Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಕೀಯ ಪ್ರವಾಸಕ್ಕೆ ಎಂಜಿಆರ್ ಸಿನೆಮಾದ...

ರಾಜಕೀಯ ಪ್ರವಾಸಕ್ಕೆ ಎಂಜಿಆರ್ ಸಿನೆಮಾದ ಹೆಸರಿಟ್ಟ ಕಮಲ್ ಹಾಸನ್

ವಾರ್ತಾಭಾರತಿವಾರ್ತಾಭಾರತಿ25 Jan 2018 5:46 PM IST
share
ರಾಜಕೀಯ ಪ್ರವಾಸಕ್ಕೆ ಎಂಜಿಆರ್ ಸಿನೆಮಾದ ಹೆಸರಿಟ್ಟ ಕಮಲ್ ಹಾಸನ್

ಚೆನ್ನೈ, ಜ.25: ಖ್ಯಾತ ನಟ ಕಮಲ್ ಹಾಸನ್ ತಮ್ಮದೇ ರಾಜಕೀಯ ಪಕ್ಷವನ್ನು ಈಗಾಗಲೇ ಘೋಷಿಸಿದ್ದಾರೆ. ಫೆಬ್ರವರಿ 21ರಂದು ಅವರು ರಾಜ್ಯಾದ್ಯಂತ ತಮ್ಮ ರಾಜಕೀಯ ಪ್ರವಾಸವನ್ನು ಕೈಗೊಳ್ಳಲಿದ್ದು ಅದಕ್ಕೆ ತಮಿಳು ಸಿನೆಮಾರಂಗದ ಮೇರು ನಟ ಹಾಗೂ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಂ.ಜಿ ರಾಮಚಂದ್ರನ್ ಅಭಿನಯದ ಯಶಸ್ವಿ ಸಿನೆಮಾ ‘ನಾಳೈ ನಮದೆ’ ಎಂದು ಹೆಸರಿಟ್ಟಿದ್ದಾರೆ.

ನೂತನ ಪಕ್ಷವನ್ನು ಘೋಷಿಸಿರುವ ಕಮಲ್, ಒಂದು ಗ್ರಾಮವನ್ನು ದತ್ತು ಪಡೆದು, ಶಿಕ್ಷಣ, ಸಾರಿಗೆ ಮತ್ತು ನಾಗರಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಅದನ್ನು ಮಾದರಿ ಗ್ರಾಮವಾಗಿ ಮಾಡುವ ತಮ್ಮ ಯೋಜನೆಯ ಬಗ್ಗೆ ಗುರುವಾರದಂದು ವಿವರಿಸಿದ್ದಾರೆ.

ಆನಂದ ವಿಕಟನ್ ಎಂಬ ವಾರ ಪತ್ರಿಕೆಯಲ್ಲಿ ಈ ವಾರದ ತನ್ನ ಲೇಖನಗಳ ಸರಣಿ ಎನ್ನುಳ್ ಮಯಮ್ ಕೊಂಡ ಪುಯಲ್ (ನನ್ನಲ್ಲಿ ಕೇಂದ್ರತವಾಗಿರುವ ಬಿರುಗಾಳಿ) ಅನ್ನು ಬರೆದಿರುವ ಕಮಲ್ ಅದಕ್ಕೆ ಮುನ್ಮದಿರಿ ಗ್ರಾಮಂ..ನಾಳೈ ನಮದೆ ಪಯಣಂ. ಮುಳು ಅರಸಿಯಲ್ ಪ್ಲಾನ್ (ಮಾದರಿ ಗ್ರಾಮ... ನಾಳೆ ನಮ್ಮದೆ ಪ್ರವಾಸ. ಸಂಪೂರ್ಣ ರಾಜಕೀಯ ಯೋಜನೆ) ಎಂದು ಶೀರ್ಷಿಕೆ ನೀಡಿದ್ದಾರೆ. ಪ್ರವಾಸಕ್ಕೆ ಎಂಜಿಆರ್ ಸಿನೆಮಾದ ಹೆಸರನ್ನು ನೀಡಿರುವ ಬಗ್ಗೆ ಮಾತನಾಡಿದ ಕಮಲ್, ಅದರಿಂದ ಗತಕಾಲದ ಮೇರುನಟನ ನೆನಪಾಗುತ್ತದೆ. ಅವೆಲ್ಲವೂ ಒಳ್ಳೆಯ ನೆನಪುಗಳಾಗಿರುವ ಕಾರಣ ನಾವು ಆ ಹೆಸರನ್ನು ಇಟ್ಟಿದ್ದೇವೆ ಎಂದು ತಿಳಿಸಿದ್ದಾರೆ.

 ವಿದ್ಯಾರ್ಥಿಗಳಿಗಾಗಿ ಎಐಡಿಎಂಕೆಯು ಉಚಿತ ಲ್ಯಾಪ್‌ಟಾಪ್ ಪೂರೈಸುವ ಯೋಜನೆಯ ಬಗ್ಗೆ ವ್ಯಂಗ್ಯವಾಡಿದ ಕಮಲ್, ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳನ್ನು ತಿನ್ನಲಾಗುವುದಿಲ್ಲ. ಆದರೆ ಅವುಗಳು ಮಾತ್ರ ಇಂದು ಹಲವು ಹಳ್ಳಿಗಳನ್ನು ತಲುಪಿವೆ. ಕೇವಲ ಲ್ಯಾಪ್‌ಟಾಪ್ ಒದಗಿಸುವುದರಿಂದ ಜ್ಞಾನ ಹೆಚ್ಚಾಗುತ್ತದೆ ಎಂಬುದನ್ನು ನಾನು ಒಪ್ಪುವುದಿಲ್ಲ. ಅದನ್ನು ನಿರ್ವಹಿಸಲೂ ನಿಮ್ಮಲ್ಲಿ ಜ್ಞಾನವಿರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಉದ್ಯೋಗ ಸೃಷ್ಟಿಯ ಬಗ್ಗೆ ಮಾತನಾಡಿದ ಕಮಲ್, ಜನರಿಗೆ ಮೀನು ಹಿಡಿಯುವ ತರಬೇತಿಯನ್ನು ನೀಡಬೇಕು. ಅದರಿಂದ ಮಾತ್ರ ಅವರಿಗೆ ಸ್ವಾಭಿಮಾನದ ಜೀವನವನ್ನು ನಡೆಸಲು ಸಾಧ್ಯ ಎಂದು ಅಭಿಪ್ರಾಯಿಸಿದ್ದಾರೆ.

ಎಲ್ಲವನ್ನೂ ಒಬ್ಬನಿಂದಲೇ ಬದಲಾಯಿಸಲು ಸಾಧ್ಯವಾಗಿದ್ದರೆ ಅಥವಾ ಸರಕಾರವು ಪರಿವರ್ತನೆಯ ಹಾದಿಯಲ್ಲಿ ನಡೆದು ನನಗಿಂತಲೂ ಉತ್ತಮ ಕೆಲಸಗಳನ್ನು ಮಾಡಿದರೆ ಆಗ ನಾನು ನನ್ನ ಕೆಲಸ ಮುಗಿಯಿತು ಎಂದು ಭಾವಿಸುತ್ತೇನೆ. ಟ್ವೀಟ್ ಮಾಡುವುದರಲ್ಲಿ ಅರ್ಥವಿಲ್ಲ. ನಾನು ಟ್ವೀಟ್‌ಗಳ ಸುರಿಮಳೆಯನ್ನೇ ಮಾಡಿದ್ದೇನೆ. ಆದರೆ ಅದು ಅವರಿಗೆ ತಲುಪದಿದ್ದರೆ ಅದರಿಂದಾಗುವ ಲಾಭವೇನು ಎಂದು ಕಮಲ್ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X