Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೊಗವೀರರನ್ನು ಎಸ್ಟಿಗೆ ಸೇರ್ಪಡೆಗೊಳಿಸುವ...

ಮೊಗವೀರರನ್ನು ಎಸ್ಟಿಗೆ ಸೇರ್ಪಡೆಗೊಳಿಸುವ ವಿಚಾರ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಾಸ್ತಾಪಿಸಿ: ಜಿ.ಶಂಕರ್

ವಾರ್ತಾಭಾರತಿವಾರ್ತಾಭಾರತಿ28 Jan 2018 6:09 PM IST
share
ಮೊಗವೀರರನ್ನು ಎಸ್ಟಿಗೆ ಸೇರ್ಪಡೆಗೊಳಿಸುವ ವಿಚಾರ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಾಸ್ತಾಪಿಸಿ: ಜಿ.ಶಂಕರ್

ಉಡುಪಿ, ಜ.28: ರಾಜ್ಯದ 39 ಉಪಜಾತಿಗಳನ್ನೊಳಗೊಂಡ ಮೊಗವೀರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಚಾರವನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಈ ಬಾರಿಯ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಬೇಕು. ರಾಜಕೀಯ ಪಕ್ಷಗಳು ಕೇವಲ ಭಾಷಣ ಮಾಡಿ ನಮ್ಮನ್ನು ಮರಳು ಮಾಡುವ ಕೆಲಸ ಮಾಡಬಾರದು ಎಂದು ಉಡುಪಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ.ಜಿ.ಶಂಕರ್ ಹೇಳಿದ್ದಾರೆ.

ಅಂಬಲಪಾಡಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಹಾಗೂ ಜಿಲ್ಲಾ ಮೊಗವೀರ ಯುವ ಸಂಘಟನೆಯ ನೇತೃತ್ವದಲ್ಲಿ ರವಿವಾರ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ಆಯೋಜಿಸಲಾದ ಗುರಿಕಾರರ ಸಮಾವೇಶ ಮತ್ತು ಮೊಗವೀರ ಯುವ ಸಂಘಟನೆ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಕುರಿತ ಪ್ರಸ್ತಾವನೆಯನ್ನು ರಾಜ್ಯ ಸರಕಾರ ಈಗಾಗಲೇ ಕೇಂದ್ರ ಸರಕಾರಕ್ಕೆ ಸಲ್ಲಿಸಿದ್ದು, ಈ ನಿಟ್ಟಿನಲ್ಲಿ ಬಿಜೆಪಿಯ ಮುಖಂಡರು ಕೇಂದ್ರ ಸರಕಾರಕ್ಕೆ ಒತ್ತಡ ತರುವ ಕೆಲಸ ಮಾಡಬೇಕು. ಈ ಸಂಬಂಧ ಎಲ್ಲ ರಾಜಕೀಯ ಪಕ್ಷಗಳ ಜನ ಪ್ರತಿನಿಧಿಗಳು ಮುತುವರ್ಜಿ ವಹಿಸಬೇಕು. ಇದರಿಂದ ಸಮುದಾಯದ ಯುವ ಜನತೆಯ ಶಿಕ್ಷಣ ಹಾಗೂ ಉದ್ಯೋಗಗಳಿಗೆ ಸಹಾಯವಾಗಲಿದೆ ಎಂದರು.

ಕಾರವಾರದಿಂದ ಉಪ್ಪಳದವೆಗಿನ ಕರಾವಳಿ ಕರ್ನಾಟಕದಲ್ಲಿ ಸಮಗ್ರ ಮೀನು ಗಾರಿಕಾ ನೀತಿ ಜಾರಿ ಮಾಡುವ ಅಗತ್ಯವಿದ್ದು, ಈ ಸಂಬಂಧ ಮಹಾಜನ ಸಂಘ ಹಾಗೂ ಮೊಗವೀರ ಸಂಘಟನೆಗಳು ಚರ್ಚಿಸಿ ಮನವಿ ತಯಾರಿಸಿದರೆ ಈ ಬಾರಿಯ ಬಜೆಟ್‌ನಲ್ಲಿ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗುವುದು ಎಂದು ಅವರು ಹೇಳಿದರು.

ಮೊಗವೀರ ಯುವ ಸಂಘಟನೆ ಈಗಾಗಲೇ ಒಂದು ಲಕ್ಷ ಯುನಿಟ್ ರಕ್ತ ವನ್ನು ಸಂಗ್ರಹಿಸಿದ್ದು, ಮುಂದಿನ ದಿನಗಳಲ್ಲಿ ಅಂಗಾಂಗ ದಾನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಿದೆ. ಅಪಘಾತದ ಸಂದರ್ಭದಲ್ಲಿ ಗಾಯಾಳು ಗಳಿಗೆ ಸ್ಪಂದಿಸುವ ಬಗ್ಗೆ ಸಂಘಟನೆ ವತಿಯಿಂದ ಬೈಂದೂರಿನಿಂದ ಹೆಜಮಾಡಿ ವರೆಗೆ ಪ್ರಾತ್ಯಕ್ಷಿಕೆಗಳನ್ನು ನಡೆಸಿ ಜನರಲ್ಲಿ ಅರಿವು ಮೂಡಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.

ಮೊಗವೀರ ಸಮಾಜದ ಕೂಡುಕಟ್ಟಿನ ಎಲ್ಲ ನೀತಿ ನಿಯಮಗಳನ್ನು ಪಾಲಿಸು ತ್ತಿರುವ ಬಗ್ವಾಡಿ ಹೋಬಳಿಯ ಬೀಜಾಡಿ ಕೂಡಿಗೆಯ ಬಸವ ಗುರಿಕಾರ, ಬಾರಕೂರು ಹೋಬಳಿಯ ಬಜೆ ಮೇಲ್ಸಾಲು ಮೊಗವೀರ ಗ್ರಾಮ ಸಭಾ, ಉಚ್ಚಿಲ- ಮಂಗಳೂರು ಹೋಬಳಿಯ ಜನಾರ್ದನ ಗುರಿಕಾರ ಅವರನ್ನು ಸನ್ಮಾನಿಸಲಾಯಿತು.

ಮಂದಾರ್ತಿಯ ಅಕ್ಕು ಮರಕಾಲ್ತಿ, ಕೋಟ ನಾಗು ಮರಕಾಲ್ತಿ, ಕುಂದಾಪುರ ನಾಗಮ್ಮ, ಚಂದು ಕೋಟೇಶ್ವರ, ವೆಂಕಮ್ಮ ಬೈಂದೂರು, ಸುಂದರಿ ಬಂಗೇರ ಉದ್ಯಾವರ, ಗಿರಿಜಾ ಮೈಂದನ್ ಉಪ್ಪೂರು, ಕಮಲಾ ಕುಂದರ್ ಉಪ್ಪಿನ ಕೋಟೆ, ಲಲಿತಾ ಸಾಲ್ಯಾನ್ ಹೊಸಬೆಟ್ಟು, ಯಶೋದಾ ಸುವರ್ಣ ಬೇಳೂರು ಅವರಿಗೆ ತಲಾ 25 ಸಾವಿರ ರೂ. ನಗದು ಒಳಗೊಂಡ ಮತ್ಸೃಜ್ಯೋತಿ ಗೌರವ ಪುರಸ್ಕಾರವನ್ನು ಈ ಸಂದರ್ಭದಲ್ಲಿ ನೀಡಲಾಯಿತು.

ಮೊಗವೀರ ಯುವ ಸಂಘಟನೆಯ ನಿರ್ಗಮನ ಅಧ್ಯಕ್ಷ ಗಣೇಶ್ ಕಾಂಚನ್ ಅವರು ನೂತನ ಅಧ್ಯಕ್ಷ ವಿನಯ್ ಕರ್ಕೇರಾ ಮಲ್ಪೆಅವರಿಗೆ ಅಧಿಕಾರ ಹಸ್ತಾಂತರಿಸಿದರು. ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಗಂಗಾಧರ ಎಚ್.ಕರ್ಕೇರಾ, ಬಗ್ವಾಡಿ ಹೋಬಳಿ ಮೊಗವೀರ ಮಹಾಜನ ಸಂಘದ ಶಾಖಾ ಧ್ಯಕ್ಷ ಕೆ.ಕೆ.ಕಾಂಚನ್, ಬೆಣ್ಣೆಕುದ್ರು ಮೊಗವೀರ ಸಂಯುಕ್ತ ಸಭಾದ ಅಧ್ಯಕ್ಷ ವಿಶ್ವನಾಥ ಮಾಸ್ತರ್ ಕೂರಾಡಿ, ಉದ್ಯಮಿ ಶಿವಪ್ಪಅಮೀನ್ ಉಪಸ್ಥಿತರಿದ್ದರು.

ಸಂಘಟನೆಯ ಮಾಜಿ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಸ್ವಾಗತಿಸಿದರು. ಶಂಕರ ಸಾಲ್ಯಾನ್ ವಂದಿಸಿದರು. ಅಶೋಕ್ ತೆಕ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X