Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯು.ಭೂಪತಿಯವರಿಗೆ ವಕೀಲ ವೃತ್ತಿ...

ಯು.ಭೂಪತಿಯವರಿಗೆ ವಕೀಲ ವೃತ್ತಿ ಮುಂದುವರೆಸಿ ಎಂದಿದ್ದೆ: ಪ್ರೊ.ರವಿವರ್ಮ ಕುಮಾರ್

ವಾರ್ತಾಭಾರತಿವಾರ್ತಾಭಾರತಿ28 Jan 2018 6:10 PM IST
share
ಯು.ಭೂಪತಿಯವರಿಗೆ ವಕೀಲ ವೃತ್ತಿ ಮುಂದುವರೆಸಿ ಎಂದಿದ್ದೆ: ಪ್ರೊ.ರವಿವರ್ಮ ಕುಮಾರ್

ಬೆಂಗಳೂರು, ಜ.28: ಮಾಜಿ ಶಾಸಕ ಯು.ಭೂಪತಿ ಅವರಿಗೆ ರಾಜಕೀಯ ಬಿಟ್ಟು, ವಕೀಲ ವೃತ್ತಿ ಮುಂದುವರೆಸಿ ಎಂದು ಪದೇ ಪದೇ ಹೇಳುತ್ತಿದ್ದೆ ಎಂದು ರಾಜ್ಯದ ಮಾಜಿ ಅಡ್ವೋಕೇಟ್ ಜನರಲ್ ಹಾಗೂ ಸಂವಿಧಾನ ತಜ್ಞ ಪ್ರೊ. ರವಿವರ್ಮ ಕುಮಾರ್ ಹೇಳಿದರು.

ರವಿವಾರ ನಗರದ ಅರಮನೆ ರಸ್ತೆಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಯು.ಭೂಪತಿ ಸ್ಮರಣೆ, ಅವರ ಹೆಸರಿನಲ್ಲಿ ಸ್ಮಾರಕ ಟ್ರಸ್ಟ್ ಉದ್ಘಾಟನೆ ಹಾಗೂ ‘ಅಂತಃಕರಣದ ಗಣಿ ಯು.ಭೂಪತಿ’ ಕೃತಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ರಾಜಕೀಯದಲ್ಲಿ ಸಾಮಾಜಿಕ ಹಿನ್ನೆಲೆಯುಳ್ಳವರಿಗೆ, ಜಾತಿಯನ್ನೇ ಬಂಡವಾಳ ಮಾಡಿಕೊಳ್ಳುವ ಶಕ್ತಿ ಇಲ್ಲದವರಿಗೆ ಯಾವ ಪಕ್ಷದಲ್ಲೂ ಸ್ಥಾನ ಇರುವುದಿಲ್ಲ. ನೀವು ಎಷ್ಟೇ ಪ್ರಾಮಾಣಿಕವಾಗಿ ಸಕ್ರಿಯವಾಗಿ ಕೆಲಸ ಮಾಡಿದರೂ ಪ್ರತಿಫಲ ಸಿಗುವುದು ಕಷ್ಟ. ಹೀಗಾಗಿ, ವಕೀಲ ವೃತ್ತಿಯನ್ನು ಮುಂದುವರೆಸಿ ಎಂದು ಯು.ಭೂಪತಿ ಅವರಿಗೆ ಹೇಳಿದ್ದೆ ಎಂದರು.

ಭೂಪತಿ ನನ್ನ ಜತೆಗೆ ವಕೀಲ ವೃತ್ತಿಯ ಸಹದ್ಯೋಗಿಯಾಗಿ ಕೆಲಸ ಮಾಡಿದ್ದರು. ಅವರು ಲೆಕ್ಕಕ್ಕೋಸ್ಕರ ಒಡನಾಡಿಯಾದರೂ ಅವರಿಗೆ ರಾಜಕಾರಣದಲ್ಲೇ ವಿಶೇಷ ಆಸಕ್ತಿ ಇತ್ತು ಎಂದ ಅವರು, ಭೂಪತಿ ಅವರ ನೇತೃತ್ವದಲ್ಲಿ ಮೂರು ಅಂತರ್‌ ರಾಜ್ಯ ಸಾಮಾಜಿಕ ನ್ಯಾಯದ ಪ್ರವಾಸಗಳನ್ನು ಕೈಗೊಂಡಿದ್ದೆವು. ಅಂತಹ ಕ್ರಿಯಾಶೀಲ ವ್ಯಕ್ತಿ ಇಂದು ನಮ್ಮೊಡನೆ ಇಲ್ಲ. ಆದರೆ, ಅವರ ನೆನಪನ್ನು ಇಷ್ಟು ರಚನಾತ್ಮಕವಾಗಿ ಮಾಡಿರುವುದು ಸಂತಸದ ಸಂಗತಿ ಎಂದು ರವಿವರ್ಮ ಕುಮಾರ್ ಹೇಳಿದರು.

ಭೂಪತಿ ಕುರಿತ ಕೃತಿಯಲ್ಲಿ ರಾಜಕಾರಣ, ಅವರ ಹೋರಾಟಗಳನ್ನು ದಾಖಲಿಸಿರುವುದು ರಚನಾತ್ಮಕ ಕೆಲಸ. ಟ್ರಸ್ಟ್ ಪ್ರಾರಂಭಿಸಿರುವುದು ಒಳ್ಳೆಯ ಬೆಳವಣಿಗೆ. ಅವರ ಹೆಸರನ್ನು ನಿರಂತರವಾಗಿ ಜ್ಞಾಪಿಸಿಕೊಳ್ಳುವ ಜತೆಗೆ ಅವರ ಹೆಸರಿನಲ್ಲಿ ನಡೆಯಬೇಕಾದ ಕೆಲಸಗಳನ್ನು ಅನಾವರಣ ಮಾಡಲು ವೇದಿಕೆಯಾಗಿದೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ಗುಂಡೂರಾವ್ ಮಾತನಾಡಿ,ಕೆಪಿಸಿಸಿ ವಕ್ತಾರ, ಮಾಜಿ ಶಾಸಕ ದಿ.ಯು.ಭೂಪತಿ ಅವರು ಸರಳ ವ್ಯಕ್ತಿತ್ವ, ನೇರ ನುಡಿಯ ವ್ಯಕ್ತಿಯಾಗಿದ್ದರು. ಅವರ ಸಿದ್ದಾಂತಗಳು ಬೇರೆಯಾಗಿದ್ದು, ವ್ಯಕ್ತಿತ್ವದ ಬಗ್ಗೆ ಒಬ್ಬರೂ ಪ್ರಶ್ನೆ ಮಾಡುತ್ತಿರಲಿಲ್ಲ ಎಂದು ಹೇಳಿದರು.

ಕೆಪಿಸಿಸಿಗೆ ಸಂಬಂಧಪಟ್ಟಂತೆ ಅವರು ಮಾರ್ಗದರ್ಶಕರಾಗಿದ್ದರು. ಪಕ್ಷವನ್ನು ಗೌರವಿಸುತ್ತಿದ್ದ ಅವರು, ಯಾವುದೇ ತಪ್ಪುಗಳು ಕಂಡುಬಂದಲ್ಲಿ ನೇರವಾಗಿಯೇ ಸಭೆಯಲ್ಲಿಯೇ ಹೇಳುತ್ತಿದ್ದರು. ಸಾಮಾಜಿಕ ಕಳಕಳಿ ಹೊಂದಿದ್ದ ಭೂಪತಿ ಅವರು, ವಿಷಯ ಅಧ್ಯಯನಕ್ಕೆ ಹೆಚ್ಚು ಒತ್ತು ನೀಡುತ್ತಿದ್ದರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಪಿ.ಸಿ.ಆರ್.ಸಿಂಧ್ಯಾ, ವಿಚಾರವಾದಿ ಜಿ. ರಾಮಕೃಷ್ಣ, ಸಿಎಂ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್‌ಮಟ್ಟು, ಇಂದಿರಾ ಕೃಷ್ಣಪ್ಪ, ಮೋಹನ್ ಕೊಂಡಜ್ಜಿ, ಕೆ.ಬಿ.ಶಾಣಪ್ಪ, ಯು.ಭೂಪತಿ ಸ್ಮಾರಕ ಟ್ರಸ್ಟ್ ಅಧ್ಯಕ್ಷೆ ಡಾ. ವಸುಂಧರಾ ಭೂಪತಿ, ಕಾರ್ಯದರ್ಶಿ ಅಭಿಮನ್ಯು ಭೂಪತಿ, ಕೃತಿ ಸಂಪಾದಕ ಚಂದ್ರಕಾಂತ್‌ವಡ್ಡು ಸೇರಿ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X