Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸರಣಿ ಸೋಲು ಬಳಿಕ ವಿರಾಟ್ ಕೊಹ್ಲಿಗೆ...

ಸರಣಿ ಸೋಲು ಬಳಿಕ ವಿರಾಟ್ ಕೊಹ್ಲಿಗೆ ಎಲ್ಲೆಡೆ ಟೀಕಾಸ್ತ್ರ

ವಾರ್ತಾಭಾರತಿವಾರ್ತಾಭಾರತಿ21 Jan 2018 11:27 PM IST
share
ಸರಣಿ ಸೋಲು ಬಳಿಕ ವಿರಾಟ್ ಕೊಹ್ಲಿಗೆ ಎಲ್ಲೆಡೆ ಟೀಕಾಸ್ತ್ರ

ಜೋಹಾನ್ಸ್‌ಬರ್ಗ್, ಜ.21: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಬಾರಿ ಸವಾಲು ಎದುರಿಸುತ್ತಿದ್ದಾರೆ. ದಕ್ಷಿಣ ಆಫ್ರಿಕ ವಿರುದ್ಧದ ಟೆಸ್ಟ್ ಸರಣಿಯಲ್ಲಿ 2-0 ಅಂತರದಲ್ಲಿ ಟೀಮ್ ಇಂಡಿಯಾ ಸೋಲು ಅನುಭವಿಸಿರುವ ಹಿನ್ನೆಲೆಯಲ್ಲಿ ಕೊಹ್ಲಿ ನಾಯಕತ್ವದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿದೆ.

29ರ ಹರೆಯದ ಕೊಹ್ಲಿಗೆ 2018ನೇ ವರ್ಷದ ಆರಂಭ ಚೆನ್ನಾಗಿಲ್ಲ. ಅವರು ದ್ವಿತೀಯ ಟೆಸ್ಟ್‌ನಲ್ಲಿ ಆಕರ್ಷಕ 153 ರನ್ ಗಳಿಸಿದ್ದರೂ, ತಂಡದ ಸಹ ಆಟಗಾರರು ವೈಫಲ್ಯ ಅನುಭವಿಸಿದರು.

ಎರಡು ಟೆಸ್ಟ್‌ಗಳಲ್ಲಿ ಭಾರತದ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಸರಳ ಸವಾಲು ಪಡೆಯಲು ನೆರವಾಗಿದ್ದರು. ಆದರೆ ಬ್ಯಾಟ್ಸ್ ಮನ್‌ಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ಎಡವಿದರು. ತಂಡದ ಆಯ್ಕೆಯಲ್ಲಿ ಮಾಡಿಕೊಂಡ ಎಡವಟ್ಟು ಸೋಲಿನಲ್ಲಿ ಪ್ರಮುಖ ಪಾತ್ರ ವಹಿಸಿತ್ತು.

ಎರಡು ಟೆಸ್ಟ್‌ಗಳಲ್ಲ್ಲಿ ಸೋಲು ಅನುಭವಿಸಿರುವ ಟೀಮ್ ಇಂಡಿಯಾ ವೈಟ್‌ವಾಶ್ ತಪ್ಪಿಸಲು ನೋಡುತ್ತಿದೆ. ವಾಂಡರರ್ಸ್‌ ಸ್ಟೇಡಿಯಂನಲ್ಲಿ ಬುಧವಾರ ಆರಂಭವಾಗಲಿರುವ ಮೂರನೇ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಗೆಲ್ಲಲೇಬೇಕಾಗಿದೆ. ದಕ್ಷಿಣ ಆಫ್ರಿಕ ಸರಣಿ ಜಯಿಸಿರುವ ಹಿನ್ನೆಲೆಯಲ್ಲಿ ಒತ್ತಡದಿಂದ ಪಾರಾಗಿದೆ. ಮೂರನೇ ಟೆಸ್ಟ್‌ನಲ್ಲಿ ಕೊಹ್ಲಿ ಯಾರಿಗೆಲ್ಲಾ ಅವಕಾಶ ನೀಡುತ್ತಾರೆ ಎನ್ನುವ ಕುತೂಹಲವಿದೆ. ಕಳೆದ ಎರಡು ಟೆಸ್ಟ್‌ಗಳಲ್ಲಿ ಅವಕಾಶ ವಂಚಿತ ಉಪನಾಯಕ ಅಜಿಂಕ್ಯ ರಹಾನೆ ಅಂತಿಮ ಟೆಸ್ಟ್‌ನಲ್ಲಿ ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ. ರಹಾನೆ ವಿದೇಶದಲ್ಲಿ ಯಶಸ್ವಿ ಬ್ಯಾಟ್ಸ್ ಮನ್ ಆಗಿದ್ದರೂ, ಅವರಿಗೆ ಅವಕಾಶ ಸಿಗಲಿಲ್ಲ. ಲೋಕೇಶ್ ರಾಹುಲ್ ವೈಫಲ್ಯ ಅನುಭವಿಸಿರುವ ಹಿನ್ನೆಲೆಯಲ್ಲಿ ಮತ್ತೆ ಅವರಿಗೆ ಅವಕಾಶ ಕೈ ತಪ್ಪುವ ಸಾಧ್ಯತೆ ಇದೆ. ಶಿಖರ್ ಧವನ್ ಆರಂಭಿಕ ದಾಂಡಿಗನಾಗಿ ಅವಕಾಶ ಪಡೆಯುವುದು ಖಚಿತವಾಗಿದೆ.

ಚೇತೇಶ್ವರ ಪೂಜಾರ ಕಳೆದ ಟೆಸ್ಟ್‌ನಲ್ಲಿ ಎರಡೂ ಇನಿಂಗ್ಸ್‌ಗಳಲ್ಲಿ ರನೌಟಾಗಿ ನಿರಾಸೆ ಗೊಂಡಿದ್ದರು. ಅವರ ವೈಫಲ್ಯ ತಂಡದ ಬ್ಯಾಟಿಂಗ್‌ನ ಮೇಲೆ ಪರಿಣಾಮ ಬೀರಿತ್ತು.

ಎರಡನೇ ಟೆಸ್ಟ್‌ನಲ್ಲಿ ಬ್ಯಾಟಿಂಗ್‌ನಲ್ಲಿ ಕೊಹ್ಲಿಯನ್ನು ಹೊರತುಪಡಿಸಿದರೆ ಮುರಳಿ ವಿಜಯ್ ಮಿಂಚಿದ್ದರು. ಅವರು ಮೊದಲ ಇನಿಂಗ್ಸ್‌ನಲ್ಲಿ 46 ರನ್ ಗಳಿಸಿದ್ದರು. ಆರ್.ಅಶ್ವಿನ್ 38 ರನ್ ಕೊಡುಗೆ ನೀಡಿದ್ದರು. ಎರಡನೇ ಇನಿಂಗ್ಸ್‌ನಲ್ಲಿ ಎಲ್ಲರೂ ವೈಫಲ್ಯ ಅನುಭವಿಸಿದಾಗ ರೋಹಿತ್ ಶರ್ಮಾ 47 ರನ್ ಮತ್ತು ಮುಹಮ್ಮದ್ ಶಮಿ 28 ರನ್‌ಗಳ ಕೊಡುಗೆ ನೀಡಿ ಮಿಂಚಿದ್ದರು.

ಭಾರತದ ಬೌಲರ್‌ಗಳ ಪೈಕಿ ಎರಡೂ ಇನಿಂಗ್ಸ್‌ಗಳಲ್ಲಿ ರವಿಚಂದ್ರನ್ ಅಶ್ವಿನ್ ,ಮುಹಮ್ಮದ್ ಶಮಿ ಮತ್ತು ಇಶಾಂತ್ ಶರ್ಮಾ ತಲಾ 5 ವಿಕೆಟ್ ಪಡೆದಿದ್ದರು. ಜಸ್‌ಪ್ರೀತ್ ಬುಮ್ರಾ 3 ವಿಕೆಟ್ ಪಡೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X