Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಸ್ಕೃತ ಭಾಷೆಗೆ ವೈದಿಕ, ಬೌದ್ಧ, ಜೈನರ...

ಸಂಸ್ಕೃತ ಭಾಷೆಗೆ ವೈದಿಕ, ಬೌದ್ಧ, ಜೈನರ ಕೊಡುಗೆ ಅಪಾರ: ಅಮೃತೇಶ ಆಚಾರ್ಯ

ಫಿಲೋಮಿನಾದಲ್ಲಿ ‘ಸಂಸ್ಕೃತೋತ್ಸವ’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ23 Jan 2018 11:09 PM IST
share
ಸಂಸ್ಕೃತ ಭಾಷೆಗೆ ವೈದಿಕ, ಬೌದ್ಧ, ಜೈನರ ಕೊಡುಗೆ ಅಪಾರ: ಅಮೃತೇಶ ಆಚಾರ್ಯ

ಪುತ್ತೂರು, ಜ. 23: ಸಂಸ್ಕೃತವು ಒಂದು ಧಾತು ಜನ್ಯವಾದ ಪ್ರಾಚೀನ ಭಾಷೆಯಾಗಿದೆ. ಈ ಭಾಷೆಯಲ್ಲಿ ಕ್ರಿಯೆಯನ್ನು ಆಧರಿಸಿ ಶಬ್ದಗಳ ಉತ್ಪತ್ತಿಯಾಗಿದೆ. ಈ ಭಾಷೆಯ ಬೆಳವಣಿಗೆಯಲ್ಲಿ ವೈದಿಕರು, ಬೌದ್ಧರು, ಜೈನರು ಇತ್ಯಾದಿ ಎಲ್ಲಾ ಜನಾಂಗದವರು ಯಾವುದೇ ಸಂಕುಚಿತ ಮನೋಭಾವನೆಯಿಲ್ಲದೆ ಅಪಾರ ಕೊಡುಗೆಯನ್ನು ನೀಡಿದ್ದಾರೆ ಎಂದು ಉಡುಪಿಯ ಸಂಸ್ಕೃತ ಕಾಲೇಜಿನ ಅಲಂಕಾರ ಶಾಸ್ತ್ರ ಪ್ರಾಧ್ಯಾಪಕರಾದ ವಿದ್ವಾನ್ ಅಮೃತೇಶ ಆಚಾರ್ಯ ಅವರು ಹೇಳಿದರು.

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಸಂಸ್ಕೃತ ವಿಭಾಗದ ವತಿಯಿಂದ ಮಂಗಳವಾರ ನಡೆದ ’ಸಂಸ್ಕೃತೋತ್ಸವ’- ಪ್ರಾಚೀನ ಭಾರತೀಯ ವಿಜ್ಞಾನ ವೈಭವ ಪರಿಚಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಂಸ್ಕೃತವು ಹುಟ್ಟಿದ ಭಾಷೆಯಲ್ಲ. ಅದೊಂದು ದೈವೀ ಭಾಷೆ. ಅದರ ಮೂಲವನ್ನು ಹುಡುಕಲು ಸಾಧ್ಯವಿಲ್ಲ. ಅದು ಸುಮಾರು ಆರು ಸಾವಿರ ವರ್ಷಗಳ ಹಿಂದೆ ಋಗ್ವೇದದ ಕಾಲದಲ್ಲಿಯೇ ಇತ್ತು ಎಂದು ಒಪ್ಪಲಾಗಿದೆ. ಯಾವ ಭಾಷೆಯು ಸಾರವಾಗಿದೆಯೋ ಅಂತಹ ಭಾಷೆಯು ದೀರ್ಘವಾಗಿ ಉಳಿಯಬಲ್ಲುದು. ಸಂಸ್ಕೃತ ಭಾಷೆಯು ಯಾವುದೇ ರೀತಿಯಲ್ಲಿ ವಿಕಾರತೆಗೊಂಡಿಲ್ಲ. ಇದರಲ್ಲಿ ಮುಖ್ಯವಾಗಿ ವೇದಾದಿ ಶಾಸ್ತ್ರಗಳು, ಪುರಾಣಗಳು, ಕಾವ್ಯಗಳು ಎಂಬ ಪ್ರಬೇಧಗಳಿವೆ. ವಿಶಿಷ್ಟ ಪರಂಪರೆಯುಳ್ಳ ಸಂಸ್ಕೃತ ಭಾಷೆಯ ಅಧ್ಯಯನಕ್ಕೆ ಶಿಕ್ಷಣ ಸಂಸ್ಥೆಗಳು ಯಾವುದೇ ಕೀಳರಿಮೆಯಿಲ್ಲದೆ ವಿಶೇಷ ಕಾಳಜಿ ವಹಿಸುವ ಅಗತ್ಯವಿದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಲಿಯೋ ನೊರೊನ್ಹಾ ಅವರು ಮಾತನಾಡಿ, ಭವ್ಯ ಪರಂಪರೆಯುಳ್ಳ ಸಂಸ್ಕೃತ ಭಾಷೆಗೆ ವಿಶ್ವ ಮಟ್ಟದಲ್ಲಿಯೇ ಶ್ರೇಷ್ಟ ಮಟ್ಟದ ಮನ್ನಣೆಯಿದ್ದು,ಸಂಸ್ಕೃತ ಭಾಷೆಯ ಬಗ್ಗೆ ಇನ್ನಷ್ಟು ಸಂಶೋಧನೆ ಕೈಗೊಳ್ಳುವ ಅಗತ್ಯವಿದೆ ಎಂದರು.

ಅಧ್ಯಕ್ಷತೆ ವಹಿಸಿದ ಕಾಲೇಜಿನ ಸಂಚಾಲಕ ಆಲ್ಫ್ರೆಡ್ ಜೆ ಪಿಂಟೊ ಅವರು ಮಾತನಾಡಿ, ಭಾಷೆಯ ಮೂಲಕ ಸಂಬಂಧ, ನಡೆ ನುಡಿ ಬೆಳೆಯುತ್ತದೆ. ನಾವು ಮಾತೃ ಭಾಷೆಗೆ ಪ್ರಾಧಾನ್ಯತೆ ಕೊಡುವಂತೆ ಶಾಲಾ ಕಾಲೇಜುಗಳಲ್ಲಿ ರಾಜ್ಯ ಭಾಷೆ, ರಾಷ್ಟ್ರ ಭಾಷೆಯ ಬೆಳವಣಿಗೆಗಳಿಗೂ ಸೂಕ್ತ ಪ್ರೊತ್ಸಾಹ ನೀಡುವ ಅಗತ್ಯವಿದೆ ಎಂದರು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕರಾದ ವಿದ್ವಾನ್ ಸುರೇಶ್ ಕುಮಾರ್ ಸ್ವಾಗತಿಸಿದರು. ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಕೆ ವಿಘ್ನೇಶ ಶರ್ಮ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ದೀಕ್ಷಿತಾ ವಂದಿಸಿದರು. ಸೌಮ್ಯ ಪಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X