Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಂಡನ್: ಭೀಮಾ-ಕೊರೆಗಾಂವ್‌ ಹಿಂಸಾಚಾರದ...

ಲಂಡನ್: ಭೀಮಾ-ಕೊರೆಗಾಂವ್‌ ಹಿಂಸಾಚಾರದ ವಿರುದ್ಧ ದಲಿತ ಗುಂಪುಗಳ ಪ್ರತಿಭಟನೆ

ಅನಂತ್ ಕುಮಾರ್ ಹೆಗಡೆ ವಿರುದ್ಧ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ21 Jan 2018 8:58 PM IST
share
ಲಂಡನ್: ಭೀಮಾ-ಕೊರೆಗಾಂವ್‌ ಹಿಂಸಾಚಾರದ ವಿರುದ್ಧ ದಲಿತ ಗುಂಪುಗಳ ಪ್ರತಿಭಟನೆ

ಲಂಡನ್, ಜ.21: ಪ್ರಧಾನಿ ನರೇಂದ್ರ ಮೋದಿಯವರ ಹಿಂದುತ್ವ ಸರಕಾರದಿಂದ ಭಾರತದಲ್ಲಿರುವ ಲಕ್ಷಾಂತರ ದಲಿತರ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳನ್ನು ಗಮನಿಸಬೇಕೆಂದು ಬ್ರಿಟನ್‌ನಾದ್ಯಂತ ಇರುವ ದಲಿತ ಗುಂಪುಗಳು ಅಂತಾರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದೆ.

ಈ ತಿಂಗಳ ಆರಂಭದಲ್ಲಿ ಭೀಮಾ-ಕೊರೆಗಾಂವ್‌ನಲ್ಲಿ ನಡೆದ ದಲಿತರ ವಿರುದ್ಧದ ಹಿಂಸಾಚಾರದಲ್ಲಿ 7,000ಕ್ಕೂ ಅಧಿಕ ದಲಿತರ ಮೇಲೆ ಭದ್ರತಾ ಪಡೆಗಳು ನಡೆಸಿದ ದೌರ್ಜನ್ಯ ಮತ್ತು ಬಂಧನದ ವಿರುದ್ಧ ಶನಿವಾರದಂದು ಬ್ರಿಟನ್‌ನ ಪ್ರಮುಖ ದಲಿತ ಸಂಘಟನೆಗಳು ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸಿದವು.

ಸಂತ್ರಸ್ತರಿಗೆ ಬೆಂಬಲ ಸೂಚಿಸಿ ನಡೆಸಲಾದ ಲಂಡನ್ ಪ್ರತಿಭಟನೆಗೆ ದಕ್ಷಿಣ ಏಷ್ಯಾ ಐಕ್ಯಮತ ಚಳುವಳಿ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿದವು. ಬಂಧಿತ ದಲಿತರನ್ನು ಕೂಡಲೇ ಬಿಡುಗಡೆ ಮಾಡಬೇಕು ಮತ್ತು ದಲಿತ ನಾಯಕ ಚಂದ್ರಶೇಖರ್ ಆಝಾದ್ ಅವರನ್ನು ಬಂಧಮುಕ್ತಗೊಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ, ಡಾ. ಬಿ.ಆರ್ ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ಮತ್ತು ಸಂವಿಧಾನವನ್ನು ಬದಲಿಸುತ್ತೇವೆ ಎಂಬ ಅವರ ಬೆದರಿಕೆ ಜಗತ್ತಿನಾದ್ಯಂತವಿರುವ ಭಾರತೀಯರು ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಇಡೀ ಭಾರತೀಯ ಸಮಾಜದ ಮೇಲೆ ಹಿಂದುತ್ವವಾದವನ್ನು ಪ್ರಧಾನಿ ಮೋದಿ ಹೇರಲು ಮುಂದಾಗಿದ್ದಾರೆಯೇ ಎಂಬ ಭಯ ಅವರನ್ನು ಕಾಡುತ್ತಿದೆ ಎಂದು ಪ್ರತಿಭಟನಾಕಾರರು ತಿಳಿಸಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಬರ್ಮಿಂಗ್‌ಹ್ಯಾಮ್, ಬ್ರಾಡ್‌ಫೋರ್ಡ್ ಮತ್ತು ಲಂಡನ್‌ನ ರಸ್ತೆಗಳಲ್ಲಿ ಸಾಗಿದ ಪ್ರತಿಭಟನಾ ಜಾಥಾದಲ್ಲಿ, “ನಮ್ಮ ಹೋರಾಟ ಮಾನವ ಹಕ್ಕಿಗಾಗಿ, ದಲಿತರಿಗೂ ಸಮಾನ ಹಕ್ಕು, ದಲಿತರ ಮೇಲಿನ ದೌರ್ಜನ್ಯ ನಿಲ್ಲಿಸಿ, ದ್ವೇಷದ ವಿರುದ್ಧ ನಾವು ಒಗ್ಗಟ್ಟಾಗಿದ್ದೇವೆ, ದಲಿತರ ಹಕ್ಕುಗಳು ಮಾನವ ಹಕ್ಕುಗಳು, ಮಾನವ ಜೀವಕ್ಕೆ ಬೆಲೆ ಕೊಡಿ, ಕೇವಲ ಗೋವುಗಳಿಗೆ ಮಾತ್ರವಲ್ಲ, ಹಿಂದುತ್ವವು ಭಾರತದ ಒಗ್ಗಟ್ಟಿಗೆ ಅಪಾಯವಾಗಿದೆ, ದಲಿತರ ವಿರುದ್ಧ ಜಾತ್ಯಾಧಾರಿತ ಹಿಂಸಾಚಾರವನ್ನು ಕೂಡಲೇ ನಿಲ್ಲಿಸಿ”, ಮುಂತಾದ ಬರವಣಿಗೆಗಳುಳ್ಳ ಬ್ಯಾನರ್‌ಗಳನ್ನು ಪ್ರತಿಭಟನಾಕಾರರು ಹಿಡಿದುಕೊಂಡಿದ್ದರು.

ವೆಸ್ಟ್‌ಮಿನಿಸ್ಟರ್‌ನಲ್ಲಿರುವ ಪಾರ್ಲಿಮೆಂಟ್ ಸ್ಕ್ವ್ಯಾರ್‌ನಿಂದ ಹೊರಟ ರ್ಯಾಲಿಯು ಭಾರತೀಯ ರಾಯಭಾರಿ ಕಚೇರಿಯತ್ತ ಸಾಗುವ ಮಾರ್ಗ ಮಧ್ಯೆ ಪ್ರತಿಭಟನಾಕಾರರು ದಲಿತರು, ಮುಸ್ಲಿಮರು ಮತ್ತು ಸಿಖ್ಖರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ವೇಳೆ ಭೀಮಾ-ಕೊರೆಗಾಂವ್ ಹಿಂಸಾಚಾರಕ್ಕೆ ಯೋಜನೆ ರೂಪಿಸಿದ ಸಂಘಪರಿವಾರದ ನಾಯಕರಿಗೆ ಕಾನೂನು ಪ್ರಕಾರ ಶಿಕ್ಷೆ ವಿಧಿಸಬೇಕು. ಮಹಾರಾಷ್ಟ್ರದಲ್ಲಿ ಬಂಧಿಸಲ್ಪಟ್ಟಿರುವ ಸಾವಿರಾರು ದಲಿತರನ್ನು ಬಿಡುಗಡೆ ಮಾಡಬೇಕು. ಅವರ ಮೇಲಿನ ಆರೋಪಗಳನ್ನು ಕೈಬಿಡಬೇಕು ಮತ್ತು ಜನವರಿ ಒಂದು ಮತ್ತು ಎರಡರಂದು ನಡೆದ ಘಟನೆಗಳ ಸಾರ್ವಜನಿಕ ತನಿಖೆಯಾಗಬೇಕು ಎಂದು ಆಗ್ರಹಿಸುವ ಮನವಿ ಪತ್ರವನ್ನು ಪ್ರತಿಭಟನಾಕಾರರು ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳಿಗೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X