Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರೊಹಿಂಗ್ಯಾ ಮುಸ್ಲಿಮರ ವಾಪಸಾತಿ...

ರೊಹಿಂಗ್ಯಾ ಮುಸ್ಲಿಮರ ವಾಪಸಾತಿ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ22 Jan 2018 9:43 PM IST
share
ರೊಹಿಂಗ್ಯಾ ಮುಸ್ಲಿಮರ ವಾಪಸಾತಿ ಮುಂದೂಡಿಕೆ

ಢಾಕಾ, ಜ. 22: ಮ್ಯಾನ್ಮಾರ್‌ಗೆ ವಾಪಸಾಗಲು ರೊಹಿಂಗ್ಯಾ ಮುಸ್ಲಿಮರನ್ನು ಬಲವಂತಪಡಿಸಲಾಗುತ್ತಿದೆ ಎಂಬ ವ್ಯಾಪಕ ಕಳವಳಗಳ ಹಿನ್ನೆಲೆಯಲ್ಲಿ, ಮಂಗಳವಾರ ಆರಂಭಗೊಳ್ಳಬೇಕಿದ್ದ ನಿರಾಶ್ರಿತರ ವಾಪಸಾತಿಯನ್ನು ಮುಂದೂಡಲಾಗಿದೆ ಎಂದು ಬಾಂಗ್ಲಾದೇಶದ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದರು.

‘‘ಈ ಪ್ರಕ್ರಿಯೆಯು ಸ್ವಯಂಪ್ರೇರಿತವಾಗಿರಬೇಕಾಗಿರುವುದು ಮುಖ್ಯ’’ ಎಂದು ನಿರಾಶ್ರಿತ ಮತ್ತು ವಾಪಸಾತಿ ಕಮಿಶನರ್ ಅಬ್ದುಲ್ ಕಲಾಂ ಹೇಳಿದರು.

ವಾಪಸಾಗುವ ರೊಹಿಂಗ್ಯಾ ಮುಸ್ಲಿಮರ ದಾಖಲೆಪತ್ರಗಳು ಅಂತಿಮಗೊಂಡಿಲ್ಲ ಹಾಗೂ ಬಾಂಗ್ಲಾದೇಶದಲ್ಲಿ ನಿರಾಶ್ರಿತರ ಪ್ರಯಾಣ ಶಿಬಿರಗಳನ್ನು ಇನ್ನಷ್ಟೇ ನಿರ್ಮಿಸಬೇಕಾಗಿದೆ ಎಂದರು.

ವಾಪಸಾತಿ ಪ್ರಕ್ರಿಯೆ ಇನ್ನು ಯಾವಾಗ ಆರಂಭಗೊಳ್ಳುವುದು ಎನ್ನುವುದು ತಕ್ಷಣಕ್ಕೆ ತಿಳಿದುಬಂದಿಲ್ಲ.

 ಮ್ಯಾನ್ಮಾರ್‌ಗೆ ವಾಪಸಾಗುವಂತೆ ರೊಹಿಂಗ್ಯಾ ಮುಸ್ಲಿಮರ ಮೇಲೆ ಒತ್ತಡ ಹೇರಿರುವ ಸಾಧ್ಯತೆಯಿದೆ ಎಂಬ ಆತಂಕವನ್ನು ಅಂತಾರಾಷ್ಟ್ರೀಯ ನೆರವು ಕಾರ್ಯಕರ್ತರು ಮತ್ತು ರೊಹಿಂಗ್ಯಾ ನಿರಾಶ್ರಿತರು ವ್ಯಕ್ತಪಡಿಸಿದ ಬಳಿಕ ಈ ಪ್ರಕಟನೆ ಹೊರಬಿದ್ದಿದೆ.

ಕಳೆದ ವರ್ಷದ ಆಗಸ್ಟ್‌ನಲ್ಲಿ ಮ್ಯಾನ್ಮಾರ್ ರಖೈನ್ ರಾಜ್ಯದಲ್ಲಿರುವ ಸೇನಾ ಮತ್ತು ಪೊಲೀಸ್ ಠಾಣೆಗಳ ಮೇಲೆ ರೊಹಿಂಗ್ಯಾ ಬಂಡುಕೋರರು ದಾಳಿ ನಡೆಸಿದ ಬಳಿಕ ಮ್ಯಾನ್ಮಾರ್ ಸೇನೆ ಪ್ರತೀಕಾರಾತ್ಮಕ ಕಾರ್ಯಾಚರಣೆ ನಡೆಸಿದೆ. ಸೇನೆಯ ದಮನ ಕಾರ್ಯಾಚರಣೆಗೆ ಬೆದರಿ 6.5 ಲಕ್ಷಕ್ಕಿಂತಲೂ ಅಧಿಕ ರೊಹಿಂಗ್ಯಾ ನಿರಾಶ್ರಿತರು ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶಕ್ಕೆ ಪಲಾಯನಗೈದಿದ್ದಾರೆ.

ಮ್ಯಾನ್ಮಾರ್ ಸರಕಾರ ನಮ್ಮ ಹಕ್ಕುಗಳನ್ನು ನೀಡಲಿ: ನಿರಾಶ್ರಿತರ ಒತ್ತಾಯ

‘‘ಅವರು ನಮ್ಮನ್ನು ಒತ್ತಾಯಪೂರ್ವಕವಾಗಿ ವಾಪಸ್ ಕಳುಹಿಸಿದರೆ ನಾವು ಹೋಗುವುದಿಲ್ಲ’’ ಎಂದು ರೊಹಿಂಗ್ಯಾ ನಿರಾಶ್ರಿತರೊಬ್ಬರು ಹೇಳಿದರು. ‘‘ಮ್ಯಾನ್ಮಾರ್ ಸರಕಾರ ನಮಗೆ ನಮ್ಮ ಹಕ್ಕುಗಳನ್ನು ನೀಡಬೇಕು ಹಾಗೂ ನಮಗೆ ನ್ಯಾಯ ಕೊಡಬೇಕು’’ ಎಂದರು.

‘‘ಅವರು ನಮ್ಮಿಂದ ದೋಚಿದ ನಮ್ಮ ಎಲ್ಲ ಸಂಪತ್ತನ್ನು ವಾಪಸ್ ಕೊಡಬೇಕು ಹಾಗೂ ಅದಕ್ಕೆ ಕಾರಣರಾದ ಜನರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಅವರು ನಮಗೆ ಪರಿಹಾರ ಕೊಡಬೇಕು. ಅದಕ್ಕಾಗಿ ಹೋರಾಟ ನಡೆಸುವುದಕ್ಕಾಗಿ ನಾವು ಇಲ್ಲಿಗೆ ಬಂದಿದ್ದೇವೆ’’ ಎಂದು ಸೈಯದ್ ನೂರ್ ಹೇಳುತ್ತಾರೆ.

‘‘ಅವುಗಳು ನಮಗೆ ಸಿಗುವುದಿಲ್ಲವಾದರೆ, ನಾವು ಇಲ್ಲಿಗೆ ಬಂದಿರುವುದಕ್ಕೆ ಏನು ಅರ್ಥವಿದೆ?’’ ಎಂದು ಅವರು ಪ್ರಶ್ನಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X