Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯದ ಅಪರಾಧ ಪ್ರಕರಣಗಳಲ್ಲಿ ಇಳಿಮುಖ:...

ರಾಜ್ಯದ ಅಪರಾಧ ಪ್ರಕರಣಗಳಲ್ಲಿ ಇಳಿಮುಖ: ಗೃಹ ಸಚಿವ ರಾಮಲಿಂಗಾ ರೆಡ್ಡಿ

ಪ್ರಕಾಶ್ ಜಾವಡೇಕರ್ ರಿಗೆ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ23 Jan 2018 9:37 PM IST
share
ರಾಜ್ಯದ ಅಪರಾಧ ಪ್ರಕರಣಗಳಲ್ಲಿ ಇಳಿಮುಖ: ಗೃಹ ಸಚಿವ ರಾಮಲಿಂಗಾ ರೆಡ್ಡಿ

ಮಂಗಳೂರು, ಜ. 23: ರಾಷ್ಟ್ರೀಯ ಅಪರಾಧ ಪ್ರಕರಣಗಳನ್ನು ದಾಖಲಿಸುವ ಎನ್‌ಸಿಆರ್‌ಪಿ ವರದಿಯ ಪ್ರಕಾರ ಕರ್ನಾಟದಲ್ಲಿ ಅಪರಾಧ ಪ್ರಕರಣ ಇಳಿಮುಖವಾಗಿದೆ. ಇದನ್ನು ತಿಳಿದುಕೊಳ್ಳದೆ ಬಿಜೆಪಿಯ ಪ್ರಕಾಶ್ ಜಾವಡೇಕರ್ ಮಾತನಾಡುತ್ತಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಅವರು ಮಂಗಳವಾರ ನಗರದ ಕರ್ನಿರೆ ಎಂಬಲ್ಲಿ ಕೆ.ಎಸ್. ಸೈಯಿದ್ ಕರ್ನಿರೆ ಅವರ ಪುತ್ರ ಮುಹಮ್ಮದ್ ಅನ್ಸಿಫ್ ಅವರ ಮನೆಯಲ್ಲಿ ನಡೆದ ವಿವಾಹದ ಔತಣ ಕೂಟದಲ್ಲಿ ಭಾಗವಹಿಸಿ, ನಂತರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು.

ಈ ವರದಿ ರಾಜ್ಯ ಸರಕಾರ ನೀಡಿರುವ ವರದಿಯಲ್ಲ, ಕೇಂದ್ರ ಸರಕಾರದ ಅಧಿಕೃತ ಸಂಸ್ಥೆ ನೀಡಿರುವ ವರದಿಯಾಗಿದೆ. ಈ ವರದಿಯ ಪ್ರಕಾರ ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಸಂದರ್ಭ ಅಪರಾಧ ಪ್ರಕರಣಗಳು ಶೇ. 6ಕ್ಕೆ ಏರಿಕೆಯಾಗಿತ್ತು. ಕಾಂಗ್ರೆಸ್ ಅಧಿಕಾರದಲ್ಲಿ ಈಗ ರಾಜ್ಯದ ಅಪರಾಧ ಪ್ರಕರಣಗಳ ಪ್ರಮಾಣ ಶೇ. 5ಕ್ಕೆ ಇಳಿಕೆಯಾಗಿದೆ. ಕಳೆದ ಸರಕಾರಕ್ಕಿಂತ ಈಗಿನ ಸರಕಾರದಿಂದ ಇಳಿಕೆಯಾಗಿದೆ. ಜಾವಡೇಕರ್ ತಮ್ಮ ಬಳಿ ಇರುವ ಮಾಹಿತಿಯನ್ನು ಸರಿಪಡಿಸಿಕೊಳ್ಳಲಿ ಎಂದು ಹೇಳಿದರು.

ಪ್ರಕಾಶ್ ಜಾವಡೇಕರ್ ಕರ್ನಾಟಕ ಸರಕಾರ ಅಪರಾಧ ಪ್ರಕರಣಗಳಲ್ಲಿ ನಂಬರ್ ಎರಡನೆ ಸ್ಥಾನದಲ್ಲಿದೆ ಎನ್ನುವ ಹೇಳಿಕೆಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ. ಬಿಜೆಪಿ ಅಧಿಕಾರದಲ್ಲಿರುವ ಉತ್ತರ ಪ್ರದೇಶದಲ್ಲಿ ಗರಿಷ್ಠ ಪ್ರಮಾಣದ ಅಪರಾಧ ಪ್ರಕರಣಗಳು ನಡೆಯುತ್ತಿವೆ ಎಂದು ಕೇಂದ್ರ ಸರಕಾರದ ಸಂಸ್ಥೆಯ ವರದಿ ತಿಳಿಸುತ್ತದೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಚುನಾವಣಾ ಆಯೋಗದ ಸೂಚನೆಯ ಪ್ರಕಾರ ವರ್ಗಾವಣೆ ನಡೆಯುತ್ತಿದೆ

ದೇಶದ ಎಲ್ಲಾ ರಾಜ್ಯಗಳಲ್ಲೂ ಚುನಾವನಾ ಆಯೋಗ ನೀಡುವ ಕೆಲವು ಸೂಚನೆಗಳ ಪಾಲನೆಯ ಪ್ರಕಾರ ವರ್ಗಾವಣೆಗಳು ನಡೆಯುತ್ತಿವೆ. ರಾಜ್ಯದಲ್ಲೂ ಈ ರೀತಿಯ ವರ್ಗಾವಣೆ ನಡೆಯುತ್ತಿದೆ. ಬೆಳಗಾವಿಯ ಎಸ್.ಪಿ. ರವಿಕಾಂತೇ ಗೌಡ ಅವರು ಮೂರು ವರ್ಷ ಅಲ್ಲೇ ಸೇವೆ ಸಲ್ಲಿಸಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾಯಿಸಲಾಗಿದೆ. ಇಲ್ಲಿಯ ಎಸ್‌ಪಿ ಯನ್ನು ಬೆಳಗಾವಿಗೆ ವರ್ಗಾಯಿಸಲಾಗಿದೆ. ಚುನಾವಣೆ ಸಂದರ್ಭ ಎಲ್ಲಾ ರಾಜ್ಯಗಳಲ್ಲೂ ಈ ರೀತಿ ನಡೆಯುತ್ತದೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಅಮಿತ್ ಶಾ ಕಾರ್ಯಕ್ರಮಕ್ಕೆ ಸರಕಾರ ಅಡ್ಡಿ ಪಡಿಸಿಲ್ಲ

ಕರ್ನಾಟಕ ಬಂದ್ ಗೆ ಕರೆ ನೀಡಿರುವವರು ನಮ್ಮನ್ನು ಕೇಳಿ ಕರೆ ನೀಡಿಲ್ಲಾ, ಅದು ಅವರು ತೆಗೆದುಕೊಂಡ ತೀರ್ಮಾನ. ರಾಜ್ಯದಲ್ಲಿ ಅಮಿತ್‌ ಶಾ ಕಾರ್ಯಕ್ರಮ ನಡೆಸುವ ಬಗ್ಗೆ ನಮಗೆ ಯಾವ ಭಯ ಇಲ್ಲ. ಅದು ಬಿಜೆಪಿಯವರು ಹಮ್ಮಿಕೊಂಡ ಕಾರ್ಯಕ್ರಮ. ರಾಜ್ಯದಲ್ಲಿ ಕಾನೂನು ಪಾಲನೆಯ ಕ್ರಮವನ್ನು ಸರಕಾರ ಕ್ರಮ ಗೊಳ್ಳುತ್ತದೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ  ಮೊಯ್ದಿನ್ ಬಾವ ಉಪಸ್ಥಿತರಿದ್ದರು.

ವಧು ವರರಿಗೆ ಶುಭ ಹಾರೈಕೆ

ಸೌದಿ ಅರೇಬಿಯಾದ ಅನಿವಾಸಿ ಭಾರತೀಯ ಉದ್ಯಮಿ ಕೆ.ಎಸ್. ಸೈಯಿದ್ ಅವರ ಪುತ್ರ ನವವಿವಾಹಿತರಾದ ಮುಹಮ್ಮದ್ ಅನ್ಸಿಫ್ ಹಾಗೂ ಫಾತಿಮಾ ನಶೀತಾ ಮತ್ತು ಅವರ ಕುಟುಂಬದ ಸದಸ್ಯರಿಗೆ ಸಚಿವ ರಾಮಲಿಂಗಾ ರೆಡ್ಡಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಸಕ ಮೊಯ್ದಿನ್ ಬಾವ, ಉದ್ಯಮಿ ಕೆ.ಎಸ್. ಸೈಯಿದ್, ಉದ್ಯಮಿ ಅಶ್ರಫ್ ಕರ್ನಿರೆ, ಸ್ಥಳೀಯ ಗಣ್ಯರಾದ ಬಿ.ಎಂ. ಮುಮ್ತಾಝ್ ಅಲಿ ಕೃಷ್ಣಾಪುರ, ಕಿಶೋರ್‌ ಆಳ್ವ, ಉಡುಪಿ ಜಿಲ್ಲಾ ಎಸ್.ಪಿ ಲಕ್ಷ್ಮಣ ನಿಂಬರಗಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X