Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ. 26: ಎಸ್ಕೆಎಸ್ಸೆಸ್ಸೆಫ್ ನಿಂದ...

ಜ. 26: ಎಸ್ಕೆಎಸ್ಸೆಸ್ಸೆಫ್ ನಿಂದ ಗುರುಪುರ ಕೈ ಕಂಬದಲ್ಲಿ ಮಾನವ ಸರಪಳಿ ಜಾಥ

ವಾರ್ತಾಭಾರತಿವಾರ್ತಾಭಾರತಿ24 Jan 2018 9:59 PM IST
share
ಜ. 26: ಎಸ್ಕೆಎಸ್ಸೆಸ್ಸೆಫ್ ನಿಂದ ಗುರುಪುರ ಕೈ ಕಂಬದಲ್ಲಿ ಮಾನವ ಸರಪಳಿ ಜಾಥ

ಮಂಗಳೂರು, ಜ. 24: ಭಾರತದ ಗಣರಾಜ್ಯ ದಿನದಂದು ಎಸ್ಕೆಎಸ್ಸೆಸ್ಸೆಫ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ  ಗುರುಪುರ ಕೈ ಕಂಬದಲ್ಲಿ ಸೌರ್ಹಾದತೆಯ ಸಂಕಲ್ಪದೊಂದಿಗೆ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸಿದ್ಧಿಕ್ ಅಬ್ದುಲ್ ಖಾದರ್ ಸುದ್ದಿ ಗೊಷ್ಠಿಯಲ್ಲಿಂದು ತಿಳಿಸಿದ್ದಾರೆ.

1990ರ ನಂತರ ದೇಶಾದ್ಯಂತ ಉಂಟಾದ ಮತೀಯ ಸಂಘರ್ಷದ ಹಿನ್ನೆಲೆಯಲ್ಲಿ ಮತ್ತೆ ಸಮಾಜದಲ್ಲಿ ಸೌರ್ಹಾದತೆಯ ವಾತಾವರಣ ಮೂಡಿಸಲು ದೇಶದ ಸಂವಿಧಾನದ ಮೌಲ್ಯಗಳಾದ ಸ್ವಾತಂತ್ರ, ಸಮಾನತೆ, ಸಹೊದರತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ದಕ್ಷಿಣ ಭಾರತದ ಮುಸ್ಲಿಂ ಸಮುದಾಯದ ಆಶಾ ಕೇಂದ್ರವಾದ ಸಮಸ್ತ ಕೇರಳ ಜಂಇಯ್ಯತುಲ್ ಉಲಾಮಾ ಆಶೀರ್ವಾದದೊಂದಿಗೆ ಸಮಾಜದಲ್ಲಿ ರಚನಾತ್ಮಕ ಕಾರ್ಯಕ್ರಮಗಳಲ್ಲಿ ತೊಡಗಿಕೊಂಡಿರುವ ಕೇರಳದ ಎಸ್ಕೆಎಸ್ಸೆಸ್ಸೆಫ್ ಸಂಘಟನೆಯ ವತಿಯಿಂದ ದೇಶಾದ್ಯಂತ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿರುವುದರ ಅಂಗವಾಗಿ ಜಿಲ್ಲಾ ಕೇಂದ್ರಗಳಲ್ಲಿ ದೇಶ ರಕ್ಷಣೆಯ ಪ್ರತಿಜ್ಞೆ ಬೋಧಿಸುವ, ರಾಷ್ಟ್ರ ರಕ್ಷಣೆಯ ಸಂಕಲ್ಪದೊಂದಿಗೆ ಕಾರ್ಯಕ್ರಮವನ್ನು ದೇಶದ 36 ಕಡೆಗಳಲ್ಲಿ ಹಾಗೂ ಕೊಲ್ಲಿ ರಾಷ್ಟ್ರಗಳು ಸೇರಿದಂತೆ ಅನಿವಾಸಿ ಭಾರತೀಯರು ಇರುವ 36 ಕಡೆಗಳಲ್ಲಿ ಸೇರಿದಂತೆ ಒಟ್ಟು 72 ಕಡೆಗಳಲ್ಲಿ ಸಂಘಟನೆಯ ವತಿಯಿಂದ ಜ. 26ರಂದು  ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಿದ್ದಿಕ್ ಅಬ್ದುಲ್ ಖಾದರ್ ತಿಳಿಸಿದ್ದಾರೆ.

ಮಾನವ ಸರಪಳಿ ಕಾರ್ಯಕ್ರಮ-ಜಾಥ:- ಜನವರಿ 26ರಂದು ಬೆಳಗ್ಗೆ 9ಗಂಟೆಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷ ಶಾಹುಲ್ ಹಮೀದ್ ಮೆಟ್ರೋ ಧ್ವಜಾರೋಹಣ ನಿರ್ವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕೈ ಕಂಬದಿಂದ ಜಾಥಾ ಪ್ರಾರಂಭವಾಗಲಿದೆ. ಅಲ್‌ಹಾಜ್ ವಿ.ಕೆ.ಅಬೂಬಕ್ಕರ್ ಮುಸ್ಲಿಯಾರ್ ಅತ್ರಾಡಿ ಖಾಝಿ ಜಾಥವನ್ನು ಉದ್ಘಾಟಿಸಲಿದ್ದಾರೆ. 10 ಸಾವಿರ ಮಂದಿ ಮಾನವ ಸರಪಳಿಯಲ್ಲಿ ದಪ್ಪು ತಂಡ ಭಾಗವಹಿಸಲಿದೆ. ಸಂಜೆ 4 ಗಂಟೆಗೆ ಪೊಳಲಿ ದ್ವಾರದ ಬಳಿಯ ಭಾಮಿ ಶಾಲೆಯ ಪಕ್ಕದ ಮೈದಾನದಲ್ಲಿ ಮಾನವ ಸರಪಳಿ ಜಾಥದ ಸಮಾರೋಪ ಸಮಾರಂಭ ನಡೆಯಲಿದೆ.

ಸಮಸ್ತ ಕೇಂದ್ರ ಮುಶಾವರದ ಉಪಾಧ್ಯಕ್ಷ ಶೈಖುನಾ ಅಬ್ದುಲ್ ಜಬ್ಬಾರ್ ಉಸ್ತಾದ್ ಅಧ್ಯಕ್ಷತೆ ವಹಿಸಿಲಿದ್ದಾರೆ. ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್, ಶಾಸಕ ಮೊಯ್ದಿನ್ ಬಾವ, ಐವನ್ ಡಿ ಸೋಜ,ಜಿಲ್ಲಾ ಪಂಚಾಯತ್ ಸದಸ್ಯ ಯು.ಪಿ.ಇಬ್ರಾಹೀಂ,ಗೌರವ ಅತಿಥಿಗಳಾಗಿ ಈಶ ವಿಠಲ ದಾಸ ಸ್ವಾಮೀಜಿ ಕೇಮಾರು ಮಠ,ಪೊಂಪೈ ಚರ್ಚ್ ಕೈಕಂಬ ಸಾನಿಧ್ಯ ದ ಧರ್ಮಗುರು ವಂ.ಲೋಬೊ ಬಜಪೆ ಠಾಣೆಯ ವೃತ್ತ ನಿರೀಕ್ಷಕ ಪರಶಿವ ಮೂರ್ತಿ ಹಾಗೂ ಸಮಸ್ತ ಉಲಾಮ ಹಾಗೂ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ.

ಎಸ್ಕೆಎಸ್ಸೆಸ್ಸೆಫ್ ಜಿಲ್ಲಾ ಅಧ್ಯಕ್ಷ ಇಸ್ಹಾಕ್ ಪೈಝಿ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಶೌಕತ್ತಲಿ ವೌಲವಿ ವೆಳ್ಳಮುಂಡ ಕೇರಳ ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು ಭಾಗವಹಿಸಲಿದ್ದರೆ ಎಂದು ಅಬ್ದುಲ್ ಖಾದರ್ ತಿಳಿಸಿದ್ದಾರೆ.

ಸುದ್ದಿಗೊಷ್ಠಿಯಲ್ಲಿ ಎಸ್ಕೆಎಸ್ಸೆಸ್ಸೆಫ್ನ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಖಾಸಿಂ ದಾರಿಮಿ,ಅಬ್ದುಲ್ ಮಜೀದ್ ಸೂರಲ್ಪಾಡಿ, ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಯಾಮಾನಿ, ಮಾನವ ಸರಪಳಿ ಸ್ವಾಗತ ಸಮಿತಿಯ ಅಧ್ಯಕ್ಷ ರಿಯಾಝ್ ಮಿಲನ್, ಕೋಶಾಧಿಕಾರಿ ಅಬ್ದುಲ್ ಜಲೀಲ್ ಬದ್ರಿಯಾ, ಮದ್ರಸ ಮ್ಯಾನೇಜ್ ಮೆಂಟ್ ಗುರುಪುರದ ಅಧ್ಯಕ್ಷ ನೌಶಾದ್ ಹಾಜಿ, ಉಸ್ಮಾನ್ ಹಾಜಿ, ಮೆಟ್ರೋಶಾಹುಲ್ ಹಮೀದ್, ಹಾರೀಶ್ ಕೆ, ಅಬ್ದುಲ್ ಮಜೀದ್ ದಾರಿಮಿ, ಎಚ್.ಎಂ.ಮೊದೀನ್ ಹಾಜಿ, ಆರೀಫ್ ಬಡಕ ಬೈಲು ಎಚ್.ಎ.ಮುಹಮ್ಮದ್ ಕುಂಞ ಮಾಸ್ಟರ್, ಶಾಕಿರ್ ಮಳಲಿ, ಹಂಝ ಮಿಶ್ರಿಯಾ , ಶಾಹುಲ್ ಹಮೀದ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X