Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್‌ಟಿಐ ಕಾಯ್ದೆಯಡಿ ಮಾಹಿತಿ ಸಂಗ್ರಹ...

ಆರ್‌ಟಿಐ ಕಾಯ್ದೆಯಡಿ ಮಾಹಿತಿ ಸಂಗ್ರಹ ಸರಕಾರಿ ಪ್ರಾಧಿಕಾರಕ್ಕೆ ಕಡ್ಡಾಯವಲ್ಲ:ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ28 Jan 2018 9:23 PM IST
share
ಆರ್‌ಟಿಐ ಕಾಯ್ದೆಯಡಿ ಮಾಹಿತಿ ಸಂಗ್ರಹ ಸರಕಾರಿ ಪ್ರಾಧಿಕಾರಕ್ಕೆ ಕಡ್ಡಾಯವಲ್ಲ:ಹೈಕೋರ್ಟ್

ಹೊಸದಿಲ್ಲಿ,ಜ.28: ಕೆಲವು ಮಾಹಿತಿಗಳನ್ನು ಪಡೆದುಕೊಳ್ಳಲು ಸರಕಾರಿ ಪ್ರಾಧಿಕಾರಗಳಿಗೆ ಅಧಿಕಾರವಿದೆಯಾದರೂ, ಆರ್‌ಟಿಐ ಕಾಯ್ದೆಯಡಿ ಅರ್ಜಿದಾರನಿಗೆ ಮಾಹಿತಿಗಳನ್ನು ಒದಗಿಸಲು ಅದು ಈ ಅಧಿಕಾರವನ್ನು ಬಳಸುವುದು ಕಡ್ಡಾಯವಲ್ಲ ಎಂದು ದಿಲ್ಲಿ ಉಚ್ಚ ನ್ಯಾಯಾಲಯವು ಎತ್ತಿ ಹಿಡಿದಿದೆ.

ಯಾವುದೇ ಸರಕಾರಿ ಪ್ರಾಧಿಕಾರವು ತಾನು ಹೊಂದಿರುವ ಮಾಹಿತಿಗಳನ್ನಷ್ಟೇ ಆರ್‌ಟಿಐ ಅರ್ಜಿದಾರನಿಗೆ ಒದಗಿಸಬಹುದಾಗಿದೆ. ತನ್ನಲ್ಲಿಲ್ಲದ ಮಾಹಿತಿಯನ್ನು ಬೇರೆ ಕಡೆಗಳಿಂದ ಪಡೆದುಕೊಳ್ಳುವ ಅಧಿಕಾರ ಅದಕ್ಕಿದೆಯಾದರೂ ಕಡ್ಡಾಯವಾಗಿ ಅಂತಹ ಮಾಹಿತಿಯನ್ನು ಪಡೆದುಕೊಂಡು ತನಗೆ ನೀಡುವಂತೆ ಅರ್ಜಿದಾರನು ಕೇಳುವಂತಿಲ್ಲ ಎಂದು ನ್ಯಾ.ವಿಭು ಬಖ್ರು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತನ್ನ ನೌಕರರ ಸೇವಾ ನಿಬಂಧನೆಗಳು ಮತ್ತು ಷರತ್ತುಗಳಿಗೆ ಸಂಬಂಧಿಸಿದಂತೆ ಖಾಸಗಿ ಅನುದಾನರಹಿತ ಶಾಲೆಯೊಂದರಿಂದ ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳುವಂತೆ ದಿಲ್ಲಿ ಸರಕಾರಕ್ಕೆ ನಿರ್ದೇಶ ನೀಡಲು ನಿರಾಕರಿಸಿದ್ದ ಕೇಂದ್ರ ಮಾಹಿತಿ ಆಯೋಗ(ಸಿಐಸಿ)ದ ಆದೇಶವನ್ನು ಅದೇ ಶಾಲೆಯ ಉದ್ಯೋಗಿಯಾಗಿರುವ ಆರ್‌ಟಿಐ ಅರ್ಜಿದಾರ ಪ್ರಶ್ನಿಸಿದ್ದರು.

ದಿಲ್ಲಿ ಶಾಲಾ ಶಿಕ್ಷಣ ನಿಯಮಗಳು,1973ರಡಿ ಶಾಲೆಯು ಸಲ್ಲಿಸಿರುವ ತನ್ನ ವ್ಯವಹಾರಗಳ ಆಡಿಟ್ ವರದಿಯನ್ನು ತನಗೆ ಒದಗಿಸುವಂತೆ ದಿಲ್ಲಿ ಸರಕಾರಕ್ಕೆ ನಿರ್ದೇಶನ ನೀಡುವಂತೆ ಅರ್ಜಿದಾರ ಮಾಡಿಕೊಂಡಿದ್ದ ಕೋರಿಕೆಯನ್ನು ಸಿಐಸಿ ನಿರಾಕರಿಸಿತ್ತು.

ಸಿಐಸಿಯ ಆದೇಶವನ್ನು ಎತ್ತಿಹಿಡಿದ ನ್ಯಾಯಲಯವು ಖಾಸಗಿ ಅನುದಾನರಹಿತ ಶಾಲೆಗಳು ದಿಲ್ಲಿ ಸರಕಾರದ ಪರಿಶೀಲನೆಗೆ ಮುಕ್ತವಾಗಿವೆ, ಆದರೆ ಸಾರ್ವಜನಿಕರಿಗಲ್ಲ ಎಂದು ಸ್ಪಷ್ಟಪಡಿಸಿತು.

ಆದರೆ ಖಾಸಗಿ ಶಾಲೆಯ ವ್ಯವಹಾರಕ್ಕೆ ಸಂಬಂಧಿಸಿದ ಆಡಿಟ್ ವರದಿಯನ್ನು ಹೊರತುಪಡಿಸಿ ಇತರ ಯಾವುದೇ ಮಾಹಿತಿ ದಿಲ್ಲಿ ಸರಕಾರದ ಬಳಿಯಿದ್ದರೆ ಆರ್‌ಟಿಐ ಅರ್ಜಿದಾರನು ಅದಕ್ಕಾಗಿ ಕೋರಿಕೊಳ್ಳಬಹುದು ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X