Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಪದ್ಮಾವತ್’ ಹಿಂಸಾಚಾರಕ್ಕೆ ಬಿಜೆಪಿಯ...

‘ಪದ್ಮಾವತ್’ ಹಿಂಸಾಚಾರಕ್ಕೆ ಬಿಜೆಪಿಯ ಪಕೋಡ ರಾಜಕೀಯವೇ ಕಾರಣ: ಉವೈಸಿ

ವಾರ್ತಾಭಾರತಿವಾರ್ತಾಭಾರತಿ25 Jan 2018 6:56 PM IST
share
‘ಪದ್ಮಾವತ್’ ಹಿಂಸಾಚಾರಕ್ಕೆ ಬಿಜೆಪಿಯ ಪಕೋಡ ರಾಜಕೀಯವೇ ಕಾರಣ: ಉವೈಸಿ

ಹೈದರಾಬಾದ್, ಜ.25: ಸದ್ಯ ‘ಪದ್ಮಾವತ್’ ಸಿನೆಮಾವನ್ನು ವಿರೋಧಿಸಿ ಉತ್ತರದ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಬಿಜೆಪಿಯ ಪಕೋಡ ರಾಜಕೀಯವೇ ಕಾರಣವೆಂದು ಎಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಉವೈಸಿ ಆರೋಪಿಸಿದ್ದಾರೆ.

ಡಾವೋಸ್‌ನಲ್ಲಿ ಪ್ರಧಾನಿ ಮೋದಿ ನಾವು ಕೆಂಪು ಪಟ್ಟಿಯನ್ನು ತೆಗೆದು ಕೆಂಪು ಹಾಸನ್ನು ಹಾಸಿದ್ದೇವೆ ಎಂದು ಹೇಳುತ್ತಾರೆ. ಆದರೆ ಅವರು ಕೆಂಪು ಹಾಸನ್ನು ಹಾಸಿರುವುದು ಹಿಂಸಾಚಾರ ನಡೆಸುವವರಿಗೆ. ಈ ಗಲಭೆಯಲ್ಲಿ ಮಕ್ಕಳು ಗಾಯಗೊಂಡಿದ್ದಾರೆ, ಸಾರ್ವಜನಿಕ ಸೊತ್ತುಗಳಿಗೆ ಹಾನಿಯಾಗಿದೆ. ಇದೆಲ್ಲವೂ ಬಿಜೆಪಿಯ ಬೆಂಬಲದಿಂದಲೇ ನಡೆಯುತ್ತಿದೆ ಎಂದು ಉವೈಸಿ ಆರೋಪಿಸಿದ್ದಾರೆ.

ಪ್ರತಿಭಟನೆ ನಡೆಸುತ್ತಿರುವವರೆಲ್ಲರು ಉದ್ಯೋಗವಿಲ್ಲದೆ ಮಾಡಲು ಏನೂ ಕೆಲಸವಿಲ್ಲದ ಯುವಕರಾಗಿದ್ದಾರೆ ಎಂದು ಹೇಳಿರುವ ಉವೈಸಿ, ಪ್ರಧಾನಿ ಮೋದಿ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಯಾರ ಅಭಿಪ್ರಾಯವನ್ನೂ ಕೇಳದೆ, ಯಾವ ಸಾರ್ವಜನಿಕ ಚರ್ಚೆಯನ್ನು ನಡೆಸದೆ ಅವರು ತ್ರಿವಳಿ ತಲಾಕ್ ಅನ್ನು ನಿಷೇಧಿಸಲು ಮುಂದಾಗಿದ್ದಾರೆ. ಆದರೆ ಭಾವನೆಗಳನ್ನು ತೃಪ್ತಿಪಡಿಸುವ ಸಲುವಾಗಿ ಈ ಸಿನೆಮಾದ ಹೆಸರು ಬದಲಾವಣೆ ಮಾಡಲಾಗಿದೆ, ದೃಶ್ಯಗಳನ್ನು ತೆಗೆದುಹಾಕಲಾಗಿದೆ. ಯಾವ ರೀತಿಯ ರಾಜಕೀಯವನ್ನು ಇವರು ಮಾಡುತ್ತಿದ್ದಾರೆ. ಇಲ್ಲಿ ಯಾವುದೇ ಕಾನೂನಿನ ನಿಯಮವಿಲ್ಲ ಎಂದು ಉವೈಸಿ ಕಿಡಿಕಾರಿದ್ದಾರೆ.

ಆರಂಭದಲ್ಲಿ ಪದ್ಮಾವತಿ ಎಂದು ಹೆಸರಿಡಲಾಗಿದ್ದ ಪದ್ಮಾವತ್ ಸಿನೆಮಾದ ಚಿತ್ರೀಕರಣ ಆರಂಭವಾದಂದಿನಿಂದ ಈ ಬಗ್ಗೆ ಪ್ರತಿಭಟನೆಗಳು ನಡೆಯುತ್ತಲೇ ಇದೆ. ಚಿತ್ರೀಕರಣದ ವೇಳೆ ನಿರ್ದೇಶಕರಾದ ಸಂಜಯ್ ಲೀಲಾ ಬನ್ಸಾಲಿಯವರ ಮೇಲೆ ಕರ್ಣಿ ಸೇನೆಯ ಕಾರ್ಯಕರ್ತರು ಹಲ್ಲೆ ನಡೆಸಿದ ಪ್ರಕರಣವೂ ನಡೆದಿದೆ. ಸಿನೆಮಾದ ಟ್ರೈಲರ್ ಬಿಡುಗಡೆಯಾದ ನಂತರ ಪ್ರತಿಭಟನೆಯು ಮತ್ತಷ್ಟು ತೀವ್ರಗೊಂಡು ಇದೀಗ ಕರ್ಣಿ ಸೇನೆಯ ಕಾರ್ಯಕರ್ತರು ರಾಜಸ್ಥಾನ, ಹರ್ಯಾಣ, ಗುಜರಾತ್ ಹಾಗೂ ಮಹಾರಾಷ್ಟ್ರಗಳಲ್ಲಿ ಬೀದಿಗಿಳಿದು ಹಿಂಸಾಚಾರ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X