Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಮೇಕ್ ಇನ್ ಇಂಡಿಯಾ’ವನ್ನು ಉದ್ಯಮ ರಕ್ಷಣಾ...

‘ಮೇಕ್ ಇನ್ ಇಂಡಿಯಾ’ವನ್ನು ಉದ್ಯಮ ರಕ್ಷಣಾ ಕ್ರಮ ಎನ್ನುವಂತಿಲ್ಲ: ಕೇಂದ್ರ ಸಚಿವ ಗೋಯಲ್

ವಾರ್ತಾಭಾರತಿವಾರ್ತಾಭಾರತಿ25 Jan 2018 8:41 PM IST
share
‘ಮೇಕ್ ಇನ್ ಇಂಡಿಯಾ’ವನ್ನು ಉದ್ಯಮ ರಕ್ಷಣಾ ಕ್ರಮ ಎನ್ನುವಂತಿಲ್ಲ: ಕೇಂದ್ರ ಸಚಿವ ಗೋಯಲ್

ಡಾವೋಸ್,ಜ.25: ಅಮೆರಿಕ ಮತ್ತು ಇತರ ಕೆಲವು ದೇಶಗಳು ಜಾರಿಗೊಳಿಸಿರುವ ಉದ್ಯಮ ರಕ್ಷಣಾ ಕ್ರಮಗಳ ಬಗ್ಗೆ ಜಾಗತಿಕ ನಾಯಕರು ಕಳವಳಗಳನ್ನು ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು, ‘ಮೇಕ್ ಇನ್ ಇಂಡಿಯಾ’ವನ್ನು ಉದ್ಯಮ ರಕ್ಷಣಾ ಕ್ರಮ ಎನ್ನುವಂತಿಲ್ಲ ಮತ್ತು ಭಾರತವು ತನ್ನ ಸಮೃದ್ಧಿಯನ್ನು ವಿಶ್ವದ ಪ್ರತಿಯೊಬ್ಬರೊಂದಿಗೆ ಹಂಚಿಕೊಳ್ಳಲು ಬಯಸಿದೆ ಎಂದು ಹೇಳಿದ್ದಾರೆ.

ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಆಗಮಿಸಿರುವ ಗೋಯಲ್, ಭಿನ್ನಗೊಂಡ ಜಗತ್ತಿಗೆ ಸಂಬಂಧಿಸಿದ ಪ್ರಚಲಿತ ಕಳವಳಗಳ ಸಂದರ್ಭದಲ್ಲಿ ಭಾರತವು ತನ್ನನ್ನು ಜಾಗತಿಕ ಮುತ್ಸದ್ದಿಯನ್ನಾಗಿ ಗುರುತಿಸಿಕೊಂಡಿದೆ ಎಂದು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

ಭಾರತವು ತನ್ನ ಸಮೃದ್ಧಿಯನ್ನು ಇತರ ಜಗತ್ತಿನೊಂದಿಗೆ ಹಂಚಿಕೊಳ್ಳುವ ನೀತಿಯನ್ನು ಸದಾ ನಂಬಿಕೊಂಡು ಬಂದಿದೆ. ‘ವಸುಧೈವ ಕುಟುಂಬಕಂ’ ಎನ್ನುವುದು ಅನಾದಿಕಾಲದಿಂದಲೂ ನಮ್ಮ ಸಿದ್ಧಾಂತವಾಗಿದೆ ಎಂದ ಅವರು, ಇತರ ದೇಶಗಳಿಗೆ ಹೋಲಿಸಿದರೆ ಭಾರತವು ಸ್ಪರ್ಧಾತ್ಮಕ ಪ್ರಯೋಜನಗಳನ್ನು ಹೊಂದಿದೆ. ಉದ್ಯಮವನ್ನು ನಡೆಸಲು ಅದು ಅತ್ಯಂತ ಆಕರ್ಷಕ ತಾಣವಾಗಿದೆ ಮತ್ತು ಬಹುದೊಡ್ಡ ಮಾರುಕಟ್ಟೆಯಾಗಿದೆ. ‘ಮೇಕ್ ಇನ್ ಇಂಡಿಯಾ’ದ ಬಗ್ಗೆ ಮಾತನಾಡುವಾಗ ನಾವು ಇದನ್ನೇ ಹೇಳುತ್ತೇವೆ. ಆದ್ದರಿಂದ ಈ ಕಾರ್ಯಕ್ರಮವು ಉದ್ಯಮ ರಕ್ಷಣಾ ಕ್ರಮವಲ್ಲ. ಬದಲಿಗೆ ಅದು ವಿಶ್ವದ ಎಲ್ಲ ಜನರಿಗೆ ಸೇವೆ ಸಲ್ಲಿಸಲು ಅತ್ಯುತ್ತಮ ಪ್ರತಿಭೆ, ಬೆಲೆ ಮತ್ತು ತಂತ್ರಜ್ಞಾನವನ್ನು ಪಡೆದುಕೊಳ್ಳುವ ಅವಕಾಶವಾಗಿದೆ ಎಂದು ಹೇಳಿದರು.

ಸಾಗರೋತ್ತರ ಉದ್ಯೋಗಗಳನ್ನು ಮತ್ತು ಲಾಭಗಳನ್ನು ಅಮೆರಿಕಕ್ಕೆ ವಾಪಸ್ ತರುವಂತೆ ಉನ್ನತ ಕಂಪನಿಗಳಿಗೆ ಸೂಚಿಸಿರುವ ‘ಅಮೆರಿಕಾ ಫಸ್ಟ್’ ಕಾರ್ಯಕ್ರಮ ಕುರಿತು ಪ್ರಶ್ನೆಗೆ ಉತ್ತರಿಸಿದ ಗೋಯಲ್, ಭಾರತವು ಹಾಗೆ ಎಂದೂ ಮಾಡಿಲ್ಲ ಮತ್ತು ಪ್ರಗತಿ ಹಾಗೂ ಸಮೃದ್ಧಿಯನ್ನು ಎಲ್ಲ ಪಾಲುದಾರರೊಂದಿಗೆ ಹಂಚಿಕೊಳ್ಳುವುದರಲ್ಲಿ ನಂಬಿಕೆಯನ್ನು ಹೊಂದಿದೆ. ವಿಶ್ವವ್ಯಾಪಿ ಆದಾಯದ ಮೇಲೆ ನಾವು ತೆರಿಗೆಯನ್ನು ವಿಧಿಸಿಲ್ಲ. ವಿಶ್ವದ ಹಲವು ರಾಷ್ಟ್ರಗಳು ಜಾರಿಗೊಳಿಸಿರುವ ಬಂಡವಾಳ ಹರಿವಿನ ನಿರ್ಬಂಧಗಳು ನಮ್ಮಲ್ಲಿಲ್ಲ. ಈ ಅರ್ಥದಲ್ಲಿ ನಮ್ಮದು ಅತ್ಯಂತ ಉದಾರ ಮತ್ತು ಹೂಡಿಕೆಗೆ ಅತ್ಯಂತ ಆಕರ್ಷಕ ಆರ್ಥಿಕತೆಯಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X