ಮಂಗಳೂರು: ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ಗೆ ರಾಷ್ಟ್ರಪತಿ ಪದಕ

ಮಂಗಳೂರು, ಜ.24: ಗಣರಾಜ್ಯೋತ್ಸವದ ಸಂದರ್ಭ ಪೊಲೀಸ್ ಇಲಾಖೆಯಲ್ಲಿ ದಕ್ಷ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ರಾಷ್ಟ್ರಪತಿ ಪದಕಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಆಯ್ಕೆಯಾಗಿದ್ದಾರೆ.
ಸೇವಾ ಅವಧಿಯಲ್ಲಿ ನಿರ್ವಹಿಸಿದ ದಕ್ಷತೆಯನ್ನು ಪರಿಗಣಿಸಿ ಈ ಪದಕ ನೀಡಲಾಗುತ್ತಿದೆ. ಅದರಂತೆ ರಾಜ್ಯದಿಂದ ಈ ಪದಕಕ್ಕೆ ಆಯುಕ್ತ ಟಿ.ಆರ್. ಸುರೇಶ್ ಸಹಿತ ಮೂವರಿಗೆ ಲಭಿಸಿದೆ.
ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಶೂಟೌಟ್ ಪ್ರಕರಣದ ಆರೋಪಿಗಳನ್ನು, ದೀಪಕ್ ರಾವ್ ಹಾಗೂ ಬಶೀರ್ ಹತ್ಯೆ ಪ್ರಕರಣದ ಆರೋಪಿಗಳ ಸೆರೆ ಸಹಿತ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಟಿ. ಆರ್.ಸುರೇಶ್ ಪ್ರಮುಖ ಪಾತ್ರ ವಹಿಸಿದ್ದರು.
Next Story





