕರಣದ ಬೇರುಗಳು ಹೈದರಾಬಾದ್ ಸಂಸ್ಥಾನದ ಕೊನೆಯ ನಿಜಾಮರಾಗಿದ್ದ ಮೀರ್ ಉಸ್ಮಾನ್ ಅಲಿ ಖಾನ್ ಅವರವರೆಗೆ ತಲುಪಿವೆ. ಅವರು ತನ್ನ ಉತ್ತರಾಧಿಕಾರಿ ಯನ್ನಾಗಿ ಮೊಮ್ಮಗ ನವಾಬ್ ಮೀರ್ ಬರ್ಕತ್ ಅಲಿ ಖಾನ್ ಅಲಿಯಾಸ್ ಮುಕರ್ರಮ್ ಝಾ ಬಹದೂರ್ ಅವರನ್ನು ಹೆಸರಿಸುವ ಮೂಲಕ ಅವರನ್ನು ಹೈದರಾಬಾದ್‌ನ ನಾಮಮಾತ್ರ ನಿಜಾಮರನ್ನಾಗಿಸಿದ್ದರು. ಇದಕ್ಕಾಗಿ ಅಗತ್ಯ ಮಾನ್ಯತೆಗಾಗಿ ಅವರು ಭಾರತ ಸರಕಾರವನ್ನು ಕೋರಿಕೊಂಡಿದ್ದರು.

ಕೇಂದ್ರ ಸರಕಾರವು ಮೀರ್ ಬರ್ಕತ್ ಅಲಿ ಖಾನ್ ಅವರನ್ನು ಹೈದರಾಬಾದ್‌ನ ಆಡಳಿತಗಾರರಾಗಿ ಮಾನ್ಯತಾ ಪ್ರಮಾಣಪತ್ರವನ್ನು ನಿಜಾಮ್ ಅವರು ನಿಧನ ಹೊಂದಿದ್ದ ದಿನಾಂಕವಾದ 1967,ಫೆ.24ರಿಂದ ಅನ್ವಯವಾಗುವಂತೆ ಹೊರಡಿಸಿತ್ತು.

ನಿಜಾಮರ ನಿಧನಾನಂತರ ಅವರ ಎಲ್ಲ ಚರ ಮತ್ತು ಸ್ಥಿರಾಸ್ತಿಗಳಿಗೆ ಖಾನ್ ಅವರು ಮಾಲಿಕರಾಗಿದ್ದು, ಇದರೊಂದಿಗೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಗಳ ಸಾಲಿಗೆ ಸೇರಿದ್ದರು.

ಹೈದರಾಬಾದ್‌ನ ನಾಮಮಾತ್ರ ನಿಜಾಮರಾಗಿದ್ದ ಖಾನ್ ಅವರ ಬಂಧುಗಳು ಹೂಡಿದ್ದ ಹಲವಾರು ದಾವೆಗಳಲ್ಲಿ ಈ ಪ್ರಮಾಣಪತ್ರವು ಕೇಂದ್ರಬಿಂದುವಾಗಿತ್ತು.

ಖಾಲಿಕ್ ಅವರು 1967,ಫೆ.27ರ ಕಡತದಿಂದ ಈ ಪ್ರಮಾಣಪತ್ರದ ಪ್ರಮಾಣೀಕೃತ ಪ್ರತಿಗಾಗಿ ಕೇಂದ್ರ ಗೃಹ ಸಚಿವಾಲಯವನ್ನು ಕೋರಿಕೊಂಡಿದ್ದಾರೆ.

ಖಾಲಿಕ್ ಅವರ ಅರ್ಜಿಯನ್ನು ಸಚಿವಾಲಯವು ರಾಷ್ಟ್ರೀಯ ಪತ್ರಾಗಾರ(ಎನ್‌ಎಐ)ಕ್ಕೆ ಕಳುಹಿಸಿದ್ದು, ಹಳೆಯ ಕಡತಗಳನ್ನು ಪತ್ರಾಗಾರಕ್ಕೆ ವರ್ಗಾಯಿಸುವಂತೆ ಸುಮಾರು 1,981 ಸೂಚನೆಗಳು ತನಗೆ ಬಂದಿವೆ ಎಂದು ತಿಳಿಸಿತ್ತು.

ಆದರೆ ಸಚಿವಾಲಯದಿಂದ ತನಗೆಂದೂ ಈ ಕಡತ ಬಂದಿಲ್ಲ ಎಂದು ಎನ್‌ಎಐ ಸಿಐಸಿಗೆ ಸ್ಪಷ್ಟಪಡಿಸಿತ್ತು.

   ತಮ್ಮಲ್ಲಿರುವ ಎಲ್ಲ ಕಡತಗಳು ಡಿಜಿಟಲೀಕರಣಗೊಂಡಿದ್ದು, ಅಧಿಕೃತ ಜಾಲತಾಣದಲ್ಲಿ ಲಭ್ಯವಿವೆ ಎಂದು ಎನ್‌ಎಐನ ಸಾರ್ವಜನಿಕ ಮಾಹಿತಿ ಅಧಿಕಾರಿ(ಪಿಐಒ)ತಿಳಿಸಿದ್ದಾರೆ. ಇಂತಹ ಕಡತ ತಮಗೆ ಬಂದಿಲ್ಲ ಎನ್ನುವುದು ಅವರಿಗೆ ಖಚಿತವಿದೆ. ಆದರೆ ಇಂತಹ ಕಡತದ ಅಸ್ತಿತ್ವದ ಬಗ್ಗೆ ಗೃಹ ಸಚಿವಾಲಯದ ಪಿಐಒಗೆ ಖಚಿತವಿದ್ದಂತಿಲ್ಲ ಎಂದು ಆಝಾದ್ ಬೆಟ್ಟು ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X