Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ: ಆಳ್ವಾಸ್...

ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ: ಆಳ್ವಾಸ್ ತಂಡ ಪ್ರಥಮ

ವಾರ್ತಾಭಾರತಿವಾರ್ತಾಭಾರತಿ22 Jan 2018 9:38 PM IST
share
ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ: ಆಳ್ವಾಸ್ ತಂಡ ಪ್ರಥಮ

ಭಟ್ಕಳ, ಜ. 22: ಸತತ ಮೂರು ದಿನಗಳ ಕಾಲ ಕಟ್ಟೇವೀರ ಸ್ಪೋಟ್ಸ ಕ್ಲಬ್ ಮುಠ್ಠಳ್ಳಿ, ರಂಜನ ಇಂಡೆನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ನಡೆದ ರಂಜನ ಇಂಡೆನ್-2018 ಪುರುಷರಿಗಾಗಿ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ ಪ್ರಥಮ ಸ್ಥಾನವನ್ನು ಮೂಡಬಿದಿರೆಯ ಆಳ್ವಾಸ್ ತಂಡವೂ ತನ್ನ ಮುಡಿಗೇರಿಸಿಕೊಂಡಿತು.

ಒಟ್ಟು 16 ತಂಡಗಳ ನಡುವೆ ನಡೆದ ರೋಚಕ ಹಣಾಹಣಿಯಲ್ಲಿ ಮೊದಲ ಸೆಮಿಫೈನಲ್‌ನಲ್ಲಿ ಕೋಲಾ ಬೆಂಗಳೂರು ತಂಡ ಹಾಗೂ ಆಳ್ವಾಸ ತಂಡವೂ ಸೆಣಸಾಡಿ ಆಳ್ವಾಸ ತಂಡ ಜಯಭೇರಿ ಪಡೆದು ಮೊದಲು ಫೈನಲ್‌ಗೇರಿತು. ಬಳಿಕ ಎರಡನೇ ಸೆಮಿಫೈನಲ್‌ನಲ್ಲಿ ಎಂ.ಇ.ಜಿ. ಬೆಂಗಳೂರು ಹಾಗೂ ಇಲ್ಲಿನ ಕಟ್ಟೇವೀರ ತಂಡದ ನಡುವೆ ರೋಚಕ ಪಂದ್ಯ ನಡೆದು ಎಂ.ಇ.ಜಿ. ಬೆಂಗಳೂರು ಇನ್ನೊಂದು ತಂಡವಾಗಿ ಫೈನಲ್‌ಗೇರಿತು.

ಫೈನಲ್ ಪಂದ್ಯವೂ ಅತ್ಯಂತ ರೋಚಕತೆಯಲ್ಲಿ ನಡೆದು ಕೊನೆಯಲ್ಲಿ ಮೂಡಬಿದಿರೆಯ ಆಳ್ವಾಸ್ ತಂಡವೂ ಎಮ್.ಇ.ಜಿ. ಬೆಂಗಳೂರು ತಂಡವನ್ನು 30-23 ಅಂಕ ಪಡೆದು 7 ಅಂಕಗಳ ಮುನ್ನಡೆಯೊಂದಿಗೆ ರಾಜ್ಯ ಮಟ್ಟದ ರಂಜನ ಇಂಡೆನ್-2018 ಕಬಡ್ಡಿ ಪಂದ್ಯವನ್ನು ಗೆದ್ದು ಟ್ರೋಪಿ ಜೊತೆಗೆ ಒಂದು ಲಕ್ಷ ಬಹುಮಾನವನ್ನು ಪಡೆದುಕೊಂಡಿತು.

ಪಂದ್ಯದ ದ್ವಿತೀಯ ಸ್ಥಾನವನ್ನು 50 ಸಾವಿರ ನಗದು ಮತ್ತು ಟ್ರೋಪಿಯೊಂದಿಗೆ ಎಮ್.ಇ.ಜಿ. ಬೆಂಗಳೂರು ಪಡೆದುಕೊಂಡರೆ ತೃತೀಯ ಸ್ಥಾನವನ್ನು ಎರಡು ತಂಡಗಳ ಪಾಲಾಗಿದ್ದು, ಕೋಲಾ ಬೆಂಗಳೂರು ಮತ್ತು ಶ್ರೀ ಕಟ್ಟೇವೀರ ಕಬಡ್ಡಿ ತಂಡ ತಲಾ 25 ಸಾವಿರ ನಗದು ಹಾಗೂ ಟ್ರೋಫಿಗೆ ಭಾಜನರಾದರು.

ಪಂದ್ಯದ ಬೆಸ್ಟ ಡಿಪೆಂಡರ್ ಆಗಿ ಆಳ್ವಾಸ ತಂಡದ ಜಸ್ವಂತ ಹೊರಹೊಮ್ಮಿದ್ದು, ಟ್ರೋಪಿ ಮತ್ತು ಏರ್ ಕೂಲರ್ ಪಡೆದುಕೊಂಡರು. ಬೆಸ್ಟ್  ರೈಡರ್ ಆಗಿ ಎಮ್.ಇ.ಜಿ. ಬೆಂಗಳೂರು ತಂಡದ ಮಂಜುನಾಥ ಪಡೆದುಕೊಂಡಿದ್ದು, ಇವರಿಗೂ ಸಹ ಏರ್ ಕೂಲರ್ ಮತ್ತು ಟ್ರೋಫಿ ನೀಡಲಾಯಿತು. ಹಾಗೂ ಬೆಸ್ಟ ಆಲ್‌ರೌಂಡರ್ ಪಟ್ಟ ಶ್ರೀ ಕಟ್ಟೇವೀರ ಕಬಡ್ಡಿ ತಂಡದ ಆಟಗಾರ ಸಚಿನ್ ಪಡೆದುಕೊಂಡು  32 ಇಂಚಿನ ಎಲ್.ಇ.ಡಿ. ಟಿ.ವಿ ಮತ್ತೂ ಟ್ರೋಫಿ ತನ್ನದಾಗಿಸಿಕೊಂಡಿದ್ದಾರೆ.

ಮೂರು ದಿನದ ಪಂದ್ಯದುದ್ದಕ್ಕೂ ತಾಲೂಕಿನ ಕಬಡ್ಡಿ ಕ್ರೀಡಾಭಿಮಾನಿಗಳು ಕಬಡ್ಡಿ ಆಟಗಾರರಿಗೆ ಪ್ರೋತ್ಸಾಹ ನೀಡಿದ್ದು, 13 ಸಾವಿರ ಪ್ರೇಕ್ಷಕರನ್ನೊಳಗೊಂಡಂತೆ ಯಶಸ್ವಿ ಪಂದ್ಯ ಮುಕ್ತಾಯವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X