Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. “ನನ್ನ ಆರೋಗ್ಯ - ನನ್ನ ಹಕ್ಕು”...

“ನನ್ನ ಆರೋಗ್ಯ - ನನ್ನ ಹಕ್ಕು” ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ27 Jan 2018 11:28 PM IST
share
“ನನ್ನ ಆರೋಗ್ಯ - ನನ್ನ ಹಕ್ಕು” ಕಾರ್ಯಾಗಾರ

ಮಡಿಕೇರಿ,ಜ.27: ಹೆಚ್‍ಐವಿ ಮತ್ತು ಏಡ್ಸ್ ಬಾಧಿತರಿಗೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಸೇರ್ಪಡೆಗೊಳಿಸುವ ಆಶಯದೊಂದಿಗೆ 2017ರ ಏಪ್ರಿಲ್ 20 ರಂದು ನೂತನ ಕಾನೂನು ಜಾರಿಗೆ ಬಂದಿದ್ದು, ಇದರ ಸಮರ್ಪಕ ಅನುಷ್ಠಾನ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೊಡ್ಡ ಹೊಣೆಗಾರಿಕೆಯಾಗಿದೆ ಎಂದು ನಗರದ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪವನೇಶ್ ಡಿ. ಅಭಿಪ್ರಾಯಪಟ್ಟಿದ್ದಾರೆ.

ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿತ ಓಡಿಪಿ ಸಂಸ್ಥೆಯ ಸ್ನೇಹಾಶ್ರಯ ಸಮಿತಿಯ ದಶಮಾನೋತ್ಸವ ಮತ್ತು ‘ನನ್ನ ಆರೋಗ್ಯ -ನನ್ನ ಹಕ್ಕು, ಕಳಂಕ ತಾರತಮ್ಯ ತಡೆಯೋಣ’ ಎನ್ನುವ ವಿಷಯದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹೆಚ್‍ಐವಿ ಮತ್ತು ಏಡ್ಸ್ ಬಾಧಿತರ ಉತ್ತಮ ಬದುಕಿಗಾಗಿ ಕಾನೂನೊಂದು ಇದೆ ಎನ್ನುವ ವಿಚಾರವೆ ಬಹಳಷ್ಟು ಮಂದಿಯ ಅರಿವಿನಲ್ಲಿ ಇಲ್ಲವೆಂದು ವಿಷಾಧಿಸಿ, ಈ ಕಾನೂನು ರೋಗಕ್ಕೆ ಒಳಗಾದ ಮಂದಿಗೆ ಅಗತ್ಯ ಸೌಲಭ್ಯ , ಸಮಾನತೆಯ ಬದುಕನ್ನು ಕಲ್ಪಿಸಿಕೊಡಲು ಸಹಕಾರಿಯಾಗಿದ್ದು, ಇದರ ಪರಿಣಾಮಕಾರಿ ಅನುಷ್ಟಾನವಾಗಬೇಕಿದೆ. ಕಾನೂನಿನಡಿ ಹೆಚ್‍ಐವಿ ನಿಯಂತ್ರಣ, ರೋಗ ಬಾಧಿತರಿಗೆ ಪುನರ್ವಸತಿ, ಅಗತ್ಯ ಚಿಕಿತ್ಸೆ, ರೋಗಬಾಧಿತರ ಹಕ್ಕುಗಳ ಸಂರಕ್ಷಣೆಯನ್ನು ಪ್ರತಿಪಾದಿಸಲಾಗಿದೆ. ಹೆಚ್‍ಐವಿ ಮತ್ತು ಏಡ್ಸ್ ಬಾಧಿತರನ್ನು ಕೀಳಾಗಿ, ಅಸಮಾನತೆಯಿಂದ ಕಾಣುವಂತಹವರಿಗೆ 1 ಲಕ್ಷ ರೂ. ದಂಡ, 3 ವರ್ಷಗಳ ಜೈಲುವಾಸದ ಕಠಿಣ ಶಿಕ್ಷೆಯನ್ನು ನೂತನ ಕಾನೂನಿನಲ್ಲಿ ತಿಳಿಸಲಾಗಿದೆಯೆಂದು ಮಾಹಿತಿ ನೀಡಿದರು.

ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಮಾತನಾಡಿ, ಹೆಚ್‍ಐವಿ ಮತ್ತು ಏಡ್ಸ್ ಬಾಧಿತರಿಗೆ ಸರ್ಕಾರದಿಂದ ಸಾಕಷ್ಟು ಸೌಲಭ್ಯಗಳಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿ, ರೋಗ ಬಾಧಿತರಿಗೆ ಬಿಪಿಎಲ್ ಕಾರ್ಡ್ ಸೌಲಭ್ಯ, ಆರೋಗ್ಯ ತಪಾಸಣೆ, ವಸತಿ ಯೋಜನೆ ಸೌಲಭ್ಯ, ಸಾಲ ಸೌಲಭ್ಯ, ವಿವಿಧ ವಿಷಯಗಳ ತರಬೇತಿ ಕಾರ್ಯಗಳು ಇರುವುದಾಗಿ ಮಾಹಿತಿ ನೀಡಿದರು.

ಕೈಹಿಡಿದು ಮುನ್ನಡೆಸಿ- ಪುಟಾಣಿ ಮಕ್ಕಳೊಂದಿಗೆ ದಶಮಾನೋತ್ಸವ ಪ್ರಯುಕ್ತ ಕೇಕ್ ಕತ್ತರಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಹೆಚ್‍ಐವಿ ಮತ್ತು ಏಡ್ಸ್ ರೋಗ ಬಾಧಿತರನ್ನೆ ಎಂದಿಗೂ ಕಡೆಗಣಿಸದಿರಿ. ಸಮಾಜದ ಪ್ರತಿಯೊಬ್ಬರು ನೊಂದ ಜೀವಗಳಿಗೆ ಸ್ಥೈರ್ಯವನ್ನು ತುಂಬಿ ಕೈಹಿಡಿದು ಮುನ್ನಡೆಸುವುದು ಅತ್ಯವಶ್ಯವೆಂದರು.

ಸೌಲಭ್ಯ ವಿತರಣೆ- ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಫಲಾನುಭವಿಗಳಿಗೆ ಪೌಷ್ಠಿಕ ಆಹಾರ ಮತ್ತು ಕಂಬಳಿಯನ್ನು ಒಳಗೊಂಡ ಕಿಟ್‍ಗಳನ್ನು ವಿತರಿಸಿ ಮಾತನಾಡಿ,  ನೊಂದವರ ನೆಮ್ಮದಿಯ ಬದುಕಿಗೆ ಸಮಾಜದಿಂದ ಏನೆಲ್ಲ ಕಾರ್ಯಗಳನ್ನು ಮಾಡಬೇಕೋ ಅವುಗಳನ್ನೆಲ್ಲ ಎಲ್ಲರೂ ಒಗ್ಗೂಡಿ ನಡೆಸುವಂತಾಗಲಿ. ರೋಗಬಾಧಿತರು ಧೈರ್ಯಗುಂದದೆ ಬದುಕುವ ಸಾಮಥ್ರ್ಯವನ್ನು ಮೈಗೂಡಿಸಿಕೊಳ್ಳುವಂತೆ ಕಿವಿಮಾತುಗಳನ್ನಾಡಿದರು.

ಸಭಾಧ್ಯಕ್ಷತೆ ವಹಿಸಿದ್ದ ಮೈಸೂರು ಓಡಿಪಿ ಸಂಸ್ಥೆಯ ನಿರ್ದೇಶಕರಾದ ಸ್ವಾನಿ ಡಿ ಅಲ್ಮೆಡಾ ಮಾತನಾಡಿ, ಸಮಾಜದಲ್ಲಿ ನೊಂದವರನ್ನು ಪ್ರೀತಿಸಿ ಸಲಹುವ ಹೃದಯವಂತಿಕೆ ಇಂದಿಗೂ ಇದ್ದು, ಸ್ನೇಹಾಶ್ರಯ ಸಮಿತಿಯ ಕಾರ್ಯ ಶ್ಲಾಘನೀಯ. ರೋಗ ಬಾಧಿತರಲ್ಲಿ ತಾನು ಯಾರಿಗೂ ಕಡಿಮೆ ಇಲ್ಲ ಎನ್ನುವ ಮನೋಭಾವನೆ ಇರಬೇಕು ಮತ್ತು ಇಂತಹ ಆತ್ಮಸ್ಥೈರ್ಯ ತುಂಬುವ ಕಾರ್ಯವನ್ನು ಸಮಾಜ ಮಾಡಬೇಕೆಂದರು.

ಸನ್ಮಾನ-ಸ್ನೇಹಾಶ್ರಯ ಸಮಿತಿ ಕಾರ್ಯಾಧ್ಯಕ್ಷರಾದ ಕೆ.ಟಿ. ಬೇಬಿ ಮ್ಯಾಥ್ಯು ಅವರನ್ನು ಇದೇ ಸಂದರ್ಭ ಅತಿಥಿ ಗಣ್ಯರು ಸನ್ಮಾನಿಸಿ ಗೌರವಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಮುಖ್ಯಸ್ಥರಾದ ಡಾ. ಶಿವ ಕುಮಾರ್, ಜಿಲ್ಲಾ ಮೇಲ್ವಿಚಾರಕರಾದ ಸುನೀತ ಮಾತನಾಡಿದರು. ಬೇಬಿ ಮ್ಯಾಥ್ಯು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಲ್ಲೇಸ್ವಾಮಿ, ಲಯನೆಸ್ ಅಧ್ಯಕ್ಷರಾದ ಕನ್ನಂಡ ಕವಿತಾ, ಲಯನ್ ಮಧುಕರ್, ವಕೀಲರಾದ ಪವನ್, ಅಂಬೆಕಲ್ ನವೀನ್ ಮೊದಲಾದ ಗಣ್ಯರು ಹಾಜರಿದ್ದರು. ಸ್ನೇಹಾಶ್ರಯ ಸಮಿತಿ ಪ್ರಧಾನ ಕಾರ್ಯದರ್ಶಿ ಜಾಯ್ಸ್ ಮೆನೇಜಸ್ ಸ್ವಾಗತಿಸಿ, ಜಯಪ್ಪ  ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X