Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಪದ್ಮಾವತ್’ ಬಿಡುಗಡೆ: ರಾಷ್ಟ್ರಾದ್ಯಂತ...

‘ಪದ್ಮಾವತ್’ ಬಿಡುಗಡೆ: ರಾಷ್ಟ್ರಾದ್ಯಂತ ತೀವ್ರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 Jan 2018 9:27 PM IST
share
‘ಪದ್ಮಾವತ್’ ಬಿಡುಗಡೆ: ರಾಷ್ಟ್ರಾದ್ಯಂತ ತೀವ್ರ ಪ್ರತಿಭಟನೆ

ಹೊಸದಿಲ್ಲಿ, ಜ. 25: ಸಂಜಯ್ ಲೀಲಾ ಬನ್ಸಾಲಿ ಅವರ ವಿವಾದಾತ್ಮಕ ಚಲನಚಿತ್ರ ‘ಪದ್ಮಾವತ್’ ಗುರುವಾರ ಬಿಡುಗಡೆಗೊಂಡಿದ್ದು, ಪ್ರಮುಖ ನಾಲ್ಕು ರಾಜ್ಯಗಳು ಸೇರಿದಂತೆ ರಾಷ್ಟ್ರಾದ್ಯಂತ ಪ್ರತಿಭಟನೆ ಹಾಗೂ ಹಿಂಸಾಚಾರ ಮುಂದುವರಿದಿದೆ.

ಹಲವು ರಾಜ್ಯಗಳಲ್ಲಿ ಪೊಲೀಸರು ಕಠಿಣ ಭದ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ರಾಜಸ್ಥಾನ ಹಾಗೂ ಉತ್ತರಾಖಂಡದಲ್ಲೂ ಗುರುವಾರ ಪ್ರತಿಭಟನೆ ನಡೆಯಿತು. ಜೈಪುರದಲ್ಲಿ ಕರ್ಣಿ ಸೇನೆ ಬೈಕ್ ರ್ಯಾಲಿ ನಡೆಸಿತು. ಪ್ರತಿಭಟನಕಾರರು ಆತ್ಮಾಹುತಿಗೆ ಪ್ರಯತ್ನಿಸಿದರು. ಉತ್ತಾರಾಖಂಡದ ಋಷಿಕೇಶದ ಸಿನೆಮಾ ಮಂದಿರದ ಹೊರಗೆ ಪ್ರತಿಭಟನಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ಸಂಭವಿಸಿದೆ.

 ಮುಝಾಫರನಗರ್, ಆಗ್ರಾ ಹಾಗೂ ಮುಘಲ್‌ಸರಾಯ್ ಸೇರಿದಂತೆ ಉತ್ತರಪ್ರದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆದಿದೆ. ಶಾಂತಿಯುತ ಸಿನೆಮಾ ಪ್ರದರ್ಶನಕ್ಕೆ ಭದ್ರತೆ ಒದಗಿಸಿ ಹಾಗೂ ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಉನ್ನತ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶಿಸಿದ್ದರು.

6 ರಾಜ್ಯಗಳಲ್ಲಿ ಹಿಂಸಾಚಾರ ಬುಧವಾರವೇ ಆರಂಭವಾಗಿದ್ದು, ಇಂದು ಕೂಡ ಮುಂದುವರಿದಿದೆ. ಉತ್ತರಪ್ರದೇಶದ ಮಥುರಾದಲ್ಲಿ ಪ್ರಯಾಣಿಕರ ರೈಲು ಸಂಚಾರ ರದ್ದುಗೊಳಿಸಲಾಗಿದೆ. ರಾಜಸ್ಥಾನ ಹಾಗೂ ಹರ್ಯಾಣದಲ್ಲಿರುವ ದಿಲ್ಲಿ-ಜೈಪುರ ಹೆದ್ದಾರಿ ಹಾಗೂ ಇತರ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಬಸ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಉತ್ತರಪ್ರದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನಕಾರರು ಅಂಗಡಿ ಹಾಗೂ ಮಾರುಕಟ್ಟೆಗಳನ್ನು ಬಲವಂತವಾಗಿ ಬಂದ್ ಮಾಡಿದರು. ಎಟವಾದಲ್ಲಿ ಗುಂಪೊಂದರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು.

ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಹಾಗೂ ಗೋವಾದಲ್ಲಿ ಪದ್ಮಾವತ್ ಚಲನಚಿತ್ರವನ್ನು ಪ್ರದಶಿಸುವುದಿಲ್ಲ. ಅಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಲ್ಲ ಎಂದು ದೇಶದ ಶೇ. 75 ಮಲ್ಟಿಫ್ಲೆಕ್ಸ್‌ಗಳನ್ನು ಪ್ರತಿನಿಧಿಸುತ್ತಿರುವ ಮಲ್ಟಿಫ್ಲೆಕ್ಸ್ ಅಸೋಶಿಯೇಶನ್ ಆಫ್ ಇಂಡಿಯಾ ಹೇಳಿದೆ.

ನ್ಯಾಯಾಂಗ ನಿಂದನೆ ದೂರು ದಾಖಲು

ಹೊಸದಿಲ್ಲಿ: ‘ಪದ್ಮಾವತ್’ ಚಲನಚಿತ್ರ ಬಿಡುಗಡೆಗೆ ಅವಕಾಶ ನೀಡುವ ಆದೇಶ ಉಲ್ಲಂಘಿಸಿದ ನಾಲ್ಕು ರಾಜ್ಯಗಳು ಹಾಗೂ ಶ್ರೀ ಕರ್ಣಿ ಸೇನೆ ವಿರುದ್ಧ ನ್ಯಾಯಾಲಯ ನಿಂದನೆಯ ಎರಡು ಪ್ರತ್ಯೇಕ ದೂರುಗಳನ್ನು ಸರ್ವೋಚ್ಚ ನ್ಯಾಯಾಲಯ ಜನವರಿ 29ರಂದು ವಿಚಾರಣೆ ನಡೆಸಲಿದೆ. ಚಲನಚಿತ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಗುಂಪನ್ನು ನಿಯಂತ್ರಿಸಲು ವಿಫಲವಾದ ರಾಜಸ್ತಾನ, ಹರ್ಯಾಣ, ಗುಜರಾತ್, ಮಧ್ಯಪ್ರದೇಶ ಸರಕಾರದ ವಿರುದ್ಧ ಕಾಂಗ್ರೆಸ್ ಬೆಂಬಲಿಗ ತಹ್ಸೀನ್ ಪೂನಾವಾಲ ಸರ್ವೋಚ್ಚ ನ್ಯಾಯಾಲಯದಲ್ಲಿ ನ್ಯಾಯಾಂಗ ನಿಂದನೆ ದೂರು ದಾಖಲಿಸಿದ್ದರು. ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಕರ್ಣಿ ಸೇನಾ ಹಾಗೂ ಅದರ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆಯ ಪ್ರತ್ಯೇಕ ದೂರನ್ನು ನ್ಯಾಯವಾದಿಯೊಬ್ಬರು ದಾಖಲಿಸಿದ್ದಾರೆ.

‘ಘೂಮರ್’ ಹಾಡಿಗೆ ನೃತ್ಯ ಮಾಡಬೇಡಿ

ಉದಯ್‌ಪುರ: ಗಣರಾಜ್ಯೋತ್ಸವ ಸಂಭ್ರಮಾಚರಣೆ ಸಂದರ್ಭ ‘ಪದ್ಮಾವತ್’ ಚಲನಚಿತ್ರದ ‘ಘೂಮರ್’ ಹಾಡಿಗೆ ಸರಕಾರಿ ಹಾಗೂ ಖಾಸಗಿ ಶಾಲಾ ವಿದ್ಯಾರ್ಥಿಗಳು ನೃತ್ಯ ಮಾಡಬಾರದು ಎಂದು ಉದಯ್‌ಪುರ ಎಡಿಎಂ ಎಸ್.ಸಿ. ಶರ್ಮಾ ಆದೇಶ ಹೊರಡಿಸಿದ್ದಾರೆ.

ಸಿನೆಮಾ ಮಂದಿರ ಮಾಲಕನಿಗೆ ಥಳಿತ

ಲಕ್ನೊ: ಉತ್ತರಪ್ರದೇಶದಲ್ಲಿ ಪದ್ಮಾವತ್ ಚಲನಚಿತ್ರ ಪ್ರದರ್ಶಿಸಿದ ಎಸ್‌ಸಿಎಂ ಮಲ್ಟಿಫ್ಲೆಕ್ಸ್‌ನ ಮಾಲಕ ಸಂಜಯ್ ಅಗರ್‌ವಾಲ್‌ಗೆ ಪ್ರತಿಭಟನಕಾರರು ಥಳಿಸಿದ್ದಾರೆ. ಅವರ ಬಿಎಂಡಬ್ಲು ಕಾರಿಗೆ ಹಾನಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 ದೀಪಿಕಾ ಪಡುಕೋಣೆ ಕಿವಿ, ಮೂಗು ಕತ್ತರಿಸಿದವರಿಗೆ 1 ಕೋ. ರೂ.

ಮುಂಬೈ: ದೀಪಿಕಾ ಪಡುಕೋಣೆ ಅವರ ಕಿವಿ ಹಾಗೂ ಮೂಗು ಕತ್ತರಿಸುವ ವ್ಯಕ್ತಿಗೆ ಕ್ಷತ್ರೀಯ ಸಮುದಾಯ 1. ಕೋ. ರೂ. ಬಹುಮಾನ ನೀಡಲಿದೆ ಎಂದು ಕ್ಷತ್ರೀಯ ಮಹಾಸಭಾದ ಗಜೇಂದ್ರ ಸಿಂಗ್ ಹೇಳಿದ್ದಾರೆ.

ಭಾವನೆಗಳಿಗೆ ಧಕ್ಕೆ: ಆರ್‌ಎಸ್‌ಎಸ್

 ಜೈಪುರ: ದೃಢೀಕೃತವಲ್ಲದ ಹಾಗೂ ವಿವಾದಾತ್ಮಕ ಮಾಹಿತಿಯ ಆಧಾರದಲ್ಲಿ ವೀರ ವನಿತೆಯ ನಡವಳಿಕೆ ಹಾಗೂ ಅವರ ಬದುಕನ್ನು ಚಿತ್ರಿಸುವ ಮೂಲಕ ಸಂಜಯ್ ಲೀಲಾ ಬನ್ಸಾಲಿ ಅವರು ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಿದ್ದಾರೆ. ಚಲನಚಿತ್ರ ಸಮಾಜಿಕ ಸಾಮರಸ್ಯ ಹಾಗೂ ಭಾತೃತ್ವದ ಸಂದೇಶ ನೀಡಬೇಕು ಎಂದು ಎಂದು ಆರ್‌ಎಸ್‌ಎಸ್‌ನ ವಾಯುವ್ಯ ವಲಯದ ಸಂಘಚಾಲಕ್ ಭಗವತಿ ಪ್ರಕಾಶ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X