Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಜಿಲ್ಲೆಯಲ್ಲಿ ಮರಳಿನ ಕೊರತೆ;...

ಶಿವಮೊಗ್ಗ: ಜಿಲ್ಲೆಯಲ್ಲಿ ಮರಳಿನ ಕೊರತೆ; ಜಿಲ್ಲಾಡಳಿತದ ವೈಫಲ್ಯಕ್ಕೆ ಈಶ್ವರಪ್ಪ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ22 Jan 2018 9:32 PM IST
share
ಶಿವಮೊಗ್ಗ: ಜಿಲ್ಲೆಯಲ್ಲಿ ಮರಳಿನ ಕೊರತೆ; ಜಿಲ್ಲಾಡಳಿತದ ವೈಫಲ್ಯಕ್ಕೆ ಈಶ್ವರಪ್ಪ ಆಕ್ರೋಶ

ಶಿವಮೊಗ್ಗ, ಜ. 22: ಜಿಲ್ಲೆಯಲ್ಲಿ ತಲೆದೋರಿರುವ ಮರಳು ಸಮಸ್ಯೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪರವರು ಜಿಲ್ಲಾಡಳಿತದ ವಿರುದ್ದ ಹರಿಹಾಯ್ದಿದ್ದಾರೆ. ನಾಗರಿಕರಿಗೆ ಸಕಾಲದಲ್ಲಿ ಮರಳು ಪೂರೈಕೆ ಮಾಡುವಂತೆ ತಾಕೀತು ಮಾಡಿದ್ದಾರೆ.  

ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಕೆ.ಎಸ್.ಈಶ್ವರಪ್ಪ ಮಾತನಾಡಿದರು. 'ಜಿಲ್ಲೆಯಲ್ಲಿ ಮರಳು ಸಿಗದೆ ಜನರು ಪರದಾಡುತ್ತಿದ್ದಾರೆ. ನೀವು ಕೋರ್ಟ್-ಕಚೇರಿ ಎಂದು ಓಡಾಡಿಕೊಂಡು ಜನರನ್ನು ಅಲೆದಾಡಿಸುತ್ತಿದ್ದಿರಿ. ತಿನ್ನುವವರಿಗೆ ಅವಕಾಶ ಕೊಟ್ಟು ಜನಸಾಮಾನ್ಯರು ಮರಳಿಗಾಗಿ ಸಾಯುವಂತೆ ಮಾಡುತ್ತಿದ್ದಿರಿ. ನಿಮಗೆ ಹೇಳುವವರು-ಕೇಳುವವರು ಯಾರು ಇಲ್ಲವೆ?' ಎಂದು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮರಳು ಲೂಟಿ ಹೊಡೆಯುವವರು ನಿರಾಂತಕವಾಗಿದ್ದಾರೆ. ಮರಳಿನ ಬೆಲೆ ಗಗನಕ್ಕೇರಿದ್ದು, ಜನಸಾಮಾನ್ಯರು ಖರೀದಿಸಲು ಸಾಧ್ಯವಾಗದಂತಿದೆ. ಇಲ್ಲಿಯವರೆಗೂ ಜಿಲ್ಲಾಡಳಿತದಿಂದ ಎಷ್ಟು ಪ್ರಮಾಣದ ಮರಳು ವಿತರಣೆ ಮಾಡಲಾಗಿದೆ ಎಂಬುವುದನ್ನು ಸಭೆಗೆ ತಿಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಮಾತನಾಡಿ, ಸರಿಸುಮಾರು 30 ಸಾವಿರ ಲೋಡ್ ಮರಳು ವಿತರಣೆ ಮಾಡಲಾಗಿದೆ ಎಂದರು. ಇದರಿಂದ ತೃಪ್ತರಾಗದ ಈಶ್ವರಪ್ಪ, ಇಷ್ಟೊಂದು ಮರಳು ಕೊಟ್ಟಿದ್ದರೆ ಜಿಲ್ಲೆಯ ಜನ ಮರಳಿನ ಅಲಭ್ಯತೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿರಲಿಲ್ಲ. 4 ತಿಂಗಳಿಂದ ಮರಳು ಸಿಗದೆ ಪರದಾಡುತ್ತಿದ್ದಾರೆ. 1200 ಅರ್ಜಿಗಳು ಮರಳು ಕೋರಿ ಬಂದಿವೆ. ಇವುಗಳಲ್ಲಿ ಎಷ್ಟು ಅರ್ಜಿಯನ್ನು ವಿಲೇವಾರಿ ಮಾಡಿದ್ದೀರಿ. ಒಬ್ಬ ಗುತ್ತಿಗೆದಾರ ತಡೆಯಾಜ್ಞೆ ತಂದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರಿಗೆ ಮರಳು ಸಿಗದಂತೆ ಏಕೆ ಮಾಡಿದ್ದೀರಿ. ಅದೊಂದು ಕ್ವಾರೆ ಬಿಟ್ಟು ಉಳಿದವುಗಳಿಂದ ಮರಳು ವಿತರಣೆ ಮಾಡಬಹುದಾಗಿತ್ತು. ಕಾನೂನು ಹೋರಾಟ ಮಾಡುವುದಕ್ಕೆ ನೀವಿದ್ದಿರಾ ಎಂದು ಪ್ರಶ್ನಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್, ನಿಮ್ಮ ಕಾನೂನು ಹೋರಾಟ ಏನೇ ಆದರೂ ಜನರು ಮಾತ್ರ ಸಾಯುವಂತಾಯಿತು. ಟೆಂಡರ್ ನಿಯಮವನ್ನು ಏಕೆ ಪರಿಗಣಿಸಿಲ್ಲ. ಆ ಪ್ರಕಾರವೇ ಮರಳು ಕೊಡಬಹುದಿತ್ತು. ಗುತ್ತಿಗೆದಾರನ ವಿರುದ್ದ ಹೋರಾಟ ಮಾಡಲು ಹೋಗಿದ್ದರಿಂದ ಜನರು ಮಾತ್ರ ಪರಿತಪಿಸುವಂತಾಯಿತು ಎಂದು ಹೇಳಿದರು.

ಅಧ್ಯಕ್ಷತೆಯನ್ನು ಉಸ್ತವಾರಿ ಸಚಿವ ಕಾಗೋಡು ತಿಮ್ಮಪ್ಪ ವಹಿಸಿದ್ದರು. ಜಿಲ್ಲಾಧಿಕಾರಿ ಡಾ. ಎಂ. ಲೋಕೇಶ್, ಜಿಪಂ ಸಿಇಓ ರಾಕೇಶ್‍ಕುಮಾರ್, ಜಿಪಂ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X