Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾತಿ ಮತ್ತು ಧರ್ಮಾಧರಿತ ರಾಜಕೀಯ...

ಜಾತಿ ಮತ್ತು ಧರ್ಮಾಧರಿತ ರಾಜಕೀಯ ಇರಬಾರದೆಂದು ನಾನು ಬಯಸುತ್ತೇನೆ: ಮೋಹನ್ ಭಾಗವತ್

ವಾರ್ತಾಭಾರತಿವಾರ್ತಾಭಾರತಿ25 Jan 2018 7:19 PM IST
share
ಜಾತಿ ಮತ್ತು ಧರ್ಮಾಧರಿತ ರಾಜಕೀಯ ಇರಬಾರದೆಂದು ನಾನು ಬಯಸುತ್ತೇನೆ: ಮೋಹನ್ ಭಾಗವತ್

ಮುಂಬೈ, ಜ.25: ಜಾತಿ ಮತ್ತು ಧರ್ಮಾಧರಿತ ರಾಜಕೀಯವು ಇರಬಾರದೆಂದು ನಾನು ಬಯಸುತ್ತೇನೆ. ಆದರೆ ಅದು ಸಾಧ್ಯವಿಲ್ಲ. ಎಲ್ಲಿಯವರೆಗೆ ಜನರು ಧರ್ಮವನ್ನು ಆಧರಿಸಿ ಮತ ಹಾಕುತ್ತಾರೆಯೋ ಅಲ್ಲಿಯವರೆಗೆ ಇದು ಹೀಗೆಯೇ ಮುಂದುವರಿಯಲಿದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಿಸಿದ್ದಾರೆ.

ಎಲ್ಲಾ ಸರಕಾರಗಳು ಜನರ ಒತ್ತಡಕ್ಕೆ ಮಣಿಯುವುದು ಅನಿವಾರ್ಯ. ಸರಕಾರಗಳು ಕೇವಲ ಒಂದು ಹಂತದವರೆಗೆ ಮಾತ್ರ ಸಮಾಜವನ್ನು ಬದಲಾಯಿಸಬಹುದು. ಸಮಾಜವೇ ಮೊದಲು ಬದಲಾಗಬೇಕು. ಉದಾಹರಣೆಗೆ ಪ್ರಧಾನಿಯವರು ಅಭಿವೃದ್ಧಿ ಬಗ್ಗೆ ಮಾತನಾಡಿದರೆ ಅದಕ್ಕೆ ಸಮಾಜದಿಂದಲೇ ವಿರೋಧ ವ್ಯಕ್ತವಾಗುತ್ತದೆ ಎಂದು ಬೋಂಬೆ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ ಮಾತನಾಡಿದ ಭಾಗವತ್ ತಿಳಿಸಿದ್ದಾರೆ. ಆದರೆ ಭಾರತದಲ್ಲಿ ಪ್ರಜ್ಞಾವಂತ ಸಮಾಜವಿದ್ದು ತನ್ನ ತಪ್ಪಿನಿಂದ ಬೇಗ ಕಲಿತುಕೊಳ್ಳುತ್ತದೆ. ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿರುವ ಚುನಾವಣೆಗಳ ಫಲಿತಾಂಶದಿಂದ ಸಮಾಜವು ಸರಿಯಾದ ಆಯ್ಕೆಯನ್ನು ಮಾಡಲು ಕಲಿತಿದೆ ಎಂಬುದು ತಿಳಿಯುತ್ತದೆ ಎಂದು ಆರೆಸ್ಸೆಸ್ ಮುಖ್ಯಸ್ಥರು ತಿಳಿಸಿದ್ದಾರೆ.

ಎಲ್ಲರಿಗೂ ಧಾರ್ಮಿಕ ಹಕ್ಕಿದೆ. ಯಾವ ಧರ್ಮವನ್ನು ಅನುಸರಿಸಬೇಕು ಎಂಬುದು ಅವರವರ ವೈಯಕ್ತಿಕ ಆಯ್ಕೆಯಾಗಿದೆ ಮತ್ತು ಎಲ್ಲಾ ಭಾರತೀಯರಿಗೂ ಒಂದೇ ರೀತಿಯ ಸಿದ್ಧಾಂತವಿದೆ ಎಂದು ಭಾಗವತ್ ವಿವರಿಸಿದ್ದಾರೆ.

ಉದ್ಯಮಪತಿಗಳು ಬಹುಸಂಖ್ಯೆಯಲ್ಲಿ ಹಾಜರಿದ್ದ ಸಭೆಯಲ್ಲಿ ಮಾತನಾಡಿದ ಭಾಗವತ್, ಖಾಸಗಿ ಕ್ಷೇತ್ರವು ರಾಜಕೀಯ ಹಸ್ತಕ್ಷೇಪದಿಂದ ಮುಕ್ತವಾಗಿರಬೇಕು ಮತ್ತು ಇತರ ಎಲ್ಲಾ ಆರ್ಥಿಕ ಮಾದರಿಗಳು ಸರ್ವಾಧಿಕಾರಿ ಪ್ರವೃತ್ತಿಯನ್ನು ಹೊಂದಿದೆ ಎಂದು ಹೇಳಿದರು. ಜಗತ್ತಿಗೆ ಸೈದ್ಧಾಂತಿಕವಾಗಿ ನಡೆದುಕೊಳ್ಳುವ ಪಾಠ ಮಾಡುವ ಮೂಲಕ ಜಗತ್ತಿನಲ್ಲಿ ಭಾರತವು ತನ್ನ ಕಳೆದುಹೋದ ಸ್ಥಾನವನ್ನು ಮರುಗಳಿಸಬೇಕು ಎಂದವರು ತಿಳಿಸಿದ್ದಾರೆ.

ಭಾರತೀಯ ಸಮಾಜದಲ್ಲಿ ವೈಭವದ ಜೀವನಶೈಲಿಗೆ ಅವಕಾಶವಿಲ್ಲ. ಉದ್ಯಮದಲ್ಲಿ ಬಂದ ಲಾಭವನ್ನು ನಾವು ಉತ್ತಮ ಜೀವನಶೈಲಿ ನಡೆಸಲು ಬಳಸುತ್ತೇವೆ. ಆದರೆ ಉದ್ಯಮದಿಂದ ಬಂದ ಲಾಭವನ್ನು ಸಮಾಜದ ಏಳಿಗೆಗಾಗಿ ಬಳಸಬೇಕೆಂದು ಭಾರತೀಯ ಸಂಸ್ಕೃತಿ ಸೂಚಿಸುತ್ತದೆ ಎಂದು ಭಾಗವತ್ ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X