Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಸಕರ ವರ್ತನೆ, ಕಾರ್ಯವೈಖರಿಗಳು ಶಕುನಿಗೆ...

ಶಾಸಕರ ವರ್ತನೆ, ಕಾರ್ಯವೈಖರಿಗಳು ಶಕುನಿಗೆ ಹೋಲುತ್ತವೆ: ಗಾಯತ್ರಿ ಶಾಂತೇಗೌಡ

ವಾರ್ತಾಭಾರತಿವಾರ್ತಾಭಾರತಿ23 Jan 2018 11:00 PM IST
share

ಚಿಕ್ಕಮಗಳೂರು, ಜ.23: ಶಾಸಕ ರವಿ ಅವರ ವರ್ತನೆಗಳು, ಕಾರ್ಯವೈಖರಿ, ಹಾವಭಾವಗಳು ಶಕುನಿಯನ್ನು ಹೋಲುವಂತಿವೆ ಎಂದು ವಿಧಾನ ಪರಿಷತ್ ಮಾಜಿ ಶಾಸಕಿ ಎ.ವಿ.ಗಾಯತ್ರಿ ಶಾಂತೇಗೌಡ ಹೇಳಿದ್ದಾರೆ.

ಅವರು ಈ ಕುರಿತು ಮಂಗಳವಾರ ಹೇಳಿಕೆ ನೀಡಿದ್ದು, ಸಿಎಂ ಸಿದ್ದರಾಮಯ್ಯರ ಹಾವಭಾವ ದುರ್ಯೋಧನ ಪಾತ್ರಕ್ಕೆ ಹೋಲುತ್ತವೆ ಎಂದು ಹೇಳಿರುವ ಶಾಸಕ ಸಿ.ಟಿ.ರವಿ ಅವರ ಹೇಳಿಕೆಗೆ ಮಂಗಳವಾರ ಪ್ರತಿಕ್ರಿಯಿಸಿರುವ ಗಾಯತ್ರಿ ಶಾಂತೇಗೌಡ, ಕೌರವರ ಜೊತೆಯಲ್ಲಿದ್ದುಕೊಂಡೆ ಅವರುಗಳನ್ನು ನಾಶ ಮಾಡಿದ ರೀತಿಯಲ್ಲೇ ಶಾಸಕರು ಈ ಕ್ಷೇತ್ರದಲ್ಲಿ ಶಕುನಿ ರೀತಿಯಲ್ಲಿ ಕ್ಷೇತ್ರವನ್ನು ಅಭಿವೃದ್ಧಿ ವಿಚಾರದಲ್ಲಿ ಹಾಳುಗೆಡವಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಾಂಡವರ ಪಕ್ಷ, ಬಿಜೆಪಿ ಕೌರವರ ಪಕ್ಷ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಅವರು, ಇಂತಹ ಶಕುನಿಗಳಿಂದ ಕೌರವರ ಪಕ್ಷ ಬಿಜೆಪಿ ನಾಶವಾಗುತ್ತದೆ. ಆ ಪಕ್ಷವನ್ನು ನಾಶ ಮಾಡಲು ಬೇರೆಯವರ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ಶಾಸಕರು ಹೇಳಿರುವುದು ಒಂದು ರೀತಿಯಲ್ಲಿ ಹಾಸ್ಯಾಸ್ಪದವಾಗಿದೆ. ಕೌರವರ ಪಕ್ಷ ರಾಜ್ಯದಲ್ಲಿ ಆಡಳಿತ ನಡೆಸುವ ಸಂದರ್ಭದಲ್ಲಿ ಭ್ರಷ್ಟಾಚಾರ ನಡೆಸಿರುವ ಯಾವ ಮಂತ್ರಿಗಳು ಹಾಗೂ ಯಾವ ಮುಖ್ಯಮಂತ್ರಿ ಜೈಲು ಸೇರಿ ಬಂದಿದ್ದಾರೆ ಎಂಬುದನ್ನು ರಾಜ್ಯದ ಜನರು ಬಲ್ಲವರಾಗಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಜೈಲು ಸೇರಿರುವ ಮುಖ್ಯಮಂತ್ರಿ ಯಾವ ಪಕ್ಷದಲ್ಲಿದ್ದರು ಎಂಬುವ ಬಗ್ಗೆ ಶಾಸಕರು ಒಮ್ಮೆ ನೆನಪಿಸಿಕೊಳ್ಳಬೇಕು. ತಮ್ಮ ಮನೆ ಮುಂದೆ ಆಳುದ್ದ ಗುಂಡಿ ಬಿಟ್ಟುಕೊಂಡು ಎದುರು ಮನೆಯ ಗೇಣುದ್ದ ಗುಂಡಿ ಮುಚ್ಚಿಸುವ ಕೆಲಸ ಶೋಭೆ ತರುವುದಿಲ್ಲ ಎಂಬುದನ್ನು ಶಾಸಕರು ಮನಗಾಣಬೇಕು ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜಕೀಯ ಜೀವನದಲ್ಲಿ ಒಂದೇ ಒಂದು ಭ್ರಷ್ಟಾಚಾರ ಪ್ರಕರಣ ಇಲ್ಲದಿದ್ದರೂ ಮೊಸರಿನಲ್ಲಿ ಕಲ್ಲು ಹುಡುಕುವ ವ್ಯರ್ಥ ಪ್ರಯತ್ನವನ್ನು ಶಾಸಕರು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಹಿಂದೆಂದೂ ಕಂಡರಿಯದಷ್ಟು ಅಭಿವೃದ್ಧಿ ಕಾರ್ಯಗಳು, ಜನಪರ, ಸಮಾಜಮುಖಿ ಕಾರ್ಯಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿವೆ. ಅದನ್ನು ಸಹಿಸಿಕೊಳ್ಳಲಾರದೆ ಬಿಟ್ಟಿ ಪ್ರಚಾರಕ್ಕಾಗಿ ಈ ರೀತಿಯ ಹೇಳಿಕೆಗಳನ್ನು ಶಾಸಕರು ನೀಡುತ್ತಿದ್ದಾರೆ. ಅವರ ವರ್ತನೆಗಳು ಶಕುನಿ ರೀತಿಯಲ್ಲಿವೆ ಎಂಬುದಕ್ಕೆ ಅವರ ಹೇಳಿಕೆಗಳೇ ಸಾಕ್ಷಿಯಾಗಿವೆ ಎಂದು ಟೀಕಿಸಿದ್ದಾರೆ.

ಕೊಟ್ಟ ಮಾತಿಗೆ ತಪ್ಪದ ರಾಜ್ಯ ಸರ್ಕಾರ ನಮ್ಮದು. ಚುನಾವಣೆಯಲ್ಲಿ ಕೊಟ್ಟಿದ್ದ ಭರವಸೆಗಳಲ್ಲಿ ಬಹುತೇಕ ಈಡೇರಿವೆ ಎಂಬುದು ಹೆಮ್ಮೆಪಡುವ ವಿಚಾರ ಎಂದಿರುವ ಅವರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ ಎಷ್ಟೆಷ್ಟು ಕೆರೆಗಳ ಹೂಳು ತೆಗೆಯಲಾಗಿದೆ? ಹೇಗೆ ಅಭಿವೃದ್ಧಿಪಡಿಸಲಾಗಿದೆ ಎಂಬ ಬಗ್ಗೆ ಮಾಹಿತಿಗಳು ನಮ್ಮ ಬಳಿ ಇವೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X