‘ಸಾಹಿತ್ಯ -ಜೀವನ ಮೌಲ್ಯ’ ಕುರಿತು ವಿಚಾರ ಸಂಕಿರಣ
ಉಡುಪಿ, ಜ.23: ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ಸಾಲಿನ ಸಾಹಿತ್ಯ ಸಂಘದ ಉದ್ಘಾಟನೆ ಹಾಗೂ ‘ಸಾಹಿತ್ಯ ಮತ್ತು ಜೀವನ ಮೌಲ್ಯ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಇತ್ತೀಚೆಗೆ ಕಾಲೇಜಿನ ಎವಿ ಹಾಲಿನಲ್ಲಿ ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಪೂರ್ಣಪ್ರಜ್ಞಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಶ್ರೀಕಾಂತ ಸಿದ್ದಾಪುರ ಮಾತನಾಡಿದರು. ಇದೇ ಸಂದರ್ಭದಲ್ಲಿ ರಸಪ್ರಶ್ನೆ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಭಾಸ್ಕರ ಶೆಟ್ಟಿ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಾಮರಾಯ ಆಚಾರ್ಯ ಉಪಸ್ಥಿತರಿದ್ದರು. ವಿಭಾಗದ ಮುಖ್ಯಸ್ಥ ಡಾ.ರವಿರಾಜ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸೌಮ್ಯಲತಾ ಕಾರ್ಯಕ್ರಮ ನಿರೂಪಿಸಿದರು.
Next Story