Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಧಾನಿ 'ಪಕೋಡಾ' ಹೇಳಿಕೆಗೆ ಖಂಡನೆ :...

ಪ್ರಧಾನಿ 'ಪಕೋಡಾ' ಹೇಳಿಕೆಗೆ ಖಂಡನೆ : ಬಿಜೆಪಿ ಕಚೇರಿ ಮುಂಭಾಗ ಪಕೋಡಾ ಮಾರಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 Jan 2018 6:01 PM IST
share
ಪ್ರಧಾನಿ ಪಕೋಡಾ ಹೇಳಿಕೆಗೆ ಖಂಡನೆ : ಬಿಜೆಪಿ ಕಚೇರಿ ಮುಂಭಾಗ ಪಕೋಡಾ ಮಾರಿ ಪ್ರತಿಭಟನೆ

ಬೆಂಗಳೂರು, ಜ.27: ಉದ್ಯೋಗ ಕೇಳಿದರೆ ‘ಪಕೋಡಾ ಮಾರುವುದು ಉದ್ಯೋಗವಲ್ಲವೆ’ ಎಂದಿರುವ ನರೇಂದ್ರ ಮೋದಿಯ ಹೇಳಿಕೆಯನ್ನು ಖಂಡಿಸಿ ಉದ್ಯೋಗಕ್ಕಾಗಿ ಯುವ ಜನತೆ ಸಂಘಟನೆಯ ಕಾರ್ಯಕರ್ತರು ನಗರದ ಮಲ್ಲೇಶ್ವರಂ ಬಿಜೆಪಿ ಕಚೇರಿ ಮುಂಭಾಗ ಪಕೋಡ ಮಾರುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿದರು.

ಉದ್ಯೋಗ ಕೊಡುತ್ತೇವೆ ಎಂದಿದ್ದ ಪ್ರಧಾನಿ ಮೋದಿ ಪಕೋಡಾ ಮಾರುವಂತೆ ಹೇಳಿದ್ದಾರೆ. ಆದರೆ, ಪಕೋಡಾ ಮಾರುವ ಉದ್ಯೋಗ ಸೃಷ್ಟಿ ಮಾಡಿದ್ದು ನರೇಂದ್ರ ಮೋದಿಯಲ್ಲ, ಉದ್ಯೋಗ ಸೃಷ್ಟಿಸಿ ಎಂದರೆ ಪಕೋಡಾ ಮಾರಾಟ ಮಾಡಿ ಎನ್ನುವುದಲ್ಲ. ನಿರ್ದಿಷ್ಟವಾದ ಉದ್ಯೋಗ ಪಡೆಯುವುದಕ್ಕಾಗಿ ಹತ್ತಾರು ವರ್ಷ ವಿದ್ಯಾಭ್ಯಾಸ ಮಾಡಿ, ಲಕ್ಷಾಂತರ ರೂ.ಖರ್ಚು ಮಾಡಿರುವ ವಿದ್ಯಾರ್ಥಿಗಳಿಗೆ ಪ್ರಧಾನಿ ಬಿಟ್ಟಿ ಸಲಹೆ ನೀಡಿದ್ದಾರೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಉದ್ಯೋಗಕ್ಕಾಗಿ ಯುವಜನತೆಯ ಸಂಚಾಲಕ ಮುತ್ತುರಾಜ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಪಕೋಡಾ ವೃತ್ತಿಯ ಘನತೆಯ ಕುರಿತು ಮಾತನಾಡಿಲ್ಲ. ಬದಲಿಗೆ ಪಕೋಡಾ ಮಾರುವವರ ಬದುಕನ್ನು ಆಡಿಕೊಂಡಿದ್ದಾರೆ. ಚುನಾವಣೆ ಭಾಷಣದಲ್ಲಿ ಪ್ರತಿಭೆಗೆ ತಕ್ಕ ಉದ್ಯೋಗ ಸಿಗಬೇಕೊ, ಬೇಡವೊ ಅಂದವರು, ಈಗ ಪಕೋಡಾ ಮಾರಿ 200 ರೂ. ಗಳಿಸುವುದು ಉದ್ಯೋಗವಲ್ಲವೆ ಎಂದು ಪ್ರಶ್ನಿಸುವ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕೃಷಿ ಮಾಡುವುದು ಉದ್ಯೋಗ ಅಲ್ಲವೆ ಎಂದು ಕೇಳುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಆಡಳಿತದಲ್ಲಿ ರೈತ ವಿರೋಧಿ ನೀತಿಗಳನ್ನೆ ಜಾರಿ ಮಾಡಿದ್ದಾರೆ. ಬಿಜೆಪಿ ದೇಶದ ಸಾಮಾನ್ಯ ಜನರನ್ನು ಕುರಿಗಳಿಗಿಂತಲೂ ಕಡೆಯಾಗಿ ಕಾಣುತ್ತಿರುವುದು ಪ್ರಧಾನಿ ಮೋದಿಯ ಹೇಳಿಕೆಗಳಿಂದ ವ್ಯಕ್ತವಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಫೆ.4ಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ವೇಳೆ ಕನಿಷ್ಠ ಒಂದು ಗಂಟೆಯಾದರು ಯುವ ಜನತೆಯೊಂದಿಗೆ ಸಂವಾದ ನಡೆಸಲು ಹಾಗೂ ಯುವ ಪ್ರಣಾಳಿಕೆಯ ಕರಡನ್ನು ಕೊಡಲು ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನಾತ್ಮಕವಾಗಿ ನಡೆಸುತ್ತಿರುವ ಪಕೋಡಾ ಸ್ಟಾಲ್ ಮುಂದುವರೆಯಲಿದೆ.
-ಮುತ್ತುರಾಜ್ ಸಂಚಾಲಕ, ಉದ್ಯೋಗಕ್ಕಾಗಿ ಯುವಜನತೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X