Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕನ್ನಡಪರ ಹೋರಾಟದಲ್ಲಿ ಸರಕಾರದ...

ಕನ್ನಡಪರ ಹೋರಾಟದಲ್ಲಿ ಸರಕಾರದ ಹಸ್ತಕ್ಷೇಪವಿಲ್ಲ: ದಿನೇಶ್‌ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ22 Jan 2018 9:17 PM IST
share
ಕನ್ನಡಪರ ಹೋರಾಟದಲ್ಲಿ ಸರಕಾರದ ಹಸ್ತಕ್ಷೇಪವಿಲ್ಲ: ದಿನೇಶ್‌ ಗುಂಡೂರಾವ್

ಬೆಂಗಳೂರು, ಜ.22: ಮಹಾದಾಯಿ ನದಿ ನೀರು ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಬೇಕು. ಕನ್ನಡಪರ ಸಂಘಟನೆಗಳು ಹಮ್ಮಿಕೊಂಡಿರುವ ಹೋರಾಟದಲ್ಲಿ ಸರಕಾರದ ಹಸ್ತಕ್ಷೇಪವಿದೆ ಎಂದು ಬಿಜೆಪಿ ಮಾಡುತ್ತಿರುವ ಆರೋಪವು ಸತ್ಯಕ್ಕೆ ದೂರವಾದದ್ದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ಗುಂಡೂರಾವ್ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ಮಹಾದಾಯಿ ವಿಚಾರದಲ್ಲಿ ರಾಜ್ಯದ ಬೆನ್ನಿಗೆ ನಿಲ್ಲಲಿಲ್ಲ ಎಂಬುದು ಸತ್ಯ. ಈ ವಿಚಾರವು ರಾಜ್ಯದ ಜನತೆಯಲ್ಲಿ ಬೇಸರ ತಂದಿದೆ. ಈ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳು ಹೋರಾಟ ಮಾಡುತ್ತಿವೆ ಎಂದರು.

ಮಹಾದಾಯಿ ವಿಚಾರವನ್ನು ಮೊದಲು ರಾಜಕೀಯಕ್ಕಾಗಿ ಬಳಸಿಕೊಂಡವರು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ. ಭಗೀರಥನಂತೆ ಒಬ್ಬರೇ ಹೋಗಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು. ಆದರೆ, ಏನೂ ಮಾಡಿಲ್ಲ. ಆದುದರಿಂದ, ರಾಜ್ಯದ ಜನ ದಂಗೆ ಎದ್ದಿದ್ದಾರೆ. ನಾಡು ಹಾಗೂ ನೀರಿನ ವಿಚಾರವಾಗಿರುವುದರಿಂದ ನಾವು ಬಂದ್‌ಗೆ ಬೆಂಬಲ ನೀಡುತ್ತೇವೆ ಎಂದರು.

ಪ್ರಧಾನಿ ಮಧ್ಯಪ್ರವೇಶ ಮಾಡಿ ಎಂದು ಆಗ್ರಹಿಸಿ ರೈತಪರ, ಕನ್ನಡಪರ ಹಾಗೂ ವಿವಿಧ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಅದಕ್ಕೆ ಎಲ್ಲರೂ ಬೆಂಬಲ ನೀಡಬೇಕಿದೆ. ಬಂದ್‌ಗೆ ನಾವು ಬೆಂಬಲ ನೀಡುತ್ತೇವೆ ಎಂದು ಹೇಳಿದ್ದೇವೆ. ಜ.26ರಂದು ಗಣರಾಜ್ಯೋತ್ಸವ ಇರುವುದರಿಂದ ಜ.25ಕ್ಕೆ ಬೇಕಾದರೆ ಬಂದ್ ಮಾಡುವಂತೆ ಮುಖ್ಯಮಂತ್ರಿ ಹೋರಾಟಗಾರರಿಗೆ ಹೇಳಿದ್ದರು ಎಂದು ಅವರು ತಿಳಿಸಿದರು.

ಜ.25ಕ್ಕೆ ಅಮಿತ್ ಶಾ, ಫೆ.5ಕ್ಕೆ ನರೇಂದ್ರಮೋದಿ ರಾಜ್ಯಕ್ಕೆ ಬರುವ ವಿಚಾರ ನಮಗೇನು ಗೊತ್ತಿದೆಯಾ? ಆದರೂ, ರಾಜ್ಯ ಸರಕಾರದ ಪ್ರಾಯೋಜಿತವಾಗಿ ಈ ಬಂದ್ ಮಾಡಲಾಗುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ನೀಡಿರುವ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ದಿನೇಶ್‌ಗುಂಡೂರಾವ್ ಆಗ್ರಹಿಸಿದರು.

ಬೆಂಗಳೂರಿನ ಸಿ.ವಿ.ರಾಮನ್ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಈ ಕ್ಷೇತ್ರದಿಂದ ಕಣಕ್ಕಿಳಿಯಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಮುಂದೆ ಏನು ತೀರ್ಮಾನ ಕೈಗೊಳ್ಳುತ್ತದೆ ನೋಡೋಣ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X