Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತದ್ರೂಪಿ ತಂತ್ರಜ್ಞಾನದ ಮೂಲಕ ಮಂಗಗಳ...

ತದ್ರೂಪಿ ತಂತ್ರಜ್ಞಾನದ ಮೂಲಕ ಮಂಗಗಳ ಸೃಷ್ಟಿ

ಚೀನಾ ವಿಜ್ಞಾನಿಗಳ ಸಾಧನೆ

ವಾರ್ತಾಭಾರತಿವಾರ್ತಾಭಾರತಿ25 Jan 2018 10:56 PM IST
share
ತದ್ರೂಪಿ ತಂತ್ರಜ್ಞಾನದ ಮೂಲಕ ಮಂಗಗಳ ಸೃಷ್ಟಿ

ಬೀಜಿಂಗ್, ಜ. 25: ತದ್ರೂಪಿ ಸೃಷ್ಟಿ ತಂತ್ರಜ್ಞಾನದ ಮೂಲಕ ಚೀನಾದ ವೈದ್ಯರು ಮೊದಲ ಬಾರಿಗೆ ಮಂಗಗಳನ್ನು ಸೃಷ್ಟಿಸಿದ್ದಾರೆ. ಈ ಬೆಳವಣಿಗೆಯು ಮಾನವ ರೋಗಗಳ ಕುರಿತ ವೈದ್ಯಕೀಯ ಸಂಶೋಧನೆಯಲ್ಲಿ ಮಹತ್ವದ ಪಾತ್ರವನ್ನು ವಹಿಸಬಹುದು ಎಂಬುದಾಗಿ ಭಾವಿಸಲಾಗಿದೆ.

ಇದೇ ತಂತ್ರಜ್ಞಾನವನ್ನು ಬಳಸಿ 20 ವರ್ಷಗಳ ಹಿಂದೆ ‘ಡಾಲಿ’ ಎಂಬ ಕುರಿಯನ್ನು ಸೃಷ್ಟಿಸಲಾಗಿತ್ತು.

ಎರಡು ಉದ್ದ ಬಾಲದ ಮಕಾಕ್ ಮಂಗಗಳು ಶಾಂಘೈಯಲ್ಲಿರುವ ಚೈನೀಸ್ ಅಕಾಡಮಿ ಆಫ್ ಸಯನ್ಸಸ್ (ಸಿಎಎಸ್) ಇನ್‌ಸ್ಟಿಟ್ಯೂಟ್ ಆಫ್ ನ್ಯೂರೊಸಯನ್ಸ್‌ನಲ್ಲಿ ಜನಿಸಿವೆ. ಅವುಗಳಿಗೆ ಹುವ ಹುವ ಮತ್ತು ಝಾಂಗ್ ಝಾಂಗ್ ಎಂಬ ಹೆಸರುಗಳನ್ನು ಇಡಲಾಗಿದೆ.

‘ಸೊಮಾಟಿಕ್ ಸೆಲ್ ನ್ಯೂಕ್ಲಿಯರ್ ಟ್ರಾನ್ಸ್‌ಫರ್’ ಎಂಬ ತದ್ರೂಪಿ ತಂತ್ರಜ್ಞಾನಕ್ಕೆ ಸಂಬಂಧಿಸಿ ಹಲವಾರು ವರ್ಷಗಳ ಸಂಶೋಧನೆಯ ಫಲವಾಗಿ ಈ ಮಂಗಗಳ ಸೃಷ್ಟಿಯಾಗಿವೆ.

ಈವರೆಗೆ ಈ ತಂತ್ರಜ್ಞಾನವನ್ನು ಬಳಸಿ ನಾಯಿಗಳು, ಹಂದಿಗಳು ಮತ್ತು ಬೆಕ್ಕುಗಳು ಸೇರಿದಂತೆ 20ಕ್ಕೂ ಅಧಿಕ ಪ್ರಾಣಿ ಪ್ರಭೇದಗಳ ತದ್ರೂಪಿಗಳನ್ನು ಸೃಷ್ಟಿಸಲಾಗಿದೆ. ಆದರೆ ಮಂಗಗಳ ತದ್ರೂಪಿ ಸೃಷ್ಟಿ ಕಷ್ಟವಾಗಿತ್ತು.

ಮಾನವರ ತದ್ರೂಪಿ ಸೃಷ್ಟಿಯೂ ಸಾಧ್ಯ

ಮಕಾಕ್ ಮಂಗಗಳ ತದ್ರೂಪಿ ಸೃಷ್ಟಿಯು ಹಲವು ನೈತಿಕ ಪ್ರಶ್ನೆಗಳನ್ನೂ ಎತ್ತಿದೆ. ತದ್ರೂಪಿ ಮಾನವರ ಸೃಷ್ಟಿಗೆ ಇನ್ನು ಎಷ್ಟು ಸಮಯ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.

ಇದೇ ತಂತ್ರಜ್ಞಾನವನ್ನು ಬಳಸಿ ಮಾನವರನ್ನೂ ಸೃಷ್ಟಿಸಬಹುದಾಗಿದೆ ಎಂದು ಸಿಎಎಸ್ ಇನ್‌ಸ್ಟಿಟ್ಯೂಟ್ ಆಫ್ ನ್ಯೂರೊಸಯನ್ಸ್‌ನ ನಿರ್ದೇಶಕ ಮುಮಿಂಗ್ ಪೂ ಹೇಳುತ್ತಾರೆ. ಆದರೆ, ತನ್ನ ತಂಡದ ಆದ್ಯತೆ ವೈದ್ಯಕೀಯ ಉದ್ದೇಶಗಳಿಗಾಗಿ ತದ್ರೂಪಿಗಳನ್ನು ಸೃಷ್ಟಿಸುವುದಾಗಿದೆ ಎಂದು ಅವರು ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದರು.

 ಒಂದು ದಿನ ಈ ತಂತ್ರಜ್ಞಾನವನ್ನು ಬಳಸಿ ಒಂದೇ ವಂಶವಾಹಿಯ ಮಂಗಗಳನ್ನು ಬೃಹತ್ ಪ್ರಮಾಣದಲ್ಲಿ ಸೃಷ್ಟಿಸಬಹುದಾಗಿದೆ. ಆ ಮಂಗಗಳನ್ನು ವೈದ್ಯಕೀಯ ಸಂಶೋಧನೆಗಳಲ್ಲಿ ಬಳಸಬಹುದಾಗಿದೆ ಹಾಗೂ ಆ ಮೂಲಕ ಕಾಡಿನಿಂದ ಮಂಗಗಳನ್ನು ತರುವುದನ್ನು ನಿಲ್ಲಿಸಬಹುದಾಗಿದೆ ಎಂದು ಪೂ ಹೇಳುತ್ತಾರೆ.

‘‘ಅಮೆರಿಕವೊಂದರಲ್ಲೇ ಔಷಧ ತಯಾರಿಕಾ ಕಂಪೆನಿಗಳು ವರ್ಷಕ್ಕೆ 30,000ದಿಂದ 40,000 ಮಂಗಗಳನ್ನು ಆಮದು ಮಾಡಿಕೊಳ್ಳುತ್ತಿವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X