Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ಳಂದೂರು ಕೆರೆಯಲ್ಲಿ ಕಾಣಿಸಿಕೊಂಡ...

ಬೆಳ್ಳಂದೂರು ಕೆರೆಯಲ್ಲಿ ಕಾಣಿಸಿಕೊಂಡ ಬೆಂಕಿ ನಂದಿಸಿದ ಅಗ್ನಿಶಾಮಕದಳ ಸಿಬ್ಬಂದಿ

ವಾರ್ತಾಭಾರತಿವಾರ್ತಾಭಾರತಿ21 Jan 2018 8:14 PM IST
share
ಬೆಳ್ಳಂದೂರು ಕೆರೆಯಲ್ಲಿ ಕಾಣಿಸಿಕೊಂಡ ಬೆಂಕಿ ನಂದಿಸಿದ ಅಗ್ನಿಶಾಮಕದಳ ಸಿಬ್ಬಂದಿ

ಬೆಂಗಳೂರು,ಜ.21: ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಕೆರೆಯ ಬೆಂಕಿಯ ಜ್ವಾಲೆಗಳನ್ನು ಸಂಪೂರ್ಣ ನಂದಿಸಲಾಗಿದೆಯಾದರೂ ಹೊಗೆಯಾಡುತ್ತಿರುವುದರಿಂದ ಮತ್ತೆ ಯಾವಾಗ ಬೇಕಾದರೂ ಬೆಂಕಿ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಎರಡು ಅಗ್ನಿಶಾಮಕ ವಾಹನಗಳನ್ನು ಕೆರೆಯಂಚಿನಲ್ಲೇ ನಿಲ್ಲಿಸಿ 10 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಆಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳ್ಳಂದೂರು ಕೆರೆಯಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ಬಹುತೇಕ ನಂದಿಸಲಾಗಿದ್ದರೂ ಅಲ್ಲಲ್ಲಿ ಕೆಲವು ಕಡೆ ಹೊಗೆ ಕಾಣಿಸಿಕೊಳ್ಳುತ್ತಿದ್ದು ಆಗ್ನಿಶಾಮಕ ಸಿಬ್ಬಂದಿಯನ್ನು ಬೆಂಕಿಯ ಬಗ್ಗೆ ನಿಗಾ ವಹಿಸಿದ್ದಾರೆ.

ಕಾರ್ಯಾಚರಣೆ ಶನಿವಾರ ರಾತ್ರಿಯಿಂದ ಸ್ಥಗಿತಗೊಂಡಿದ್ದು ಇಲ್ಲಿಯವರೆಗೆ ಹೊಗೆ ಬಿಟ್ಟರೆ ಎಲ್ಲಿಯೂ ಬೆಂಕಿ ಕಾಣಿಸಿಕೊಂಡಿಲ್ಲ. ಸಿಬ್ಬಂದಿ ಕಾರ್ಯಾಚರಣೆಗೆ ಸನ್ನದ್ಧ ಸ್ಥಿತಿಯಲ್ಲಿರುತ್ತದೆ ಕೆರೆಯಂಚಿನ ಸುಮಾರು 70 ಎಕರೆ ಜಾಗದಲ್ಲಿ ಹೂಳು ತುಂಬಿಕೊಂಡಿದ್ದು ತ್ಯಾಜ್ಯಕ್ಕೆ ಹೊತ್ತಿಕೊಂಡ ಬೆಂಕಿ, ಇಡೀ ಕೆರೆಯನ್ನೇ ಸುಟ್ಟಿದ್ದು ತಕ್ಷಣದಿಂದಲೇ ಹೂಳು ತೆರವುಗೊಳಿಸುವ ಕಾಮಗಾರಿ ಕೈಗೊಳ್ಳಬೇಕು ಎಂದಿದ್ದಾರೆ.

ಮೇಲ್ಭಾಗದ ಬೆಂಕಿ ನಂದಿಸಿದ್ದೇವೆ ಹೊರತು, ತಳಭಾಗದ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ.ಕೆರೆಯ ಆಳದಲ್ಲಿ ಬೆಂಕಿ ಹಾಗೆಯೇ ಇರುವ ಸಾಧ್ಯತೆಯೂ ಇದೆ. ಹೀಗಾಗಿ ಆತಂಕ ಇದ್ದೇ ಇದೆ ಎಂದು ಹೇಳಿದ್ದಾರೆ.

ಆಗ್ನಿ ಶಾಮಕ ದಳದ ಕಾರ್ಯಾಚರಣೆ ವೇಳೆ ಅಗೆದಷ್ಟು ಗಾಜಿನ ಬಾಟಲಿಗಳು,ಕೊಳೆತ ತ್ಯಾಜ್ಯ, ಬೆಂಕಿಯಲ್ಲಿ ಸುಟ್ಟು ಕರಕಲಾದ ಪ್ರಾಣಿಗಳ ಕಳೇಬರ ಕೈಗೆ ಸಿಕ್ಕವು. ಕಾಲಿಟ್ಟಲೆಲ್ಲ ಕೆಂಡ ತುಳಿದ ಅನುಭವ ಸಿಬ್ಬಂದಿಗೆ ಆಗಿದ್ದು ಗುದ್ದಲಿ, ಹಾರೆಯಂಥ ಹಲವು ಸಲಕರಣೆಗಳನ್ನು ಹಿಡಿದು ಕೆರೆಯಲ್ಲಿದ್ದ ಹೂಳು ತೆಗೆದಿದ್ದೇವೆ. ಕೆಲ ನಿಮಿಷದಲ್ಲೇ ಆ ಸಲಕರಣೆಗಳೂ ಬಿಸಿಯಾದವು. ಹಿಡಿದುಕೊಳ್ಳಲೂ ಆಗಲಿಲ್ಲ. ಅಷ್ಟು ಕಾವು ಹೂಳಿನಲ್ಲಿತ್ತು ಎಂದು ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X