Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಂಜಾಬ್ ಪಾಲಾದ ಕ್ರಿಸ್ ಗೇಲ್

ಪಂಜಾಬ್ ಪಾಲಾದ ಕ್ರಿಸ್ ಗೇಲ್

ವಾರ್ತಾಭಾರತಿವಾರ್ತಾಭಾರತಿ28 Jan 2018 11:37 PM IST
share
ಪಂಜಾಬ್ ಪಾಲಾದ ಕ್ರಿಸ್ ಗೇಲ್

ವೆಸ್ಟ್‌ಇಂಡೀಸ್ ಸೂಪರ್‌ಸ್ಟಾರ್ ಕ್ರಿಸ್ ಗೇಲ್‌ರನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಮೂಲ ಬೆಲೆ 2 ಕೋ.ರೂ.ಗೆ ಖರೀದಿಸಿದೆ. ಹರಾಜಿನಲ್ಲಿ ಗೇಲ್ ಹೆಸರು ಎರಡು ಬಾರಿ ಪ್ರಸ್ತಾಪವಾದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಸಹಿತ ಯಾವ ತಂಡಗಳು ಅವರನ್ನು ಖರೀದಿಸಲು ಮುಂದಾಗಲಿಲ್ಲ. ಮರು ಕರೆ ನೀಡಬಯಸುವ 15 ಆಟಗಾರರ ಪಟ್ಟಿ ಸಲ್ಲಿಸುವಂತೆ ಹರಾಜುಗಾರ ರಿಚರ್ಡ್ ಮಿಡ್ಲೆ ಎಲ್ಲ ಫ್ರಾಂಚೈಸಿಗಳಿಗೆ ಸೂಚಿಸಿದರು. 15 ಆಟಗಾರರ ಪಟ್ಟಿಯಲ್ಲಿ ಗೇಲ್ ಹೆಸರಿತ್ತು. ಅಂತಿಮವಾಗಿ ಪಂಜಾಬ್ ತಂಡ ಗೇಲ್‌ರನ್ನು ಖರೀದಿಸಿತು.

ಗೇಲ್ ಇತ್ತೀಚೆಗೆ ಕೊನೆಗೊಂಡ ಬಾಂಗ್ಲಾದೇಶ ಪ್ರೀಮಿಯರ್ ಲೀಗ್‌ನಲ್ಲಿ ಕೇವಲ 69 ಎಸೆತಗಳಲ್ಲಿ ಔಟಾಗದೆ 168 ರನ್ ಗಳಿಸಿದ್ದರು. ಗೇಲ್ 2008ರಲ್ಲಿ ಹೊಸದಿಲ್ಲಿಯಲ್ಲಿ ಕೋಲ್ಕತಾ ಪರ ಡೆಲ್ಲಿ ವಿರುದ್ಧ ಚೊಚ್ಚಲ ಐಪಿಎಲ್ ಆಡಿದ್ದರು.

►ಮೂಲ ಬೆಲೆಗಿಂತ 31 ಪಟ್ಟು ಹೆಚ್ಚು ಮೊತ್ತಕ್ಕೆ ಹರಾಜಾದ ಗೌತಮ್

 ಕರ್ನಾಟಕದ ಆಲ್‌ರೌಂಡರ್ ಕೃಷ್ಣಪ್ಪ ಗೌತಮ್ 2ನೇ ದಿನದ ಹರಾಜಿನಲ್ಲಿ ಗಮನ ಸೆಳೆದಿದ್ದು 6.20 ಕೋ.ರೂ.ಗೆ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಸೇರ್ಪಡೆಯಾದರು. 20 ಲಕ್ಷ ರೂ. ಮೂಲಬೆಲೆ ಹೊಂದಿದ್ದ ಗೌತಮ್ 31 ಪಟ್ಟು ಹೆಚ್ಚು ಬೆಲೆಗೆ ಹರಾಜಾಗಿದ್ದಾರೆ.

ಗೌತಮ್‌ರನ್ನು ಕಳೆದ ವರ್ಷ ಮುಂಬೈ ತಂಡ 2 ಕೋ.ರೂ.ಗೆ ಖರೀದಿಸಿತ್ತು. ಆದರೆ, ಅವರಿಗೆ ಆಡಲು ಅವಕಾಶ ಸಿಗಲಿಲ್ಲ. ಈತನಕ 27 ಟ್ವೆಂಟಿ-20 ಆಡಿರುವ ಗೌತಮ್ 310 ರನ್ ಹಾಗೂ 20 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇತ್ತೀಚೆಗೆ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್‌ನಲ್ಲಿ ಮುಂಬೈ ವಿರುದ್ಧ ಆರು ವಿಕೆಟ್ ಗೊಂಚಲು ಕಬಳಿಸಿ ಕರ್ನಾಟಕಕ್ಕೆ ಗೆಲುವು ತಂದಿದ್ದರು.

ಆಸ್ಟ್ರೇಲಿಯದ ವೇಗದ ಬೌಲರ್ ಆ್ಯಂಡ್ರೂ ಟೈ 7.2 ಕೋ.ರೂ.ಗೆ ಪಂಜಾಬ್ ತಂಡಕ್ಕೆ ಸೇರ್ಪಡೆಯಾದರು.

ಭಾರತದ ಆರಂಭಿಕ ಆಟಗಾರ ಎಂ.ವಿಜಯ್(2 ಕೋ.ರೂ. ಚೆನ್ನೈ), ವಿಕೆಟ್‌ಕೀಪರ್ ಪಾರ್ಥಿವ್ ಪಟೇಲ್(1.7 ಕೋ.ರೂ., ಆರ್‌ಸಿಬಿ), ಆಸ್ಟ್ರೇಲಿಯದ ವೇಗಿ ಮಿಚೆಲ್ ಜಾನ್ಸನ್(2 ಕೋ.ರೂ., ಕೆಕೆಆರ್) ಎರಡನೇ ಸುತ್ತಿನಲ್ಲಿ ವಿವಿಧ ಫ್ರಾಂಚೈಸಿಗಳಿಂದ ಖರೀದಿಸಲ್ಪಟ್ಟರು.

►ಅಫ್ಘಾನಿಸ್ತಾನದ ನಾಲ್ವರಿಗೆ ಅವಕಾಶ: ಕಳೆದ ವರ್ಷ ಅಫ್ಘಾನಿಸ್ತಾನದ ಇಬ್ಬರು ಆಟಗಾರರು ಐಪಿಎಲ್‌ನಲ್ಲಿ ಅವಕಾಶ ಪಡೆದಿದ್ದರು. ಈ ಬಾರಿ ನಾಲ್ವರು ಅವಕಾಶ ಪಡೆದಿದ್ದಾರೆ. ಅವರುಗಳೆಂದರೆ: ಮುಹಮ್ಮದ್ ನಬಿ(1 ಕೋ.ರೂ. ಹೈದರಾಬಾದ್), ಅಂಡರ್-19 ವಿಶ್ವಕಪ್‌ನಲ್ಲಿ ಆಡುತ್ತಿರುವ ಮುಜೀಬ್ ಝದ್ರಾನ್, ಝಹೀರ್ ಖಾನ್ ಹಾಗೂ ರಶೀದ್ ಖಾನ್.

ನೇಪಾಳ ಆಟಗಾರ ಸಂದೀಪ್ ಪ್ರವೇಶ !

ನೇಪಾಳದ ಲೆಗ್ ಸ್ಪಿನ್ನರ್ ಸಂದೀಪ್ ಲಮಿಚ್ಚಾನೆ 2018ರ ಐಪಿಎಲ್ ಹರಾಜಿನಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಮೂಲ ಬೆಲೆ 20 ಲಕ್ಷ ರೂ.ಗೆ ಬಿಕರಿಯಾದರು. ಸಂದೀಪ್ ಹರಾಜಿನಲ್ಲಿ ಮಾರಾಟಗೊಂಡ ನೇಪಾಳದ ಮೊದಲ ಆಟಗಾರ ಎನಿಸಿಕೊಂಡರು. 17ರ ಹರೆಯದ ಸಂದೀಪ್ 2016ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಐಸಿಸಿ ಅಂಡರ್-19 ವಿಶ್ವಕಪ್‌ನಲ್ಲಿ ಐರ್ಲೆಂಡ್‌ನ ವಿರುದ್ಧ ನೇಪಾಳ ಪರ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಬೆಳಕಿಗೆ ಬಂದಿದ್ದರು. ಐರ್ಲೆಂಡ್‌ನ್ನು ಸೋಲಿಸಿದ್ದ ನೇಪಾಳ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿ ಕ್ವಾರ್ಟರ್ ಫೈನಲ್‌ಗೆ ತಲುಪಿತ್ತು. ಟೂರ್ನಿಯಲ್ಲಿ ಒಟ್ಟು 14 ವಿಕೆಟ್‌ಗಳನ್ನು ಕಬಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X