Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಾವಡೇಕರ್ ಅವರಿಗೆ ಕರ್ನಾಟಕದ ಬಗ್ಗೆ ಏನು...

ಜಾವಡೇಕರ್ ಅವರಿಗೆ ಕರ್ನಾಟಕದ ಬಗ್ಗೆ ಏನು ಗೊತ್ತು: ಸಿಎಂ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ24 Jan 2018 11:24 PM IST
share
ಜಾವಡೇಕರ್ ಅವರಿಗೆ ಕರ್ನಾಟಕದ ಬಗ್ಗೆ ಏನು ಗೊತ್ತು: ಸಿಎಂ ತಿರುಗೇಟು

ಮೈಸೂರು, ಜ.24: ಕೇಂದ್ರ ಸಚಿವ ಜಾವಡೇಕರ್ ಅವರಿಗೆ ಕರ್ನಾಟಕದ ಬಗ್ಗೆ ಏನು ಗೊತ್ತು? ಅವರೇನು ಭವಿಷ್ಯ ಹೇಳುತ್ತಾರಾ? ಜಾವಡೇಕರ್, ಅಮಿತ್ ಶಾ, ನರೇಂದ್ರ ಮೋದಿ ಯಾರೇ ಬಂದರೂ ಕರ್ನಾಟಕದಲ್ಲಿ ಅವರ ಆಟ ನಡೆಯುವುದಿಲ್ಲ. ನೂರಕ್ಕೆ ನೂರು ನಾವೇ ಗೆಲುವು ಸಾಧಿಸುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ನೂರು ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಜಾವಡೇಕರ್ ಹೇಳಿಕೆಗೆ ನಗರದ ಟಿ.ಕೆ.ಲೇಔಟ್‌ನ ತಮ್ಮ ನಿವಾಸದಲ್ಲಿ ಬುಧವಾರ ತಿರುಗೇಟು ನೀಡಿದ ಅವರು, ಜಾವಡೇಕರ್‌ಗೆ ಕರ್ನಾಟಕದ ಬಗ್ಗೆ ಏನು ಗೊತ್ತಿಲ್ಲ. ಇನ್ನೂ ಯಡಿಯೂರಪ್ಪನವರಿಗಂತೂ ಇಲ್ಲಿನ ಬಗ್ಗೆ ಏನೂ ತಿಳಿದಿಲ್ಲ. ಕೇಂದ್ರ ಸರಕಾರದ ಅನುದಾನ ಯಡಿಯೂರಪ್ಪನವರ ಮನೆಯದ್ದಾ? ನಮಗೆ ಭಿಕ್ಷೆ ಕೊಡುವ ರೀತಿಯಲ್ಲಿ ಅಮಿತ್ ಶಾ, ಯಡಿಯೂರಪ್ಪ ನಾವು ಕೇಂದ್ರದಿಂದ ಹಣ ಕೊಟ್ಟಿದ್ದೇವೆ ಎಂದು ಹೇಳುತ್ತಾರೆ. ಅವರಿಗೆ ಸಂವಿಧಾನ, ಕಾನೂನು ಗೊತ್ತಿಲ್ಲ. ಸುಮ್ಮನೆ ಜನರಿಗೆ ತಪ್ಪು ಮಾಹಿತಿ ನೀಡಬಾರದು. ಕಾನೂನಾತ್ಮಕವಾಗಿ ಕೇಂದ್ರದಲ್ಲಿ ಯಾವುದೇ ಸರಕಾರ ಇದ್ದರೂ ರಾಜ್ಯಕ್ಕೆ ಅನುದಾನ ನೀಡಲೇಬೇಕು. ಯಡಿಯೂರಪ್ಪಗೆ ಈ ರೀತಿ ಮಾತನಾಡಲು ನಾಚಿಕೆಯಾಗಬೇಕು. ಅವರು ಮುಖ್ಯಮಂತ್ರಿಯಾಗಿದ್ದವರು, ಸ್ವಲ್ಪ ಕಾನೂನು ತಿಳಿದುಕೊಳ್ಳಬೇಕು ಎಂದು ಹರಿಹಾಯ್ದರು.

ವಿ.ಶ್ರೀನಿವಾಸಪ್ರಸಾದ್ ‘ಸಿದ್ದರಾಮಯ್ಯ ಕುರಿ’ ಎಂದು ಹೇಳಿಕೆ ನೀಡಿದ್ದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಕೀಳು ಮಟ್ಟದ ರಾಜಕಾರಣಕ್ಕೆ ಪ್ರತಿಕ್ರಿಯೆ ನೀಡಲ್ಲ ಎಂದ ಅವರು, ನಾಳಿನ ಬಂದ್ ವೇಳೆ ಸಾರ್ವಜನಿಕರು ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಸಿಎಂ ಜೊತೆಗಿದ್ದರು. ಇದೇ ವೇಳೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ವರ್ಗಾವಣೆಯಲ್ಲಿ ರಾಜಕೀಯ ಇಲ್ಲ:

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿಚಾರವಾಗಿ ಹಾಸನ ಮಾಜಿ ಶಾಸಕ ಶಿವರಾಂ ನನ್ನ ಜೊತೆ ಮಾತನಾಡಿಲ್ಲ. ಈ ವರ್ಗಾವಣೆ ಆಡಳಿತಾತ್ಮಕ ಪ್ರಕ್ರಿಯೆ. ಇದರಲ್ಲಿ ರಾಜಕೀಯ ಇಲ್ಲ. ಇದನ್ನೇ ಯಾಕೆ ದೊಡ್ಡ ವಿಚಾರ ಮಾಡಬೇಕು. ದೇವೇಗೌಡರ ಹೇಳಿಕೆ ಬಗ್ಗೆ ನಾನು ಟೀಕೆ ಮಾಡಲ್ಲ. ಅವರು ಯಜಮಾನರು. ಅವರು ಏನು ಬೇಕಾದರೂ ಮಾತನಾಡಿಕೊಳ್ಳಲಿ. ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ.
-ಸಿದ್ದರಾಮಯ್ಯ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X