Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ವರ್ಣ ನದಿ: ಕೃಷಿ ಪಂಪ್‌ಸೆಟ್‌ಗಳ...

ಸ್ವರ್ಣ ನದಿ: ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕ ಕಡಿತ

ವಾರ್ತಾಭಾರತಿವಾರ್ತಾಭಾರತಿ23 Jan 2018 10:10 PM IST
share
ಸ್ವರ್ಣ ನದಿ: ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕ ಕಡಿತ

ಉಡುಪಿ, ಜ.23: ಉಡುಪಿ ನಗರಸಭಾ ವ್ಯಾಪ್ತಿ ಹಾಗೂ ಆಸುಪಾಸಿನ ಗ್ರಾಪಂಗಳಿಗೆ ಕುಡಿಯುವ ನೀರು ಒದಗಿಸುವ ಬಜೆ ಅಣೆಕಟ್ಟಿನಲ್ಲಿ ಸ್ವರ್ಣ ನದಿಯ ಒಳ ಹರಿವು ನಿಂತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನದಿ ನೀರನ್ನು ಕೃಷಿಗೆ ಬಳಸುತ್ತಿರುವ ರೈತರ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕವನ್ನು ಇಂದಿ ನಿಂದ ಕಡಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.

ಕಳೆದೆರಡು ವರ್ಷ ಉಡುಪಿಯಲ್ಲಿ ಬೇಸಿಗೆಯ ಕೊನೆಯ ಎರಡು ತಿಂಗಳಲ್ಲಿ ಕುಡಿಯುವ ನೀರಿನ ಸರಬರಾಜಿಗೆ ಆದ ಸಮಸ್ಯೆಗಳ ಅನುಭವದ ಹಿನ್ನೆಲೆಯಲ್ಲಿ ಈ ಬಾರಿ ಸಾಕಷ್ಟು ಮೊದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಿಂದಿನೆರಡು ವರ್ಷಗಳ ಪರಿಸ್ಥಿತಿ ಈ ಬಾರಿಯೂ ಎದುರಾಗಬಾರದು ಎಂಬ ಕಾರಣಕ್ಕಾಗಿ ಸಾಕಷ್ಟು ಮುಂಚಿತವಾಗಿ ರೈತರ ಪಂಪ್‌ಸೆಟ್‌ಗಳ ಸಂಪರ್ಕ ಕಡಿತ ಮಾಡಲಾಗಿದೆ ಎಂದವರು ಹೇಳಿದರು.

ಇದಕ್ಕೆ ಕಳೆದೊಂದು ವರ್ಷದಿಂದ ರೈತರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಸ್ವರ್ಣ ನದಿಯ ನೀರನ್ನು ಬಳಸುವ ರೈತರಿಗೆ ಸ್ವಂತ ನೀರಿನ ಮೂಲ ವನ್ನು ಕಂಡುಕೊಳ್ಳಲು ವಿವಿಧ ಇಲಾಖೆಗಳ ಮೂಲಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಕೊಳವೆ ಬಾವಿ, ಬಾವಿ ತೊಡಲು, ಸ್ಪ್ರಿಂಕ್ಲರ್ ಅಳವಡಿಸಲು ಬೇಕಾದ ಸಹಾಯವನ್ನು ಒದಗಿಸಲಾಗಿದೆ. ಹೀಗಾಗಿ ಈ ಪರಿಸ್ಥಿತಿಯನ್ನು ಎದುರಿಸಲು ಈ ಭಾಗದ ರೈತರು ಸನ್ನದ್ಧರಾಗಿದ್ದಾರೆ ಎಂಬ ವಿಶ್ವಾವನ್ನು ಅವರು ವ್ಯಕ್ತಪಡಿಸಿದರು.

ಇದರಿಂದ ಸುಮಾರು 350 ರೈತ ಕುಟುಂಬಗಳಿಗೆ ಭಾರೀ ತೊಂದರೆ ಯಾಗಿದೆ. ಈ ಮೊದಲು ಎರಡು ಬೆಳೆ ಬೆಳೆಯುತಿದ್ದ ರೈತರು ಕಳೆದ ಕೆಲವು ವರ್ಷಗಳಿಂದ ಎಪ್ರಿಲ್-ಮೇ ತಿಂಗಳಲ್ಲೇ ಸ್ವರ್ಣಾ ನದಿ ಬತ್ತಿ ಹೋಗುತ್ತಿರುವ ಹಿನ್ನೆಲೆಯಲ್ಲಿ ಈಗ ಎರಡನೇ ಬೆಳೆಯನ್ನೇ ಕೈಬಿಟ್ಟಿದ್ದಾರೆ. ಆದರೆ ಈ ಬಾರಿ ತೋಟಗಳಿಗೆ, ತೋಟಗಾರಿಕಾ ಬೆಳೆಗಳಿಗೂ ನೀರುಣಿಸಲು ಇದರಿಂದ ತೊಂದರೆಯಾಗುತ್ತಿದೆ ಎಂದು ರೈತರು ದೂರಿದ್ದಾರೆ.

ಪ್ರತಿ ವರ್ಷ ಎಪ್ರಿಲ್-ಮೇ-ಜೂನ್ ತಿಂಗಳಲ್ಲಿ ಉಡುಪಿ ನಗರದಲ್ಲಿ ಜನರಿಗೆ ಕುಡಿಯುವ ನೀರಿಗಾಗುತ್ತಿರುವ ಬವಣೆಯನ್ನು ಅರಿತಿರುವ ನಾವು ಸಾಕಷ್ಟು ತ್ಯಾಗ ಮಾಡುತಿದ್ದೇವೆ. ಆದರೆ ಈ ಬಾರಿ ಜನವರಿ ತಿಂಗಳಿಗೇ ಕೃಷಿ ಪಂಪುಗಳ ಸಂಪರ್ಕ ಕಡಿತ ಮಾಡಿರುವುದರಿಂದ ನಾವು ತೆಂಗು ಸೇರಿದಂತೆ ತೋಟಗಾರಿಕಾ ಬೆಳೆ ಹಾಗೂ ಜೀವನೋಪಾಯಕ್ಕಾಗಿ ತರಕಾರಿಯನ್ನು ಬೆಳೆಯಲು ಸಾಧ್ಯವಾಗು ವುದಿಲ್ಲ. ಹೀಗಾದರೆ ನಾವು ಬದುಕುವುದು ಹೇಗೆ ಎಂದು ನದಿ ತಟದ ರೈತರು ಗೋಳಾಡುತಿದ್ದಾರೆ.

ಸದ್ಯಕ್ಕೆ ವಾರದಲ್ಲಿ ಒಂದು ದಿನವಾದರೂ ಸ್ವರ್ಣ ನದಿಯಿಂದ ನೀರನ್ನು ಎತ್ತಲು ಅವಕಾಶ ನೀಡಬೇಕೆಂದು ನಾವು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುತ್ತೇವೆ. ಅವರು ಸಕಾರಾತ್ಮಕವಾಗಿ ಸ್ಪಂಧಿಸುವ ನಿರೀಕ್ಷೆ ನಮಗಿದೆ ಎಂದು ಕುದಿ ತಿಳಿಸಿದರು.

ಆದರೆ ಈ ಬಗ್ಗೆ ನಗರಸಭಾ ಆಯುಕ್ತರು ಒಪ್ಪಿಗೆ ಸೂಚಿಸಿ ವರದಿ ನೀಡಿದರೆ ಮಾತ್ರ ತನಗೆ ರೈತರ ಮನವಿಯನ್ನು ಪರಿಶೀಲಿಸಲು ಸಾಧ್ಯವಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಇಚ್ಛಾಶಕ್ತಿ ಕೊರತೆ: ಉಡುಪಿಗೆ ಕುಡಿಯುವ ನೀರಿಗಾಗಿ ಮೂರನೇ ಹಂತ ದಲ್ಲಿ ಇನ್ನೊಂದು ಅಣೆಕಟ್ಟು ಕಟ್ಟಿ ನೀರು ಸಂಗ್ರಹಿಸಿಟ್ಟುಕೊಳ್ಳುವಂತೆ ನಾವು ಮನವಿ ಮಾಡುತಿದ್ದೇವೆ. ಆದರೆ ಜನಪ್ರತಿನಿಧಿಗಳು ಇಚ್ಛಾಶಕ್ತಿಯನ್ನೇ ತೋರುತ್ತಿಲ್ಲ. ಹೀಗಾದರೆ ನಾವು ಬೀದಿಗಿಳಿದು ಹೋರಾಟ ಮಾಡುವುದೊಂದು ನಮಗಿರುವ ದಾರಿ ಎಂದು ಕುದಿ ಶ್ರೀನಿವಾಸ ಭಟ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X