Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಳುಭಾಷಿಕರಿಗೆ ಅವಮಾನ : ಗಡಿಪಾರಿಗೆ...

ತುಳುಭಾಷಿಕರಿಗೆ ಅವಮಾನ : ಗಡಿಪಾರಿಗೆ ತುಳುವೆರ ಜನಪದ ಕೂಟ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ27 Jan 2018 11:30 PM IST
share
ತುಳುಭಾಷಿಕರಿಗೆ ಅವಮಾನ : ಗಡಿಪಾರಿಗೆ ತುಳುವೆರ ಜನಪದ ಕೂಟ ಒತ್ತಾಯ

ಮಡಿಕೇರಿ,ಜ.27:ತುಳುಭಾಷೆ ಮತ್ತು ಸಮುದಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೆಟ್ಟ ರೀತಿಯಲ್ಲಿ ಪ್ರತಿಬಿಂಬಿಸಿ ಹೇಳಿಕೆಗಳನ್ನು ಹಾಕಿರುವ ಬೆಂಗಳೂರಿನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯದರ್ಶಿ ಎಂದು ಹೇಳಿಕೊಂಡಿರುವ ಜಾನ್ ಧೋರಣೆಯನ್ನು ಖಂಡಿಸುವುದಾಗಿ ತಿಳಿಸಿರುವ ತುಳುವೆರ ಜನಪದ ಕೂಟ, ಆತನನ್ನು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ, ತುಳು ಭಾಷೆ ಮತ್ತು ಸಮುದಾಯವನ್ನು ಕೀಳಾಗಿ ಸಾಮಾಜಿಕ ಜಾಲತಾಣದ ಮೂಲಕ ಪ್ರಚಾರ ಮಾಡಿರುವ ವ್ಯಕ್ತಿಯ ಗಡಿಪಾರಿಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಜ.29 ರಂದು ಮನವಿ ಸಲ್ಲಿಸುವುದಾಗಿ ತಿಳಿಸಿದರು.

ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ಭಾಷೆಯೂ ಒಂದಾಗಿದ್ದು, ಇದರ ಸಾಹಿತ್ಯ ಸಂಸ್ಕೃತಿ ಪರಂಪರೆಗಳ ಹರವು ಅತ್ಯಂತ ವಿಶಾಲವಾದದ್ದು. ಈ ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಒಳಪಡಿಸುವ ಪ್ರಯತ್ನಗಳು ನಡೆಯುತ್ತಿದೆ. ಇದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಹೆಗಡೆಯವರು ಪರಿಶ್ರಮಿಸುತ್ತಿದ್ದಾರೆ. ಇಂತಹ ಭಾಷೆಯ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿರುವುದು ತುಳು ಭಾಷಿಕ ಸಮುದಾಯಗಳಿಗೆ ನೋವನ್ನು ಉಂಟು ಮಾಡಿರುವುದಾಗಿ ರವಿ ತಿಳಿಸಿದರು.

ರಾಜ್ಯಕ್ಕೆ ಒಳಿತನ್ನು ಉಂಟುಮಾಡುವ ಕೆಲಸವನ್ನಷ್ಟೆ ಕನ್ನಡ ಪರ ಸಂಘಟನೆಗಳು ಮಾಡಲಿ ಎಂದು ಮನವಿ ಮಾಡಿಕೊಂಡ ಅವರು ಇದೇ ರೀತಿ ಕೆಲವು ಸಮಯಗಳ ಹಿಂದೆ ತುಳು ಸಮುದಾಯದ ಆರಾಧ್ಯ ದೈವವಾದ ಸ್ವಾಮಿ ಕೊರಗಜ್ಜನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಘಟನೆ ನಡೆದಿದೆ. ಈ ರೀತಿ ಭಾಷೆ-ಭಾಷೆಗಳ ನಡುವೆ ಗೊಂದಲವನ್ನು ಸೃಷ್ಟಿಸಿ ಹಾದಿ ತಪ್ಪಿಸುವ ಕೆಲಸವನ್ನು ಯಾರೂ ಮಾಡಬಾರದೆಂದರು.

ರಾಜ್ಯದಲ್ಲಿ ತನ್ನದೇ ಆದ ವಿಶೇಷ ಮತ್ತು ವೈಶಿಷ್ಟ್ಯಪೂರ್ಣ ಸಂಸ್ಕೃತಿಯನ್ನು ಹೊಂದಿರುವ ತುಳು ಭಾಷಿಕರು ರಾಜ್ಯದಲ್ಲಿ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿ ನೆಲೆಸಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ತುಳುಭಾಷಿಕರ ಕೊಡುಗೆ ಅಪಾರವಾಗಿದ್ದು, ಜನರ ಭಾವನೆಗಳಿಗೆ ದಕ್ಕೆ ಉಂಟು ಮಾಡುವ ಕಾರ್ಯವನ್ನು ಯಾರೇ ಮಾಡಿದರು ಶಿಕ್ಷೆಗೆ ಗುರಿ ಪಡಿಸಬೇಕೆಂದು ರವಿ ಒತ್ತಾಯಿಸಿದರು. 

ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಉಪಾಧ್ಯಕ್ಷರಾದ ಬಿ.ಡಿ.ನಾರಾಯಣ್ ರೈ,  ಜಿಲ್ಲಾ ಸಲಹೆಗಾರರಾದ ಎಂ.ಡಿ. ನಾಣಯ್ಯ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಪ್ರಭು ರೈ, ಮಡಿಕೇರಿ ತಾಲ್ಲೂಕು ನಿದೇರ್ಶಕರಾದ ಬಿ.ಎಸ್.ಆನಂದ್ ಹಾಗೂ ಮಡಿಕೇರಿ ನಗರಾಧ್ಯಕ್ಷರಾದ ವಿಜಯಲಕ್ಷ್ಮಿ ರವಿ ಶೆಟ್ಟಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X